ಎರಡನೇ ಹಂತದ ಮೆಟ್ರೋ ಮಾರ್ಗ: ಹಳಿ ಅಳವಡಿಸಲು ಭರದ ಸಿದ್ಧತೆ
ಬೆಂಗಳೂರು, ಡಿಸೆಂಬರ್ 23 : ನಮ್ಮ ಮೆಟ್ರೋ ಎರಡನೇ ಹಂತದ ಕಾಮಗಾರಿ ಚುರುಕಾಗಿದೆ. ನಮ್ಮ ಮೆಟ್ರೋ ಎರಡನೇ ಹಂತದ ಯೋಜನೆಯಲ್ಲಿ ಎತ್ತರಿಸಿದ ಮಾರ್ಗ ಹಾಗೂ ನಿಲ್ದಾಣ ನಿರ್ಮಿಸುವ ಕಾಮಗಾರಿ ಪ್ರಗತಿಯಲ್ಲಿರುವಾಗಲೇ 455 ಕೋಟಿ ರೂ. ವೆಚ್ಚದಲ್ಲಿ 72 ಕಿ.ಮೀ ಉದ್ದದ ಹಳಿ ಅಳವಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಎರಡನೇ ಹಂತದ ಯೋಜನೆಯಲ್ಲಿ ಯಲಚೇನಹಳ್ಳಿಯಿಂದ ಅಂಜನಾಪುರ ಟೌನ್ ಶಿಪ್ ವರೆಗೆ ಹಾಗೂ ನಾಯಂಡಹಳ್ಳಿಯಿಂದ ಕೆಂಗೇರಿವರೆಗೆ ಎತ್ತರಿಸದ ಮಾರ್ಗ ನಿರ್ಮಿಸುವ ಕಾಮಗಾರಿ ಅಂತಿಮ ಹಂತದಲ್ಲಿದೆ. ಇದರ ಜತೆಗೆ ಬೈಯ್ಯಪ್ಪನಹಳ್ಳಿಯಿಂದ ವೈಟ್ ಫೀಲ್ಡ್, ಹೆಸರಘಟ್ಟದಿಂದ ಬಿಐಇಸಿವರೆಗೆ , ಆರ್ ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ಹಾಗೂ ಗೊಟ್ಟಿಗೆರೆಯಿಂದ ನಾಗವಾರದವರೆಗಿನ ಮಾರ್ಗ ನಿರ್ಮಿಸುವ ಕಾಮಗಾರಿ ಪ್ರಗತಿಯಲ್ಲಿದೆ.

ಇದರಲ್ಲಿ ಯಲಚೇನಹಳ್ಳಿ-ಅಂಜನಾಪುರ, ಟೌನ್ ಶಿಪ್ ಎತ್ತರಿಸಿದ ಮಾರ್ಗದಲ್ಲಿ 2018 ರ ಅಂತ್ಯದಲ್ಲಿ ವಾಣಿಜ್ಯ ಸಂಚಾರ ಆರಂಭಿಸುವ ಗುರಿ ಇದೆ. ಈ ಎಲ್ಲ ಮಾರ್ಗಗಳಲ್ಲಿ ಹಳಿ ಅಳವಡಿಸಲು ಈಗಾಗಲೇ ಟೆಂಡರ್ ಕರೆಯಲಾಗಿದೆ. ಮೆಟ್ರೋದ ಎತ್ತರಿಸಿದ ಮಾರ್ಗ ಹಾಗೂ ಸುರಂಗ ಮಾರ್ಗಕ್ಕೆ ಈ ಹಳಿ ಬಳಕೆಯಾಗಲಿದೆ.
ಒಟ್ಟು 72 ಕಿ.ಮೀ ಉದ್ದದ ಹಳಿ ರೈಲ್ವೆ ಇಲಾಖೆಯ ಮಾರ್ಗಸೂಚಿಗೆ ತಕ್ಕಂತೆ ತಯಾರಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಮೆಟ್ರೋದಲ್ಲಿ ಎರಡು ಜತೆ ಹಳಿಗಳನ್ನು ಅಳವಡಿಸಲಾಗುತ್ತಿದೆ. ಒಂದು ರೈಲಿನಿಂದ ಮತ್ತೊಂದು ರೈಲಿಗೆ4 ರಿಂದ5 ಅಡಿಅಂತರವಿರುವಂತೆ ಈ ಹಳಿಗಳನ್ನು ಅಳವಡಿಸಲಾಗುತ್ತದೆ.
ಜತೆಗೆ ಹಳಿಯ ಸುತ್ತ ಕಾಂಕ್ರಿಟ್ ಹಾಕಿ ಗಟ್ಟಿಗೊಳಿಸಲಾಗುತ್ತದೆ. ಮೆಟ್ರೋದ ನಿಲ್ದಾಣ ಹಾಗೂ ಮಾರ್ಗ ಹೊರತುಪಡಿಸಿದರೆ , ಅತ್ಯಧಿಕ ಕಾಂಕ್ರಿಟ್ ಈ ಹಳಿ ಸುತ್ತ ಹಾಕಲು ಬಳಕೆಯಾಗುತ್ತದೆ. ರೈಲು ಚಲಿಸುವಾಗ ಉಂಟಾಗುವ ಕಂಪನದ ಪ್ರಮಾಣವನ್ನು ಕಾಕ್ರಿಟ್ ತಗ್ಗಿಸುತ್ತದೆ.
ಉಚಿತ ಜಾಗ: ಹಳಿ ನಿರ್ಮಿಸುವ ಗುತ್ತಿಗೆದಾರರಿಗೆ ಬಿಎಂಆರ್ ಸಿಎಲ್ ಉಚಿತವಾಗಿ ಜಾಗ ನೀಡಲಿದೆ. ಪೀಣ್ಯದಲ್ಲಿ 21,500 ಚದರ ಮೀಟರ್ ಜಾಗವನ್ನು ನಿಗಮ ಹೊಂದಿದ್ದು, ಇದನ್ನು ಹಳಿ ತಯಾರಿಸುವ ಘಟಕಕ್ಕಾಗಿ ಬಿಟ್ಟುಕೊಡಲಾಗುತ್ತದೆ. ಇಲ್ಲಿ ಹಳಿಗಳನ್ನು ತಯಾರಿಸಿ ಮಾರ್ಗದ ಮೇಲೆ ಕೊಂಡೊಯ್ದು ಅಳವಡಿಸಲಾಗುತ್ತದೆ.
-
Bengaluru Metro: ನೇರಳೆ- ಹಸಿರು ಮಾರ್ಗದ ಸಂಚಾರ ದಟ್ಟಣೆಗೆ ಮುಕ್ತಿ, ಹೊಸ ರೈಲುಗಳಿಗೆ ಬೋರ್ಡ್ ಅನುಮತಿ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು?












Click it and Unblock the Notifications