ಬೆಂಗಳೂರು ರೈಲ್ವೇ ನಿಲ್ದಾಣಕ್ಕೆ ಪಿಯೂಷ್ ಗೋಯಲ್ ಅಚ್ಚರಿಯ ಭೇಟಿ
ಬೆಂಗಳೂರು, ಜನವರಿ 18: ಇಂದು ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣಕ್ಕೆ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಅಚ್ಚರಿಯ ಭೇಟಿ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು ಶೀಘ್ರದಲ್ಲೇ ಬೆಂಗಳೂರಿಗೆ ಸಬ್ ಅರ್ಬನ್ ರೈಲು ಬರಲಿದೆ ಎಂದು ಹೇಳಿದರು.

"ಈಗಾಗಲೇ ಕೇಂದ್ರ ರೈಲ್ವೇ ಇಲಾಖೆ ಸಬ್ ಅರ್ಬನ್ ರೈಲ್ವೇ ಪ್ಲಾನ್ ರೆಡಿ ಮಾಡಿಕೊಂಡಿದೆ. 22 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸಬ್ ಅರ್ಬನ್ ರೈಲ್ವೇ ಸೇವೆಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ. ಬೆಂಗಳೂರಿಗೆ ಈಗಾಗಲೆ ಮೆಟ್ರೋ ಬಂದಿದೆ. ಇದೀಗ ಸಬ್ ಅರ್ಬನ್ ರೈಲ್ವೇ ಸೇವೆಗೂ ಕೇಂದ್ರ ಸಿದ್ಧವಾಗಿದೆ," ಎಂದು ಪಿಯೂಷ್ ಗೋಯಲ್ ಮಾಹಿತಿ ನೀಡಿದರು.

"ಬೆಂಗಳೂರಿನ ಸಂಚಾರ ದಟ್ಟಣೆಗೆ ಕೇಂದ್ರ ಪರಿಹಾರ ಹುಡುಕಿದೆ. ಮುಂದಿನ ಮೂರುವರೆ ವರ್ಷಗಳಲ್ಲಿ ಸಬ್ ಅರ್ಬನ್ ರೈಲು ನಗರದಲ್ಲಿ ಸಂಚಾರ ಮಾಡುವ ಸಾಧ್ಯತೆಯಿದೆ. ಮೈಸೂರು ರಸ್ತೆ, ಹೊಸೂರು ರಸ್ತೆ, ನೆಲಮಂಗಲ ರಸ್ತೆ, ದೇವನಹಳ್ಳಿ ರಸ್ತೆ, ವೈಟ್ ಫೀಲ್ಡ್ ರಸ್ತೆ, ಕನಕಪುರ ರಸ್ತೆ, ಎಲೆಕ್ಟ್ರಾನಿಕ್ ಸಿಟಿ ರಸ್ತೆಗಳಲ್ಲಿ ಸಬ್ ಅರ್ಬನ್ ರೈಲು ಬರಲಿದೆ. ಅಂದಾಜು 2022 ಕ್ಕೆ ನಗರದಲ್ಲಿ ಸಬ್ ಅರ್ಬನ್ ರೈಲು ಓಡಾಟ ಆರಂಭವಾಗಬಹುದು," ಎಂದು ಪಿಯೂಷ್ ಗೋಯಲ್ ಹೇಳಿದರು.

"160 ಕಿಮೀ ಉದ್ದದ ಸಬ್ ಅರ್ಬನ್ ರೈಲು ಸೇವೆಗೆ ಕೇಂದ್ರ ಒಪ್ಪಿಗೆ ನೀಡಿದೆ. ಅಂದಾಜು 35 ಸಾವಿರ ಕೋಟಿ ರೂಪಾಯಿಗಳ ಯೋಜನೆ ಇದು," ಎಂದು ಗೋಯಲ್ ವಿವರ ನೀಡಿದರು.
ಭೇಟಿ ವೇಳೆ ಕೇಂದ್ರ ಸಚಿವ ಅನಂತ್ ಕುಮಾರ್, ಬೆಂಗಳೂರು ಕೇಂದ್ರ ಸಂಸದ ಪಿಸಿ ಮೋಹನ್, ಶಾಸಕ ಅರವಿಂದ ಲಿಂಬಾವಳಿ, ಆರ್. ಅಶೋಕ್ ಉಪಸ್ಥಿತರಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications