'ಬಸವಣ್ಣ ಸಮಾಜಕ್ಕೆ ಬೆಳಕು' : ಶೆಟ್ಟರ್ ಮೂಲಕ ಲಿಂಗಾಯತರಿಗೆ ರಾಹುಲ್ ಗಾಳ
ರಾಜ್ಯ ವಿಧಾನಸಭಾ ಚುನಾವಣೆ ಬೆನ್ನಲ್ಲೆ ಕರ್ನಾಟಕಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಕೂಡಲ ಸಂಗಮದಲ್ಲಿ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ವೇಳೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮೂಲಕ ಲಿಂಗಾಯತರನ್ನು ಸೆಳೆಯುವ ಪ್ರಯತ್ನ ಮಾಡಿದರು.
ದೆಹಲಿಯಿಂದ ಹುಬ್ಬಳಿಗೆ ಆಗಮಿಸಿದ ರಾಹುಲ್ ಗಾಂಧಿ ಅರ್ಧಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು. ಬಳಿಕ ಕೂಡಲ ಸಂಗಮಕ್ಕೆ ತೆರಳಿ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ವೇಳೆ ರಾಹುಲ್ ಗಾಂಧಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ಶಾಲು ಹೊದಿಸಿ, ಬಸವಣ್ಣ ಅವರ ಮೂರ್ತಿ ನೀಡುವ ಮೂಲಕ ಗೌರವಿಸಲಾಯಿತು.

ಬಳಿಕ ಮಾತನಾಡಿದ ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಕರೆಸಿದ್ದಕ್ಕೆ ಧನ್ಯವಾದಗಳನ್ನು ಹೇಳಿದರು. ಸ್ವಾಮಿಜಿ ಅವರು ಮಾತನಾಡುವಾಗ ಹೇಳಿದರು, ಪ್ರಜಾಪ್ರಭುತ್ವವನ್ನು ಬಸವಣ್ಣ ಅವರು ರಕ್ಷಣೆ ಮಾಡಿದರು. ಇದು ಸತ್ಯ. ಇದನ್ನು ಅಲ್ಲಗಳಿಯಲು ಆಗುವುದಿಲ್ಲ. ಪ್ರಜಾಪ್ರಭುತ್ವ, ಸಂಸದೀಯ ಸಂಸತ್ತು ಬರಲು ಬಸವಣ್ಣ ನವರ ಅನುಭವ ಮಂಟಪ ಕಾರಣ. ಸಮಾಜದಲ್ಲಿ ಅವತ್ತು ಕತ್ತಲು ಇತ್ತು. ಆಗ ಬಸವಣ್ಣನವರು ಸಮಾಜಕ್ಕೆ ಬೆಳಕನ್ನು ತಂದು ಕೊಟ್ಟರು. ಅದು ಈಗಲೂ ಬೆಳಕನ್ನು ನೀಡುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದರು.
ಬಸವಣ್ಣನಿಗೂ ಇತರರಿಗೂ ಇರುವ ವ್ಯತ್ಯಾಸ ಏನು? ರಾಹುಲ್ ಗಾಂಧಿ
ಕೂಡಲ ಸಂಗಮದಲ್ಲಿ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಬಸವಣ್ಣನಿಗೂ ಇತರರಿಗೂ ಇರುವ ವ್ಯತ್ಯಾಸ ಏನು? ಎನ್ನುವುದುಕ್ಕೆ ಉತ್ತರಿಸಿದರು. 'ಇನ್ನೊಬ್ಬರಿಗೆ ಸವಾಲು ಮಾಡುವುದು ತುಂಬಾ ಸರಳ ನಮ್ಮನ್ನು ನಾವೇ ಸವಾಲು ಹಾಕಿಕೊಳ್ಳುವುದು ಕಷ್ಟ. ಸಣ್ಣ ವಯಸ್ಸಿನಲ್ಲಿ ಬಸವಣ್ಣನವರಿಗೆ ಇಂತಹ ದೊಡ್ಡ ವಿಚಾರಗಳು ಹೇಗೆ ಬಂತು? ಇದಕ್ಕೆ ಸ್ವಾಮೀಜಿಗಳು ಉತ್ತರ ಕೊಟ್ಟರು. ಈ ವಿಚಾರ ಯಾಕೆ ಬಂತು ಅಂದರೆ ಬಸವಣ್ಣ ಅವರ ಗೆಳೆಯರ ಪರಿಸ್ಥಿತಿ ನೋಡಿ ಅವರಿಗೆ ಈ ರೀತಿ ಬದಲಾವಣೆ ತರಬೇಕು ಎಂದು ಮನಸ್ಸಾಯಿತು. ಜಾತಿ ವಿರುದ್ಧ, ತಿರಸ್ಕಾರದ ಬಗ್ಗೆ, ಸಮಾಜದ ಬಗ್ಗೆ ತಮ್ಮನ್ನು ತಾವು ಸವಾಲು ಹಾಕಿಕೊಳ್ಳುವ ಪ್ರಯತ್ನ ಮಾಡಿದರು. ಪ್ರಶ್ನೆ ಕೇಳಿಕೊಂಡ ಮೇಲೆ ಹೃದಯದಲ್ಲಿ ಅನಿಸಿದ್ದು ಜೀವನ ಪೂರ್ತಿ ಅದನ್ನು ಮಾಡಲು ನಿರ್ಧರಿಸಿದರು. ಬಹಳ ಜನ ಸವಾಲು ಹಾಕಿಕೊಳ್ಳುತ್ತಾರೆ. ಆದರೆ ಸಮಾಜದಲ್ಲಿ ಧ್ವನಿ ಎತ್ತುವುದಿಲ್ಲ. ಅವರಿಗೆ ಸತ್ಯದ ಬಗ್ಗೆ ಗೊತ್ತಾಗುತ್ತದೆ. ಆದರೆ ಪ್ರಶ್ನೆ ಮಾಡುವುದಿಲ್ಲ. ಇದೇ ಬಸವಣ್ಣನಿಗೂ ಇತರರಿಗೂ ಇರುವ ವ್ಯತ್ಯಾಸ ಎಂದು ರಾಹುಲ್ ಗಾಂಧಿ ಹೇಳಿದರು.

'ಅಸಮಾನತೆಯ ಬಗ್ಗೆ ಪ್ರಶ್ನೆ ಮಾಡಿದ ಬಸವಣ್ಣ'
ಕೂಡಲ ಸಂಗಮದಲ್ಲಿ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, 'ಬಸವಣ್ಣ ಅಸಮಾನತೆಯ ಬಗ್ಗೆ ಪ್ರಶ್ನೆ ಮಾಡಿದರು. ಅದನ್ನು ಸಮಾಜ ಮುಂದೆ ಅನುಷ್ಠಾನ ಮಾಡಿದರು. ಬಸವಣ್ಣನ ಮುಂದೆ ಹೂವು ಹಾಕಿರುವುದಕ್ಕೆ ಕಾರಣ ಇದೆ. ಇದನ್ನು ನೀವು ತಿಳಿದುಕೊಳ್ಳಬೇಕಾಗಿದೆ. ಸತ್ಯವನ್ನು ತೆರದಿಡುವುದು ಸಮಾಜದಲ್ಲಿ ಅಷ್ಟು ಸುಲಭವಿಲ್ಲ. ಬಸವಣ್ಣ ಅವರನ್ನು ಹೆದರಿಸಲಾಯಿತು, ಬೆದರಿಸಲಾಯಿತು ಆದರೆ ಆವರು ಹಿಂದೆ ಸರಿಲಿಲ್ಲ. ಅವರು ಗಟ್ಟಿಯಾಗಿ ನಿಂತರು. ಹೀಗಾಗಿ ನಾವು ಅವರ ಪಾದಕ್ಕೆ ಹೂವನ್ನು ಸಲ್ಲಿಸಿದ್ದೇವೆ' ಎಂದು ಹೇಳಿದರು.
'ಸಮಾನತೆಯನ್ನು ಸಮಾಜಕ್ಕೆ ಸಾರಿದ ಬಸವಣ್ಣ'
ಎಲ್ಲರೂ ತಮ್ಮನ್ನು ತಾವು ಪ್ರಶ್ನೆ ಮಾಡಿಕೊಳ್ಳುತ್ತಾರೆ. ಸತ್ಯವನ್ನು ಅರಿತುಕೊಳ್ಳುತ್ತಾರೆ. ಆದರೆ ಸಮಾಜದಲ್ಲಿ ಅದನ್ನು ಹೇಳಲು ಮುಂದಾಗುವುದಿಲ್ಲ. ಅಂತವರನ್ನು ನಾವು ನೆನಪಿಸಿಕೊಳ್ಳುವುದಿಲ್ಲ. ಆದರೆ ತಮ್ಮ ಅರಿವಿಗೆ ಬಂದ ಸತ್ಯವನ್ನು ಬಸವಣ್ಣ ಸಮಾಜಕ್ಕೆ ಸಾರಿದರು. ಇಂದು ನನಗೆ ಬಂದು ತುಂಬಾ ಸಂತೋಷವಾಗಿದೆ. ಬಸವಣ್ಣ ಅವರು ಹೋರಾಟ ಮಾಡಿದ ರೀತಿಯನ್ನು ನಾವು ಅಳವಡಿಸಿಕೊಳ್ಳಬೇಕಾಗಿದೆ. ನನಗೆ ಈ ಸಂದರ್ಭದಲ್ಲಿ ಅದರನ್ನು ಅರಿತುಕೊಳ್ಳಲು ಸಾಧ್ಯವಾಗಿದೆ. ಬಸವಣ್ಣ ಅವರು ನಮ್ಮ ಎಲ್ಲರಿಗೂ ಮಾರ್ಗದರ್ಶನವಾಗಿದ್ದಾರೆ ಎಂದು ರಾಹುಲ್ ಗಾಂಧಿ ಬಸವ ಜಯಂತಿಯಂದು ಕೂಡಲ ಸಂಗಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದರು.
'ನಾನು ಬಸವಣ್ಣ ಅವರ ಸಿದ್ಧಾಂತಗಳನ್ನು ಓದಿದ್ದೇನೆ' ರಾಹುಲ್ ಗಾಂಧಿ
ಕೂಡಲ ಸಂಗಮದಲ್ಲಿ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, 'ನಾನು ಬಸವಣ್ಣ ಸಿದ್ಧಾಂತಗಳನ್ನು ಓದಿದ್ದೇನೆ. ಅವರು ತಮ್ಮ ಸಿದ್ಧಾಂತಗಳಲ್ಲಿ ಹೇಳಿದ್ದಾರೆ ನೀವು ಹೆದರಬೇಡಿ, ಸತ್ಯದ ಮಾರ್ಗದದಲ್ಲಿ ನಡೆಯಿರಿ ಎಂದು. ಆದರೆ ಕೆಲವು ಮಂದಿ ಮಾತ್ರ ಇದನ್ನು ಪಾಲಿಸುತ್ತಾರೆ. ಅದರಲ್ಲಿ ಬಸವಣ್ಣ ಅವರು ಮೊದಲಿಗರು ಹೀಗಾಗಿ ಅವರು ಸಮಾಜದಲ್ಲಿ ಬೆಳಕು ಆಗಿದ್ದಾರೆ' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
-
ಕೃಷ್ಣಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ರೂ. ಘೋಷಿಸಿದ ಸಿಎಂ ಸಿದ್ಧರಾಮಯ್ಯ -
Kerala: ಕೇರಳಂ ವಿಧಾನಸಭೆ ಚುನಾವಣೆ 2026: ಎಲ್ಡಿಎಫ್–ಯುಡಿಎಫ್ ನಡುವೆ ಪೈಪೋಟಿ, ಹೇಗಿದೆ ರಾಜಕೀಯ ಕಣ -
ಮುಟ್ಟಿನ ರಜೆ ಮಹಿಳೆಯರ ಹಕ್ಕು: ಸುಪ್ರೀಂ ಕೋರ್ಟ್ ನಿಲುವನ್ನು ತೀವ್ರವಾಗಿ ಖಂಡಿಸಿದ CPI -
ಒಡಿಶಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪ -
Tamil Nadu Assembly Election: ತಮಿಳುನಾಡು ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ: ಏಪ್ರಿಲ್ 23ಕ್ಕೆ ಮತದಾನ, ಬಲಾಬಲ ಹೇಗಿದೆ? -
Kerala Assembly Election 2026: ಕೇರಳಂ ವಿಧಾನಸಭೆ ಚುನಾವಣೆ 2026: ಒಂದೇ ಹಂತದಲ್ಲಿ 140 ಸ್ಥಾನಗಳಿಗೆ ಚುನಾವಣೆ -
Assam Assembly Election 2026: ಅಸ್ಸಾಂ ವಿಧಾನಸಭಾ ಚುನಾವಣೆಯ ಮತದಾನ, ಮತ ಎಣಿಕೆ ದಿನಾಂಕಗಳ ವಿವರ -
Puducherry Election 2026: ವಿಧಾನಸಭಾ ಚುನಾವಣೆಗೆ ಸಜ್ಜಾದ ಪುದುಚೇರಿ ರಾಜಕೀಯ ಅಖಾಡ: ಏಪ್ರಿಲ್ 9ಕ್ಕೆ ಮತದಾನ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ












Click it and Unblock the Notifications