ಕುದುರೆ ಲತೀಫಾಗೆ ಉದ್ದೀಪನ ಮದ್ದು: ಜಾಕಿ ಹೋಕೋರ್ಟ್ ಮೊರೆ
ಬೆಂಗಳೂರು.ಜು.16: ರೇಸ್ ಕುದುರೆ ಕ್ವೀನ್ ಲತೀಫಾಗೆ ಉದ್ದೀಪನ ಮದ್ದು ನೀಡಿದ ಆರೋಪದಡಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ, ಕುದುರೆ ತರಬೇತುದಾರ ನೀಲ್ ದರಾಶ ಹಾಗೂ ಇತರ ನಾಲ್ವರು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಯನ್ನು ಹೈಕೋರ್ಟ್ ಅಂಗೀಕರಿಸಿದೆ.
ಕುದುರೆ ಕ್ವೀನ್ ಲತೀಫಾಗೆ ಉದ್ದೀಪನ ಮದ್ದು ನೀಡಲಾಗಿದೆ ಎಂದು ಅರ್ಜಿದಾರರ ವಿರುದ್ಧ ಸುಳ್ಳು ಆರೋಪ ಹೊರಿಸಲಾಗಿದ್ದು, ಈ ಪ್ರಕರಣದ ಕುರಿತಂತೆ ನಗರದ 1ನೇ ಎಸಿಎಂಎಂ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಮಧ್ಯಂತರ ತಡೆ ನೀಡುವಂತೆ ಅರ್ಜಿದಾರರ ಪರ ವಕೀಲರ ಮನವಿ ಮಾಡಿದರು.
ಮಧ್ಯಂತರ ಆದೇಶದ ಅಗತ್ಯವಿಲ್ಲ. ಅರ್ಜಿಯ ಅಂತಿಮ ವಿಚಾರಣೆ ನಡೆಸಿ ಆದೇಶ ನೀಡಲಾಗುವುದು ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ಜುಲೈ 20ಕ್ಕೆ ಮುಂದೂಡಿತು.ಬೆಂಗಳೂರು ಟರ್ಫ್ ಕ್ಲಬ್ನ(ಬಿಟಿಸಿ) ರೇಸ್ ಕುದುರೆ ಕ್ವೀನ್ ಲತೀಫಾಗೆ ಉದ್ದೀಪನ ಮದ್ದು ನೀಡಿದ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು 61ನೇ ಸೆಷನ್ಸ್ ಕೋರ್ಟ್ಗೆ ಆರೋಪಪಟ್ಟಿ ಸಲ್ಲಿಸಿದ್ದರು.

ನ್ಯಾಯಾಲಯಕ್ಕೆ 600ಕ್ಕೂ ಹೆಚ್ಚು ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದು, ಬಿಟಿಸಿ ಸಿಇಒ ಆಗಿದ್ದ ಎಸ್. ನಿರ್ಮಲ್ ಪ್ರಸಾದ್ ಎ1 ಆರೋಪಿಯಾಗಿದ್ದಾರೆ. ಬಿಟಿಸಿ ಮುಖ್ಯ ಸ್ಟೆಫಂಡರಿ ಸ್ಟೀವರ್ಡ್ ಪ್ರದ್ಯುಮ್ನ ಸಿಂಗ್, ಸ್ಟೀವರ್ಡ್ ಅರ್ಜುನ್ ಸಜನಾನಿ, ಕ್ವೀನ್ ಲತೀಫಾ ಕುದುರೆ ಮಾಲೀಕ ವಿವೇಕ್ ಉಭಯ್ಕರ್, ಕುದುರೆ ತರಬೇತುದಾರ ನೀಲಲ್ ದರಾಶ ಹಾಗೂ ಬಿಟಿಸಿ ಉಪ ಮುಖ್ಯ ಪಶು ವೈದ್ಯಾಧಿಕಾರಿ ಡಾ. ಎಚ್.ಎಸ್. ಮಹೇಶ್ ಕ್ರಮವಾಗಿ 2ರಿಂದ 6 ಆರೋಪಿಗಳಾಗಿದ್ದಾರೆ.
2017ರ ನಾ.5 ರಂದು ನಡೆದಿದ್ದ ರೇಸ್ನಲ್ಲಿ 3 ವರ್ಷದ ಕ್ವೀನ್ ಲತೀಫಾಗೆ ಡ್ರಗ್ಸ್ ಪ್ರೋಕೇನ್ ಕೊಟ್ಟಿದ್ದರಿಂದ ಗೆಲುವು ಸಾಧಿಸಿತ್ತು. ಪರಿಣಾಮ ರೇಸ್ನಲ್ಲಿ 2ಮತ್ತು 3 ನೇ ಕುದುರೆಗಳ ಮೇಲೆ ಬಾಜಿ ಕಟ್ಟಿದ್ದ 73,053 ಜನರಿಗೆ 7.30 ಲಕ್ಷ ರೂ. ವಂಚನೆಯಾಗಿದೆ ಎಂದು ಆರೋಪಿಸಲಾಗಿತ್ತು.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್











Click it and Unblock the Notifications