ರಾಯರ 349ನೇ ಆರಾಧನೆ: ಬೆಂಗಳೂರಿನಲ್ಲಿ ಶ್ರದ್ದಾ, ಭಕ್ತಿಯ ಸರಳ ಆಚರಣೆ
ಬೆಂಗಳೂರು, ಆ 5: ಕಲಿಯುಗದ ಕಾಮಧೇನು ಗುರು ರಾಘವೇಂದ್ರರ 349ನೇ ಆರಾಧನಾ ಮಹೋತ್ಸವ ಆಗಸ್ಟ್ 4ರಿಂದ ಆರಂಭವಾಗಿದೆ. ಮೂರು ದಿನಗಳ ಕಾಲ ನಡೆಯುವ ಆರಾಧನೆಯನ್ನು ಪೂರ್ವಾರಾಧನೆ, ಮಧ್ಯಾರಾಧನೆ ಮತ್ತು ಉತ್ತರಾರಾಧನೆ ಎಂದು ಕರೆಯಲಾಗುತ್ತದೆ.
ಮೂಲ ವೃಂದಾವನವಿರುವ ಮಂತ್ರಾಲಯದಲ್ಲಿ ಮತ್ತು ರಾಜ್ಯದೆಲ್ಲಡೆ ಈ ಬಾರಿ ಕೊರೊನಾ ಕಾರಣದಿಂದಾಗಿ ಅತ್ಯಂತ ಸರಳವಾಗಿ ಆರಾಧನೆಯನ್ನು ಆಚರಿಸಲಾಗುತ್ತಿದೆ. ಬೆಂಗಳೂರಿನಲ್ಲೂ, ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ಭಕ್ತರು ರಾಯರ ದರ್ಶನ ಮಾಡಿಕೊಂಡು ಹೋಗುತ್ತಿದ್ದಾರೆ.
ನಗರದಲ್ಲಿ ಭಕ್ತರಿಗೆ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಈ ಬಾರಿ ಇರುವುದಿಲ್ಲ ಎಂದು ರಾಯರ ಮಠಗಳು ಈಗಾಗಲೇ ಸ್ಪಷ್ಟ ಪಡಿಸಿದ್ದವು. ಧ್ವಜಾರೋಹಣ, ಗೋಪೂಜೆ, ಧನ-ಧಾನ್ಯಪೂಜೆಯ ಮೂಲಕ, ಆರಾಧನೆ ಕಾರ್ಯಕ್ರಮದ ವಿಧಿವತ್ತಾಗಿ ಆರಂಭವಾಗಿತ್ತು.

ಹೊಸಕೆರೆಹಳ್ಳಿ, ಶ್ರೀನಗರ, ಎಜಿಎಸ್ ಲೇಔಟ್, ಕಲ್ಯಾಣಿ ರಾಯರ ಮಠ, ಬಸವನಗುಡಿಯ ನವ ಮಂತ್ರಾಲಯ ಮೃತ್ತಿಕಾ ವೃಂದಾವನ, ಕೆಂಗೇರಿ ಉಪನಗರ ರಾಯರ ಮಠ, ಜಯನಗರ ಐದನೇ ಬ್ಲಾಕ್ ನಲ್ಲಿರುವ ರಾಯರ ಮಠವೂ, ಎನ್.ಆರ್.ಕಾಲೋನಿ ಮಠ ಸೇರಿದಂತೆ ನಾನಾ ಕಡೆ ಸರಳವಾಗಿ ಆರಾಧನೆ ಆಚರಿಸಲಾಗುತ್ತಿದೆ.
ಮೂರು ದಿನಗಳ ಆರಾಧನಾ ಕಾರ್ಯಕ್ರಮದಲ್ಲಿ ಮಧ್ಯಾರಾಧನೆಗೆ ವಿಶೇಷ ಮಹತ್ವ ಇದೆ. ಏಕೆಂದರೆ, ಆ ದಿನದಂದೇ ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳು ವೃಂದಾವನಸ್ಥರಾದರು.
ಇದೇ ಮೊದಲ ಬಾರಿಗೆ, ಕೊರೊನಾ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಮಂತ್ರಾಲಯದಲ್ಲಿ ರಾಯರ ದರ್ಶನಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications