ಎರಡನೇ ಹಂತದ ಮೆಟ್ರೋ ಮಾರ್ಗ: ಹಳಿ ಅಳವಡಿಸಲು ಭರದ ಸಿದ್ಧತೆ
ಬೆಂಗಳೂರು, ಡಿಸೆಂಬರ್ 23 : ನಮ್ಮ ಮೆಟ್ರೋ ಎರಡನೇ ಹಂತದ ಕಾಮಗಾರಿ ಚುರುಕಾಗಿದೆ. ನಮ್ಮ ಮೆಟ್ರೋ ಎರಡನೇ ಹಂತದ ಯೋಜನೆಯಲ್ಲಿ ಎತ್ತರಿಸಿದ ಮಾರ್ಗ ಹಾಗೂ ನಿಲ್ದಾಣ ನಿರ್ಮಿಸುವ ಕಾಮಗಾರಿ ಪ್ರಗತಿಯಲ್ಲಿರುವಾಗಲೇ 455 ಕೋಟಿ ರೂ. ವೆಚ್ಚದಲ್ಲಿ 72 ಕಿ.ಮೀ ಉದ್ದದ ಹಳಿ ಅಳವಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಎರಡನೇ ಹಂತದ ಯೋಜನೆಯಲ್ಲಿ ಯಲಚೇನಹಳ್ಳಿಯಿಂದ ಅಂಜನಾಪುರ ಟೌನ್ ಶಿಪ್ ವರೆಗೆ ಹಾಗೂ ನಾಯಂಡಹಳ್ಳಿಯಿಂದ ಕೆಂಗೇರಿವರೆಗೆ ಎತ್ತರಿಸದ ಮಾರ್ಗ ನಿರ್ಮಿಸುವ ಕಾಮಗಾರಿ ಅಂತಿಮ ಹಂತದಲ್ಲಿದೆ. ಇದರ ಜತೆಗೆ ಬೈಯ್ಯಪ್ಪನಹಳ್ಳಿಯಿಂದ ವೈಟ್ ಫೀಲ್ಡ್, ಹೆಸರಘಟ್ಟದಿಂದ ಬಿಐಇಸಿವರೆಗೆ , ಆರ್ ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ಹಾಗೂ ಗೊಟ್ಟಿಗೆರೆಯಿಂದ ನಾಗವಾರದವರೆಗಿನ ಮಾರ್ಗ ನಿರ್ಮಿಸುವ ಕಾಮಗಾರಿ ಪ್ರಗತಿಯಲ್ಲಿದೆ.

ಇದರಲ್ಲಿ ಯಲಚೇನಹಳ್ಳಿ-ಅಂಜನಾಪುರ, ಟೌನ್ ಶಿಪ್ ಎತ್ತರಿಸಿದ ಮಾರ್ಗದಲ್ಲಿ 2018 ರ ಅಂತ್ಯದಲ್ಲಿ ವಾಣಿಜ್ಯ ಸಂಚಾರ ಆರಂಭಿಸುವ ಗುರಿ ಇದೆ. ಈ ಎಲ್ಲ ಮಾರ್ಗಗಳಲ್ಲಿ ಹಳಿ ಅಳವಡಿಸಲು ಈಗಾಗಲೇ ಟೆಂಡರ್ ಕರೆಯಲಾಗಿದೆ. ಮೆಟ್ರೋದ ಎತ್ತರಿಸಿದ ಮಾರ್ಗ ಹಾಗೂ ಸುರಂಗ ಮಾರ್ಗಕ್ಕೆ ಈ ಹಳಿ ಬಳಕೆಯಾಗಲಿದೆ.
ಒಟ್ಟು 72 ಕಿ.ಮೀ ಉದ್ದದ ಹಳಿ ರೈಲ್ವೆ ಇಲಾಖೆಯ ಮಾರ್ಗಸೂಚಿಗೆ ತಕ್ಕಂತೆ ತಯಾರಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಮೆಟ್ರೋದಲ್ಲಿ ಎರಡು ಜತೆ ಹಳಿಗಳನ್ನು ಅಳವಡಿಸಲಾಗುತ್ತಿದೆ. ಒಂದು ರೈಲಿನಿಂದ ಮತ್ತೊಂದು ರೈಲಿಗೆ4 ರಿಂದ5 ಅಡಿಅಂತರವಿರುವಂತೆ ಈ ಹಳಿಗಳನ್ನು ಅಳವಡಿಸಲಾಗುತ್ತದೆ.
ಜತೆಗೆ ಹಳಿಯ ಸುತ್ತ ಕಾಂಕ್ರಿಟ್ ಹಾಕಿ ಗಟ್ಟಿಗೊಳಿಸಲಾಗುತ್ತದೆ. ಮೆಟ್ರೋದ ನಿಲ್ದಾಣ ಹಾಗೂ ಮಾರ್ಗ ಹೊರತುಪಡಿಸಿದರೆ , ಅತ್ಯಧಿಕ ಕಾಂಕ್ರಿಟ್ ಈ ಹಳಿ ಸುತ್ತ ಹಾಕಲು ಬಳಕೆಯಾಗುತ್ತದೆ. ರೈಲು ಚಲಿಸುವಾಗ ಉಂಟಾಗುವ ಕಂಪನದ ಪ್ರಮಾಣವನ್ನು ಕಾಕ್ರಿಟ್ ತಗ್ಗಿಸುತ್ತದೆ.
ಉಚಿತ ಜಾಗ: ಹಳಿ ನಿರ್ಮಿಸುವ ಗುತ್ತಿಗೆದಾರರಿಗೆ ಬಿಎಂಆರ್ ಸಿಎಲ್ ಉಚಿತವಾಗಿ ಜಾಗ ನೀಡಲಿದೆ. ಪೀಣ್ಯದಲ್ಲಿ 21,500 ಚದರ ಮೀಟರ್ ಜಾಗವನ್ನು ನಿಗಮ ಹೊಂದಿದ್ದು, ಇದನ್ನು ಹಳಿ ತಯಾರಿಸುವ ಘಟಕಕ್ಕಾಗಿ ಬಿಟ್ಟುಕೊಡಲಾಗುತ್ತದೆ. ಇಲ್ಲಿ ಹಳಿಗಳನ್ನು ತಯಾರಿಸಿ ಮಾರ್ಗದ ಮೇಲೆ ಕೊಂಡೊಯ್ದು ಅಳವಡಿಸಲಾಗುತ್ತದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications