ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ರೋಡ್ ಶೋ: ಬೆಂಗಳೂರಿನಲ್ಲಿ ಇಂದು ಈ ರಸ್ತೆಗಳು ಬಂದ್!
ಬೆಂಗಳೂರಿನಲ್ಲಿ ಇಂದು ಒಂದು ಕಡೆ ಪ್ರಧಾನಿ ಮೋದಿ ರೋಡ್ ಶೋ ನಡೆಸಿದರೆ ಮತ್ತೊಂದು ಕಡೆ ಕಾಂಗ್ರೆಸ್ ಕೂಡ ಭರ್ಜರಿ ರೋಡ್ ಶೋಗೆ ಸಿದ್ಧತೆ ಮಾಡಿಕೊಂಡಿದೆ. ಭಾನುವಾರ ಸಂಜೆ ಪ್ರಿಯಾಂಕ ಗಾಂಧಿ ಮತ್ತು ರಾಹುಲ್ ಗಾಂಧಿ ರೋಡ್ ಶೋ ನಡೆಸಲಿದ್ದಾರೆ.
ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ರೋಡ್ ಶೋ ಹಿನ್ನಲೆಯಲ್ಲಿ ಹಲವು ರಸ್ತೆಗಳನ್ನು ಬಂದ್ ಮಾಡಲಿದ್ದು, ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚನೆ ನೀಡಿದೆ. ಸಂಜೆ 5 ಗಂಟೆಯಿಂದ 7 ಗಂಟೆಯವರೆಗೆ ಹಳೆ ವಿಮಾನ ರಸ್ತೆ, ಸುರಂಜನ್ ದಾಸ್ ರಸ್ತೆ, ಮಹದೇವಪುರ ಮುಖ್ಯರಸ್ತೆ, ಮಾರತ್ ಹಳ್ಳಿ ಮುಖ್ಯರಸ್ತೆ, ವರ್ತೂರು ಕೋಡಿ ರಸ್ತೆಯಲ್ಲಿ ರೋಡ್ ಶೋ ನಡೆಯಲಿದ್ದು, ಪರ್ಯಾಯ ಮಾರ್ಗ ಬಳಸಲು ಸೂಚನೆ ನೀಡಲಾಗಿದೆ.

ಸಂಜೆ 7 ಗಂಟೆಯಿಂದ 9 ಗಂಟೆಯವರೆಗೆ ಹೊಂಗಸಂದ್ರ, ಬೊಮ್ಮನಹಳ್ಳಿ ಮುಖ್ಯರಸ್ತೆ, ಬೇಗೂರು ರಸ್ತೆ, ಹೊಸೂರು ರಸ್ತೆಗಳಲ್ಲಿ ರೋಡ್ ಶೋ ನಡೆಯಲಿರುವ ಕಾರಣ, ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ಬೆಂಗಳೂರು ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ.
ಸಂಜೆ 6 ಗಂಟೆಯಿಂದ 10 ಗಂಟೆಯವರೆಗೆ ರಸಲ್ ಮಾರ್ಕೆಟ್ ಸ್ಕ್ವೇರ್, ಶಿವಾಜಿನಗರ, ಪೆರಿಯಾರ್ ವೃತ್ತ, ಟ್ಯಾನರಿ ರಸ್ತೆಯಲ್ಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ರೋಡ್ ಶೋ ನಡೆಯಲಿದ್ದು, ಈ ರಸ್ತೆಗಳಲ್ಲಿ ಸಂಚರಿಸದಂತೆ ಸೂಚನೆ ನೀಡಲಾಗಿದೆ.
ಮೋದಿ ರೋಡ್ ಶೋ
ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಯಲಿದೆ. ನೀಟ್ ಪರೀಕ್ಷೆ ಇರುವ ಕಾರಣ 9.30 ರಿಂದ 11.30 ರವರೆಗೆ ಮಾತ್ರ ರೋಡ್ ಶೋ ನಡೆಸಲು ಅನುಮತಿ ನೀಡಿದೆ. ನ್ಯೂ ತಿಪ್ಪಸಂದ್ರದಿಂದ ರೋಡ್ ಶೋ ಆರಂಭವಾಗಲಿದ್ದು, ಹೆಚ್ಎಎಲ್ ಎರಡನೇ ಸ್ಟೇಜ್, 100 ಅಡಿ ರಸ್ತೆ, ಇಎಸ್ಐ ಆಸ್ಪತ್ರೆ, ಸಿಎಂಹೆಚ್ ರಸ್ತೆ, ಹಲಸೂರು ಮೆಟ್ರೋ ಸ್ಟೇಷನ್, ಟ್ರಿನಿಟಿ ಸರ್ಕಲ್ ವರೆಗೆ ನಡೆಯಲಿದ್ದು, ಈ ಮಾರ್ಗಗಳನ್ನು ತಪ್ಪಿಸಲು ಕೂಡ ಮನವಿ ಮಾಡಲಾಗಿದೆ.
-
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications