AICC ಅಧ್ಯಕ್ಷರ ಪುತ್ರನ ಟ್ರಸ್ಟ್ಗೆ KIADB ನಿಯಮಾನುಸಾರ 'ಸಿಎ ನಿವೇಶನ': ಎಂಬಿ ಪಾಟೀಲ್
ಬೆಂಗಳೂರು, ಆಗಸ್ಟ್ 26: ರಾಜ್ಯದಲ್ಲಿ ಮುಡಾ ಹಗರಣ ಬೆಳಕಿಗೆ ಬಂದು, ಒಂದಷ್ಟು ರಾಜಕೀಯ ಬೆಳವಣಿಗೆಗಳು ನಡೆದ ಬೆನ್ನಲ್ಲೆ, ಟ್ರಸ್ಟ್ವೊಂದಕ್ಕೆ ನೀಡಿರುವ ನಿವೇಶನ ಕುರಿತು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರ ಪುತ್ರ ರಾಹುಲ್ ಖರ್ಗೆ ಅವರ 'ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್' ಗೆ ಏರೋಸ್ಪೇಸ್ ಪಾರ್ಕ್ ನಲ್ಲಿ ಸಿ.ಎ. ನಿವೇಶನವನ್ನು ಕಾನೂನಿನ ಪ್ರಕಾರವೇ ನಿಗದಿತ ಬೆಲೆಗೆ ನೀಡಿದ್ದರ ಬಗ್ಗೆ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.
ಸಚಿವರು ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿ, ಸಂಶೋಧನೆ ಮತ್ತು ತರಬೇತಿ ಕೇಂದ್ರ ಸ್ಥಾಪಿಸುವ ಉದ್ದೇಶದಿಂದ ಹೊಂದಿರುವುದಾಗಿ ಹೇಳಿದ್ದಾರೆ. ಈ ಕಾರಣದಿಂದ ರಾಹುಲ್ ಖರ್ಗೆ ಅವರ ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್ ಗೆ ಏರೋಸ್ಪೇಸ್ ಪಾರ್ಕ್ ನಲ್ಲಿ ಸಿ.ಎ. ನಿವೇಶನ ನೀಡಲಾಗಿದೆ. ಇದರಲ್ಲಿ ಬಿಜೆಪಿ ನಾಯಕ ಲೆಹರ್ ಸಿಂಗ್ ಆರೋಪಿಸಿರುವಂತೆ ಯಾವ ನಿಯಮಗಳ ಉಲ್ಲಂಘನೆ ಆಗಲಿ, ಅಕ್ರಮವಾಗಲಿ ಆಗಿಲ್ಲ ಎಂದು ಎಂದು ಸಚಿವರು ಮಾಹಿತಿ ನೀಡಿದರು.

ಕೆಐಎಡಿಬಿ ನಿಯಮಗಳಡಿ ಅಭಿವೃದ್ಧಿ ಚಟುವಟಿಕೆ
ರಾಹುಲ್ ಖರ್ಗೆ ಅವರು ಐಐಟಿ ಪದವೀಧರರಾಗಿದ್ದಾರೆ. ಅವರ ಕುಟುಂಬವು ನಾನಾ ಬಗೆಯ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದೆ. ಕೆಐಎಡಿಬಿ ನಿಯಮಗಳ ಪ್ರಕಾರ ಸಿ.ಎ ನಿವೇಶನಗಳಲ್ಲಿ ಆರ್ ಆಂಡ್ ಡಿ ಕೇಂದ್ರಗಳು, ಉತ್ಕೃಷ್ಟತಾ ಕೇಂದ್ರಗಳು, ತಾಂತ್ರಿಕ ಸಂಸ್ಥೆಗಳು, ಕೌಶಲ್ಯಾಭಿವೃದ್ಧಿ, ಸರ್ಕಾರಿ ಕಚೇರಿಗಳು, ಬ್ಯಾಂಕ್, ಆಸ್ಪತ್ರೆ, ಹೋಟೆಲ್, ಪೆಟ್ರೋಲ್ ಬಂಕ್, ಕ್ಯಾಂಟೀನ್, ವಸತಿ ಸೌಲಭ್ಯ ಸ್ಥಾಪನೆಗೆ ಅಭಿವೃದ್ಧಿಗೆ ಅವಕಾಶವಿದೆ. ಆದ್ದರಿಂದ ಈ ಬಗ್ಗೆ ಯಾರು ಬೇಕಾದರೂ ಪ್ರಶ್ನಿಸಬಹದು ಎಂದು ಮಾಹಿತಿ ಸೈಟ್ ಮಾರಾಟ ಬಗ್ಗೆ ಅವರು ಸಮರ್ಥಿಸಿಕೊಂಡರು.
ರಾಜ್ಯದಲ್ಲಿ ನಿವೇಶನ ಮಾರಾಟ ಮಾಡಬೇಕಾದಲ್ಲಿ ಇಲ್ಲಿನ ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಯ ಶಿಫಾರಸಿನ ನಂತರವಷ್ಟೇ ಇವುಗಳ ಹಂಚಿಕೆ ಮಾಡಲಾಗುತ್ತದೆ. ಏರೋಸ್ಪೇಸ್ ಪಾರ್ಕಿನಲ್ಲಿ ರಾಹುಲ್ ಅವರಿಗೆ ಕೈಗಾರಿಕಾ ನಿವೇಶನವ ನೀಡಲಾಗಿಲ್ಲ. ಬದಲಾಗ ಸಿ.ಎ.ನಿವೇಶನವನ್ನು ಆರ್ ಆಂಡ್ ಡಿ ಕೇಂದ್ರ ಸ್ಥಾಪನೆಗಾಗಿ ನಿಗದಿಪಡಿಸಿದ ಬೆಲೆ ಹಸ್ತಾಂತರಿಸಲಾಗಿದೆ. ಇದರಲ್ಲಿ ರಿಯಾಯಿತಿ ನೀಡಲಾಗಿಲ್ಲ ಎಂದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ರೂ.137 ಕೋಟಿ ನಷ್ಟ
ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಕೈಗಾರಿಕಾ ಪ್ರದೇಶದಲ್ಲೇ 116 ಎಕರೆ ಭೂಮಿಯನ್ನು ಕೇವಲ ರೂ.50 ಕೋಟಿಗೆ ಮಾರಾಟ ಮಾಡಲಾಗಿತ್ತು. ಇದರಿಂದ ಸರ್ಕಾರದ ಭೊಕ್ಕಸಕ್ಕೆ 137 ಕೋಟಿ ರೂಪಾಯಿ ನಷ್ಟ ಉಂಟಾಗಿದೆ. ಲೆಹರ್ ಸಿಂಗ್ ಅವರು ಈ ಬಗ್ಗೆಯೂ ಚಕಾರ ಎತ್ತಬಹುದಲ್ಲವೇ? ಎಂದು ಅವರು ಪ್ರಶ್ನೆ ಮಾಡಿದರು.
ಏಕ ಗವಾಕ್ಷಿ ಸಮಿತಿ, ಪಾರದರ್ಶಕ ವ್ಯವಸ್ಥೆ ಜಾರಿ
ಈ ಹಿಂದೆ ಕರ್ನಾಟಕ ರಾಜ್ಯ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿಯೇ (ಕೆಐಎಡಿಬಿ) ಸಿ.ಎ. ನಿವೇಶನಗಳನ್ನು ಹಂಚಿಕೆ ಮಾಡುತ್ತಿತ್ತು. ಆದರೆ, ನಾನು ಸಚಿವನಾದ ಮೇಲೆ ರಾಜ್ಯಮಟ್ಟದ ಏಕ ಗವಾಕ್ಷಿ ಸಮಿತಿ ಅನುಮೋದನೆ ನೀಡಿ, ರಾಜ್ಯದಲ್ಲಿ ಪಾರದರ್ಶಕ ವ್ಯವಸ್ಥೆ ಜಾರಿ ಮಾಡಲಾಯಿತು. ಅಲ್ಲದೆ ಮೊದಲ ಬಾರಿಗೆ ಸಿ.ಎ ನಿವೇಶನಗಳ ಹಂಚಿಕೆಯಲ್ಲೂ ಪರಿಶಿಷ್ಟರಿಗೆ ಶೇ 24.10ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಲೆಹರ್ ಸಿಂಗ್ ಈ ಸತ್ಯವನ್ನು ಅರಿತು ಮಾತನಾಡಬೇಕು ಎಂದು ಅವರು ವಿವರಿಸಿದರು.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications