ರಾಗೀಗುಡ್ಡ ದೇವಸ್ಥಾನದಿಂದ ಶೈಕ್ಷಣಿಕ ಪ್ರಗತಿಗೆ ವಿದ್ಯಾರ್ಥಿ ವೇತನ
ಪ್ರತಿಭಾನ್ವಿತ ವಿದ್ಯಾರ್ಥಿ/ವಿದ್ಯಾರ್ಥಿನಿಯರ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಗೀಗುಡ್ಡದ ಪ್ರಸನ್ನ ಆಂಜನೇಯ ಸ್ವಾಮಿ ದೇವಾಲಯದ ಚಾರಿಟೇಬಲ್ ಟ್ರಸ್ಟ್ ವಿದ್ಯಾರ್ಥಿ ವೇತನ ನೀಡಲಿದೆ.
ಬೆಂಗಳೂರು, ಏ 19: ಎಸ್ಎಸ್ಎಲ್ಸಿ ನಂತರ ಪ್ರತಿಭಾನ್ವಿತ ವಿದ್ಯಾರ್ಥಿ/ವಿದ್ಯಾರ್ಥಿನಿಯರ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಗೀಗುಡ್ಡದ ಶ್ರೀಪ್ರಸನ್ನ ಆಂಜನೇಯ ಸ್ವಾಮಿ ದೇವಾಲಯದ ಚಾರಿಟೇಬಲ್ ಟ್ರಸ್ಟ್ ವಿದ್ಯಾರ್ಥಿ ವೇತನ ನೀಡಲಿದೆ.
'ವಿದ್ಯಾನಿಧಿ' ಹೆಸರಿನಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಟ್ರಸ್ಟ್ ಕಳೆದ ಕೆಲವು ವರ್ಷಗಳಿಂದ ನೀಡುತ್ತಾ ಬಂದಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಇದುವರೆಗೆ ನೀಡಲಾಗಿದೆ. (SSLC ಪರೀಕ್ಷೆಗೆ ಇಂದು ಮಂಗಳ, ಕಾಲೇಜಿಗೆ ದಾರಿ ಯಾವುದಯ್ಯ)

(ಸಾಂದರ್ಭಿಕ ಚಿತ್ರ)
ಪ್ರಸಕ್ತ ವರ್ಷದ (2017-18) ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಸ್ಎಸ್ಎಲ್ಸಿ ನಂತರದ ವಿದ್ಯಾಭ್ಯಾಸಕ್ಕೆ, ಕಾಲೇಜುಗಳ ವಾರ್ಷಿಕ ಶುಲ್ಕಕ್ಕೆ ಅನುಗುಣವಾಗಿ ವಿದ್ಯಾರ್ಥಿ ವೇತನ ನೀಡಲಾಗುವುದು ಎಂದು ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ.
ಜಯನಗರ 9ನೇ ಬ್ಲಾಕಿನಲ್ಲಿರುವ ರಾಗೀಗುಡ್ದ ದೇವಾಲಯಕ್ಕೆ ಹೊಂದಿಕೊಂಡಿರುವ ಶಾಲೆಯ ಕಚೇರಿಯಲ್ಲಿ ಭಾನುವಾರ ಹೊರತು ಪಡಿಸಿ ವಾರದ ಎಲ್ಲಾ ದಿನ ಸಾಯಂಕಾಲ ಐದರಿಂದ ಆರು ಗಂಟೆಯೊಳಗೆ ಅರ್ಜಿಯನ್ನು ಪಡೆಯಬಹುದಾಗಿದೆ.
ಆಸಕ್ತ ವಿದ್ಯಾರ್ಥಿಗಳು ಇದೇ ಏಪ್ರಿಲ್ 25ನೇ ತಾರೀಕಿನೊಳಗೆ ಅರ್ಜಿಯನ್ನು ತುಂಬಿ ಶಾಲೆಯ ಕಚೇರಿಗೆ ನೀಡಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಾಲೆಯ ದೂರವಾಣಿ ಸಂಖ್ಯೆ 26587646/26594244 ಸಂಪರ್ಕಿಸಬಹುದಾಗಿದೆ.
ಅರ್ಜಿಯ ಜೊತೆಗೆ ನೀಡಬೇಕಾಗಿರುವ ಪ್ರಮಾಣಪತ್ರದ ಪ್ರತಿಯ ವಿವರಗಳನ್ನು ಅರ್ಜಿ ಪಡೆಯುವ ವೇಳೆ ಶಾಲೆಯ ಅಧಿಕಾರಿಗಳು ತಿಳಿಸಲಿದ್ದಾರೆ ಎಂದು ಟ್ರಸ್ಟಿನ ಕಾರ್ಯದರ್ಶಿಗಳು ತಿಳಿಸಿದ್ದಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
SSLC ಪರೀಕ್ಷೆಗೆ ಹಾಜರಾತಿ ಶಾಕ್: ನಿಯಮ ಉಲ್ಲಂಘಿಸಿದ 35,000 ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ











Click it and Unblock the Notifications