ರಾಘವೇಶ್ವರ ಶ್ರೀಗಳ ಚಾತುರ್ಮಾಸ್ಯ ವ್ರತದಲ್ಲಿ ಬದಲಾವಣೆ
ರಾಘವೇಶ್ವರ ಶ್ರೀಗಳ ಚಾತುರ್ಮಾಸ್ಯ ವ್ರತದಲ್ಲಿ ಬದಲಾವಣೆ
ಬೆಂಗಳೂರು, ಜುಲೈ 25: ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಶ್ರೀಗಳ 2018ನೇ ಚಾತುರ್ಮಾಸ್ಯವ್ರತ ನಗರದ ಗಿರಿನಗರದಲ್ಲಿರುವ ಶಾಖಾಮಠದಲ್ಲಿ ನಡೆಯಲಿದೆ. ಬೆಂಗಳೂರಿನ ಗಿರಿನಗರದ ಮಠದಲ್ಲಿ ಚಾತುರ್ಮಾಸ್ಯ ವ್ರತ ಕೈಗೊಳ್ಳಲು ಶಿಷ್ಯರ ಮತ್ತು ಭಕ್ತವೃಂದದ ಆಗ್ರಹದ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಭಾನ್ಕುಳಿ ಶ್ರೀ ರಾಮದೇವ ಮಠದಲ್ಲಿ ತಮ್ಮ 25ನೇ ಚಾತುರ್ಮಾಸ್ಯ ವ್ರತವನ್ನು ಕೈಗೊಳ್ಳಬೇಕೆಂದು, ರಾಘವೇಶ್ವರ ಶ್ರೀಗಳು ಈ ಹಿಂದೆ ಯೋಚಿಸಿದ್ದರು.
ಬುಧವಾರ (ಜುಲೈ 25) ಸಮಾಜದ ಹಾಗೂ ಶಿಷ್ಯ ಸಮುದಾಯದ ಪದಾಧಿಕಾರಿಗಳೊಂದಿಗೆ ಸಮ್ಮುಖ ಸರ್ವಾಧಿಕಾರಿಗಳಾದ ತಿಮ್ಮಪ್ಪಯ್ಯ ಮಡಿಯಾಲರವರು ಹಾಗೂ ಮುಖ್ಯ ನಿರ್ವಹಣಾಧಿಕಾರಿಗಳಾದ ಕೆ. ಜಿ. ಭಟ್ಟ ರವರು ಶ್ರೀಗಳನ್ನು ಭೇಟಿ ಮಾಡಿದ್ದರು.

ಕಿಡ್ನಿ ಸ್ಟೋನ್ ಗೆ ಸಂಬಂಧಿಸಿದ ಸಣ್ಣ ಪುಟ್ಟ ಚಿಕಿತ್ಸೆಯ ಅವಶ್ಯಕತೆ ಇರುವದರಿಂದಲೂ, ವಿಶ್ರಾಂತಿಯ ಅಗತ್ಯ ಇರುವದರಿಂದಲೂ ಚಾತುರ್ಮಾಸ್ಯವನ್ನು ಬೆಂಗಳೂರಿನಲ್ಲಿಯೇ ಕೈಗೊಂಡು, ವಿಶ್ರಾಂತಿಯನ್ನೂ ಪಡೆಯುತ್ತಾ ಗೋಸ್ವರ್ಗದ ಕುರಿತು ಹೆಚ್ಚಿನ ಮಾರ್ಗದರ್ಶನ ನೀಡಬೇಕೆಂದು ಶ್ರೀಗಳಲ್ಲಿ ವಿನಂತಿಸಿದರು.
ಇವರೆಲ್ಲರ ಒಕ್ಕೊರಲ ವಿನಂತಿಯನ್ನು ಮನ್ನಿಸಿದ ಶ್ರೀಗಳು ಈ ವರ್ಷ ಸಂಕಲ್ಪಿಸಿದ ಗೋಸ್ವರ್ಗ ಚಾತುರ್ಮಾಸ್ಯವನ್ನು ಇದೇ ಬರುವ ಆಷಾಢ ಕೃಷ್ಣ ಚತುರ್ಥಿಯಿಂದ (01-08-2018 - 25.09.2018) ಬೆಂಗಳೂರಿನ ಗಿರಿನಗರ ಮಠದಲ್ಲಿ ಕೈಗೊಳ್ಳುವದಾಗಿ ಸಮ್ಮತಿ ಸೂಚಿಸಿದ್ದಾರೆ.
ಎಲ್ಲಾ ಶಿಷ್ಯ ಭಕ್ತ ಸಮಾಜ ಬಾಂಧವರು ಈ ಬದಲಾವಣೆಯನ್ನು ಗಮನಿಸಿ, ಚಾತುರ್ಮಾಸ್ಯದ ಪವಿತ್ರ ಸಂದರ್ಭದಲ್ಲಿ ಬೆಂಗಳೂರಿನ ಗಿರಿನಗರದ ಶ್ರೀ ರಾಮಾಶ್ರಮಕ್ಕೆ ಆಗಮಿಸಿ, ಶ್ರೀಗಳವರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಮಠದ ಪತ್ರಿಕಾ ಪ್ರಕಟಣೆಯ ಮೂಲಕ ಮನವಿ ಮಾಡಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications