ಬೆಂಗಳೂರು ರೈಲ್ವೇ ನಿಲ್ದಾಣಕ್ಕೆ ಪಿಯೂಷ್ ಗೋಯಲ್ ಅಚ್ಚರಿಯ ಭೇಟಿ
ಬೆಂಗಳೂರು, ಜನವರಿ 18: ಇಂದು ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣಕ್ಕೆ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಅಚ್ಚರಿಯ ಭೇಟಿ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು ಶೀಘ್ರದಲ್ಲೇ ಬೆಂಗಳೂರಿಗೆ ಸಬ್ ಅರ್ಬನ್ ರೈಲು ಬರಲಿದೆ ಎಂದು ಹೇಳಿದರು.

"ಈಗಾಗಲೇ ಕೇಂದ್ರ ರೈಲ್ವೇ ಇಲಾಖೆ ಸಬ್ ಅರ್ಬನ್ ರೈಲ್ವೇ ಪ್ಲಾನ್ ರೆಡಿ ಮಾಡಿಕೊಂಡಿದೆ. 22 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸಬ್ ಅರ್ಬನ್ ರೈಲ್ವೇ ಸೇವೆಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ. ಬೆಂಗಳೂರಿಗೆ ಈಗಾಗಲೆ ಮೆಟ್ರೋ ಬಂದಿದೆ. ಇದೀಗ ಸಬ್ ಅರ್ಬನ್ ರೈಲ್ವೇ ಸೇವೆಗೂ ಕೇಂದ್ರ ಸಿದ್ಧವಾಗಿದೆ," ಎಂದು ಪಿಯೂಷ್ ಗೋಯಲ್ ಮಾಹಿತಿ ನೀಡಿದರು.

"ಬೆಂಗಳೂರಿನ ಸಂಚಾರ ದಟ್ಟಣೆಗೆ ಕೇಂದ್ರ ಪರಿಹಾರ ಹುಡುಕಿದೆ. ಮುಂದಿನ ಮೂರುವರೆ ವರ್ಷಗಳಲ್ಲಿ ಸಬ್ ಅರ್ಬನ್ ರೈಲು ನಗರದಲ್ಲಿ ಸಂಚಾರ ಮಾಡುವ ಸಾಧ್ಯತೆಯಿದೆ. ಮೈಸೂರು ರಸ್ತೆ, ಹೊಸೂರು ರಸ್ತೆ, ನೆಲಮಂಗಲ ರಸ್ತೆ, ದೇವನಹಳ್ಳಿ ರಸ್ತೆ, ವೈಟ್ ಫೀಲ್ಡ್ ರಸ್ತೆ, ಕನಕಪುರ ರಸ್ತೆ, ಎಲೆಕ್ಟ್ರಾನಿಕ್ ಸಿಟಿ ರಸ್ತೆಗಳಲ್ಲಿ ಸಬ್ ಅರ್ಬನ್ ರೈಲು ಬರಲಿದೆ. ಅಂದಾಜು 2022 ಕ್ಕೆ ನಗರದಲ್ಲಿ ಸಬ್ ಅರ್ಬನ್ ರೈಲು ಓಡಾಟ ಆರಂಭವಾಗಬಹುದು," ಎಂದು ಪಿಯೂಷ್ ಗೋಯಲ್ ಹೇಳಿದರು.

"160 ಕಿಮೀ ಉದ್ದದ ಸಬ್ ಅರ್ಬನ್ ರೈಲು ಸೇವೆಗೆ ಕೇಂದ್ರ ಒಪ್ಪಿಗೆ ನೀಡಿದೆ. ಅಂದಾಜು 35 ಸಾವಿರ ಕೋಟಿ ರೂಪಾಯಿಗಳ ಯೋಜನೆ ಇದು," ಎಂದು ಗೋಯಲ್ ವಿವರ ನೀಡಿದರು.
ಭೇಟಿ ವೇಳೆ ಕೇಂದ್ರ ಸಚಿವ ಅನಂತ್ ಕುಮಾರ್, ಬೆಂಗಳೂರು ಕೇಂದ್ರ ಸಂಸದ ಪಿಸಿ ಮೋಹನ್, ಶಾಸಕ ಅರವಿಂದ ಲಿಂಬಾವಳಿ, ಆರ್. ಅಶೋಕ್ ಉಪಸ್ಥಿತರಿದ್ದರು.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ












Click it and Unblock the Notifications