ರಾಹುಲ್ ಗಾಂಧಿಯವರನ್ನು ಗಡಿಪಾರು ಮಾಡಿ- ಛಲವಾದಿ ನಾರಾಯಣಸ್ವಾಮಿ ಆಗ್ರಹ
ಬೆಂಗಳೂರು ಮೇ 31: ಕಾಂಗ್ರೆಸ್ನ ರಾಹುಲ್ ಗಾಂಧಿಯವರ ಪೌರತ್ವ ಮುಟ್ಟುಗೋಲು ಹಾಕಿಕೊಂಡು ಅವರನ್ನು ಗಡೀಪಾರು ಮಾಡಬೇಕೆಂದು ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿ "ಜಗನ್ನಾಥ ಭವನ"ದಲ್ಲಿ ಇಂದು ಪತ್ರಕರ್ತರ ಜೊತೆ ಮಾತನಾಡಿದ ಅವರು, ಇಲ್ಲಿ ಅಭದ್ರತೆ ಉಂಟು ಮಾಡುವುದು ಮತ್ತು ದೇಶಕ್ಕೆ ತೊಂದರೆ ಕೊಡಬೇಕೆಂಬ ಮನಸ್ಥಿತಿ ರಾಹುಲ್ ಗಾಂಧಿ ಅವರದು ಎಂದು ನನಗನಿಸುತ್ತದೆ. ಆದ್ದರಿಂದ ನಾನು ಪ್ರಧಾನಿ ಮೋದಿಜಿ ಮತ್ತು ಅಮಿತ್ ಶಾ ಅವರಿಗೆ ಪತ್ರ ಬರೆಯಲಿದ್ದೇನೆ ಎಂದು ತಿಳಿಸಿದರು.

ರಾಹುಲ್ ಗಾಂಧಿಯವರು ದ್ವಿ ಪೌರತ್ವ (ಡ್ಯುಯಲ್ ಸಿಟಿಜನ್ಶಿಪ್) ಹೊಂದಿದ್ದಾರೆಂದು ಮಾಹಿತಿ ಇದೆ. ಸುಬ್ರಹ್ಮಣ್ಯನ್ ಸ್ವಾಮಿ ಅವರು ಇದನ್ನು ತಿಳಿಸಿದ್ದಾರೆ. ಇದರ ಪರಿಶೀಲನೆ ಮಾಡಿ ರಾಹುಲ್ ಗಾಂಧಿಯವರ ಪೌರತ್ವವನ್ನು ಮುಟ್ಟುಗೋಲು ಹಾಕಬೇಕು ಎಂದು ಆಗ್ರಹಿಸಿದರು. ಅಲ್ಲದೆ ಅವರನ್ನು ಈ ದೇಶದಿಂದ ಗಡೀಪಾರು ಮಾಡಿದರೆ ಉತ್ತಮ ಎಂದು ತಿಳಿಸಿದರು. ಇಲ್ಲವಾದರೆ ಅವರು ದೇಶದಲ್ಲಿ ಅಭದ್ರತೆ ಉಂಟು ಮಾಡುವ ಎಲ್ಲ ಲಕ್ಷಣಗಳಿವೆ ಎಂದು ಅನುಮಾನ ವ್ಯಕ್ತಪಡಿಸಿದರು.
ಸ್ವಾತಂತ್ರ್ಯ ಬಂದಾಗ ಅಧಿಕಾರ ಹಸ್ತಾಂತರದ ಸಂದರ್ಭದಲ್ಲಿ ಇದೇ ರಾಹುಲ್ ಗಾಂಧಿಯವರ ಮುತ್ತಜ್ಜನಿಗೆ ಆಗಿನ ಬ್ರಿಟಿಷರು ಸೆಂಗೋಲ್ (ರಾಜದಂಡ) ಕೊಟ್ಟಿದ್ದರು. ಆ ವಿಚಾರ ಚರಿತ್ರೆಯಲ್ಲಿ ಮುಚ್ಚಿ ಹೋಗಿತ್ತು. ಅದನ್ನು ಹೊರಕ್ಕೆ ತರುವ ಕೆಲಸವನ್ನು ಮೋದಿಜಿ ಮತ್ತು ಅಮಿತ್ ಶಾ ಅವರು ಮಾಡಿದ್ದು, ಅದನ್ನೂ ಹೊರಗಡೆ ಪ್ರಸ್ತಾಪ ಮಾಡಿದ್ದಾರೆ. ಇವೆಲ್ಲವನ್ನೂ ಗಮನಿಸಿದರೆ ರಾಹುಲ್ ಗಾಂಧಿಯವರ ತಲೆಯಲ್ಲಿ ಭಾರತೀಯ ವಿರೋಧಿ ಧೋರಣೆ ಇದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ರಾಹುಲ್ ಗಾಂಧಿಯವರು ಅಮೆರಿಕಕ್ಕೆ ಹೋಗಿದ್ದಾರೆ. ಅಲ್ಲಿ ಹೋಗಿ, ದೇಶದಲ್ಲಿ ಅಭದ್ರತೆ ಸೃಷ್ಟಿಸುವ ರೀತಿಯ ಹೇಳಿಕೆ ಕೊಡುತ್ತಿದ್ದಾರೆ. ಅವರು ಯಾವತ್ತೂ ಕೂಡ ಭಾರತ ಪರವಾದ ಮಾನಸಿಕ ಸ್ಥಿತಿ ಹೊಂದಿರಲಿಲ್ಲ ಎಂಬ ಅನುಮಾನ ನನ್ನನ್ನು ಕಾಡುತ್ತಿದೆ ಎಂದು ನುಡಿದರು.
18 ಇಸ್ಲಾಂ ಸಂಘಟನೆಗಳ ಮುಖ್ಯಸ್ಥರನ್ನು ಅವರು ಭೇಟಿ ಮಾಡುವ ಮಾಹಿತಿ ಬರುತ್ತಿದೆ. ಅವರನ್ನು ಐದಾರು ತಿಂಗಳೊಳಗೆ ಭಾರತಕ್ಕೆ ಕರೆಸಿಕೊಳ್ಳಬೇಕು. ಅವರ ಮೂಲಕ ಭಾರತದಲ್ಲಿ ಅಭದ್ರತೆ ಸೃಷ್ಟಿಸಲು ಯೋಜನೆಯನ್ನು ರಾಹುಲ್ ಗಾಂಧಿಯವರು ಹೊಂದಿರುವುದಾಗಿ ವಿಷಯ ಹೊರಬರುತ್ತಿದೆ ಎಂದು ಆಕ್ಷೇಪಿಸಿದರು.
ಕಾಂಗ್ರೆಸ್ ಮನಸ್ಥಿತಿ ಇಷ್ಟೊಂದು ಬದಲಾಗಲು ಕಾರಣ ಏನು ಎಂದು ಕೇಳಿದ ಅವರು, ಹೊಸ ಸಂಸತ್ ಭವನವನ್ನು ಮೋದಿಜಿ ಕಟ್ಟಿಸಿದ್ದಾರೆ. ಉದ್ಘಾಟನೆಗೆ ಎಲ್ಲ ವಿರೋಧ ಪಕ್ಷಗಳಿಗೂ ಆಹ್ವಾನ ಇದ್ದರೂ ಅವರು ಬಂದಿಲ್ಲ. ಅದು ಮೋದಿಯವರ ವಿರೋಧಿ ಮೇನಿಯಾ ಎಂದು ತಿಳಿಸಿದರು. ಇದರ ವಿರುದ್ಧವಾಗಿಯೂ ರಾಹುಲ್ ಗಾಂಧಿಯವರು ಹೊರದೇಶದಲ್ಲಿ ಮಾತನಾಡಿದ್ದಾರೆ ಎಂದರು.
ಗ್ಯಾರಂಟಿಗಳು ನನಗೆ ಬೇಕಿಲ್ಲ
ಗ್ಯಾರಂಟಿ ಏನಾಯ್ತೆಂದು ಕೇಳಲು ನಾನು ಬಂದಿಲ್ಲ; ನಾನು ಮೊದಲನೆಯದಾಗಿ ಈ ಗ್ಯಾರಂಟಿಗಳ ವಿರೋಧಿ. ನನ್ನ ಕುಟುಂಬ ಕಾಂಗ್ರೆಸ್ ಕೊಡುವ ಯಾವ ಗ್ಯಾರಂಟಿಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಛಲವಾದಿ ನಾರಾಯಣಸ್ವಾಮಿ ತಿಳಿಸಿದರು. ಜನರಿಗೆ ಕೊಟ್ಟ ಆಶ್ವಾಸನೆಗಳನ್ನು ಈಡೇರಿಸದೆ ಇದ್ದಲ್ಲಿ ಆಗ ನಾನು ಅದರ ಕುರಿತು ಮಾತನಾಡುವೆ. ಅದು ಜನಪರವಾಗಿರುತ್ತದೆ ಎಂದು ತಿಳಿಸಿದರು.
-
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್












Click it and Unblock the Notifications