ಕಿಸ್ ಆಫ್ ಲವ್ನಿಂದ ಹಿಂದೆ ಸರಿದ ರಚಿತಾ ತನೇಜಾ
ಬೆಂಗಳೂರು, ನ. 24: ಕಿಸ್ ಆಫ್ ಲವ್ಗೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆಂದೋಲನದಿಂದ ಆಯೋಜಕಿ, ಸಮಾಜ ಸೇವಕಿ ರಚಿತಾ ತನೇಜಾ ಅವರು ಹಿಂದೆ ಸರಿದಿದ್ದಾರೆ.
ಕಾರಣಾಂತರಗಳಿಂದ ಕಿಸ್ ಆಫ್ ಲವ್ ಆಯೋಜನೆಯಿಂದ ಹಿಂದೆ ಸರಿದಿದ್ದೇನೆ ಎಂದಷ್ಟೇ ರಚಿತಾ ತನೇಜಾ ಸ್ಪಷ್ಟನೆ ನೀಡಿದ್ದಾರೆ. ಆದರೆ, ಅವರಿಗೆ ಈ ಕುರಿತು ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಹಿಂಜರಿದಿದ್ದಾರೆಂದು ತಿಳಿದುಬಂದಿದೆ. [ಕಿಸ್ ಆಫ್ ಲವ್ ವಿರುದ್ಧ ಒನಕೆ ಚಳವಳಿ]
ಆದರೆ, ರಚಿತಾ ತನೇಜಾ ದಿಢೀರ್ ನಿರ್ಧಾರದಿಂದ ಉತ್ಸಾಹಗುಂದದ ಕಾರ್ಯಕರ್ತರು ತಾವೇ ಕಿಸ್ ಆಫ್ ಲವ್ ಆಂದೋಲನ ಆಯೋಜನೆಗೆ ಮುಂದಾಗಿದ್ದಾರೆ. ಮೊದಲು ನಿಗದಿಪಡಿಸಿರುವಂತೆ ನ. 30ರಂದು ಮಧ್ಯಾಹ್ನ 4 ಗಂಟೆಗೆ ಟೌನ್ ಹಾಲ್ನಲ್ಲಿ ಆಂದೋಲನ ನಡೆಸಿಯೇ ಸಿದ್ಧ ಎಂದು ಕಿಸ್ ಆಫ್ ಲವ್ ಕಾರ್ಯಕರ್ತರು ಹೇಳಿಕೊಂಡಿದ್ದಾರೆ. ಅಲ್ಲದೆ, ಫೇಸ್ ಬುಕ್ನಲ್ಲಿ ಕೂಡ ಕಿಸ್ ಆಫ್ ಲವ್ ಕಮ್ಯುನಿಟಿ ಹೆಸರಿನ ಪುಟ ಹಾಗೆಯೇ ಇದೆ. [ಕಿಸ್ ಆಫ್ ಲವ್ ಆಯೋಜನೆ ಗೊಂದಲ]

ದಸಂಸ ವಿರೋಧ: ಕಿಸ್ ಆಫ್ ಲವ್ ಆಂದೋಲನಕ್ಕೆ ದಲಿತ ಸಂಘರ್ಷ ಸಮಿತಿ ಕೂಡ ತೀವ್ರ ವಿರೋಧ ವ್ಯಕ್ತಪಡಿಸಿದೆ. ಆಂದೋಲನ ವಿರೋಧಿಸಿ ಸೋಮವಾರ ಪೊಲೀಸ್ ಠಾಣೆಗೆ ನುಗ್ಗಿದ ಸದಸ್ಯರು, ಇದಕ್ಕೆ ಅನುಮತಿ ನೀಡಬಾರದೆಂದು ಆಗ್ರಹಿಸಿದ್ದಾರೆ.
ಈ ಆಂದೋಲನ ಭಾರತೀಯ ಸಂಸ್ಕೃತಿಗೆ ವಿರುದ್ಧವಾಗಿದ್ದು, ಅತ್ಯಂತ ಅಸಹ್ಯಕರವಾಗಿದೆ. ಇಂತಹ ಆಂದೋಲನದಿಂದ ಯಾವ ಪ್ರಯೋಜನವೂ ಇಲ್ಲ ಎಂದು ದಸಂಸ ಟೀಕಿಸಿದೆ. [ಪ್ರಣವಾನಂದ ಶ್ರೀ ಎಚ್ಚರಿಕೆ]
ರಾಜ್ಯಾದ್ಯಂತ ತೀವ್ರ ವಿರೋಧ: ನೈತಿಕ ಪೊಲೀಸ್ಗಿರಿ ವಿರುದ್ಧ ಕಿಸ್ ಆಫ್ ಲವ್ ಆಂದೋಲನ ಆಯೋಜಿಸುತ್ತಿರುವುದಾಗಿ ಕಮ್ಯುನಿಟಿ ಕಾರ್ಯಕರ್ತರು ಹೇಳಿಕೊಂಡಿದ್ದರು. ಈ ಕುರಿತು ಫೇಸ್ ಬುಕ್ನಲ್ಲಿ 'ಕಿಸ್ ಆಫ್ ಲವ್ ಕಮ್ಯುನಿಟಿ' ಹೆಸರಿನಲ್ಲಿ ಪುಟವೂ ಇತ್ತು. ಆದರೆ, ಆಂದೋಲನಕ್ಕೆ ರಾಜ್ಯದಲ್ಲಿ ಯಾರ ಬೆಂಬಲವೂ ಸಿಕ್ಕಿರಲಿಲ್ಲ.
ಸಾಮಾನ್ಯವಾಗಿ ನೈತಿಕ ಪೊಲೀಸ್ಗಿರಿ ವಿರುದ್ಧದ ಪ್ರತಿಭಟನೆಗೆ ಎಲ್ಲ ರೀತಿಯ ಬೆಂಬಲ ನೀಡುವ ಎಡಪಂಥೀಯರಿಂದಲೂ ವಿರೋಧ ವ್ಯಕ್ತವಾಗಿದೆ. ಕಿಸ್ ಆಫ್ ಲವ್ಗೆ ಅನುಮತಿ ನೀಡಲು ಸರ್ಕಾರ ಹಿಂಜರಿಯುತ್ತಿದ್ದರೆ, ಅನುಮತಿ ನೀಡಬಾರದೆಂದು ಆಗ್ರಹಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀ ಸರ್ಕಾರಕ್ಕೆ ಪತ್ರ ಬರೆದಿದ್ದರು.
ಪ್ರಮೋದ್ ಮುತಾಲಿಕ್ ಹಾಗೂ ಪ್ರಣವಾನಂದ ಸ್ವಾಮೀಜಿ ಅವರಂತಹ ಹಿಂದೂಪರ ಹೋರಾಟಗಾರರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅನೇಕರು ಕಿಸ್ ಆಫ್ ಲವ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications