ಕೆಐಎಎಲ್ ರೈಲು ನಿಲ್ದಾಣ ಸಿದ್ಧ; ರೈಲು ಸಂಚಾರ ಯಾವಾಗ?
ಬೆಂಗಳೂರು, ಆಗಸ್ಟ್ 11 : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರೈಲು ನಿಲ್ದಾಣ ಆಗಸ್ಟ್ ಅಂತ್ಯಕ್ಕೆ ವಾಣಿಜ್ಯ ಸಂಚಾರಕ್ಕೆ ಮುಕ್ತವಾಗಲಿದೆ. ಆದರೆ, ರೈಲು ಸಂಚಾರ ಯಾವಾಗ ಆರಂಭವಾಗಲಿದೆ? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ.
Recommended Video
ಬೆಂಗಳೂರಿನ ಬಹು ನಿರೀಕ್ಷಿತ ರೈಲು ನಿಲ್ದಾಣ ಕೆಐಎಎಲ್ ಬಳಿ ನಿರ್ಮಾಣವಾಗುತ್ತಿದೆ. ಈ ರೈಲು ನಿಲ್ದಾಣ ಆರಂಭವಾದರೆ ವಿಮಾನ ನಿಲ್ದಾಣ ಪ್ರಯಾಣಿಸುವ ಜನರಿಗೆ ಅನುಕೂಲವಾಗಲಿದೆ. ನಿಲ್ದಾಣದ ಕೊನೆ ಹಂತದ ಕೆಲಸಗಳು ನಡೆಯುತ್ತಿದ್ದು, ನಿರ್ಮಾಣ ಕಾರ್ಯ ಈ ತಿಂಗಳ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ.
ಬೆಂಗಳೂರು ರೈಲ್ವೆ ವಿಭಾಗದ ಮ್ಯಾನೇಜರ್ ಅಶೋಕ್ ಕುಮಾರ್ ವರ್ಮಾ ಈ ಕುರಿತು ಮಾಹಿತಿ ನೀಡಿದ್ದಾರೆ. "ನಿಲ್ದಾಣದ ಕಟ್ಟಡ ನಿರ್ಮಾಣ ಕಾರ್ಯ, ವಿದ್ಯುತ್ ಕಾಮಗಾರಿ, ಫ್ಲಾಟ್ ಫಾರಂ ನಿರ್ಮಾಣ ಮುಂತಾದವುಗಳು ಪೂರ್ಣಗೊಂಡಿವೆ" ಎಂದು ಹೇಳಿದ್ದಾರೆ.

"ಮೊದಲು 2020ರ ಮಾರ್ಚ್ನಲ್ಲಿ ನಿಲ್ದಾಣ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಿದೆ ಎಂದು ಅಂದಾಜಿಸಲಾಗಿತ್ತು. ಆದರೆ, ಕೋವಿಡ್ 19 ಪರಿಸ್ಥಿತಿ ಹಿನ್ನಲೆಯಲ್ಲಿ ಕಾಮಗಾರಿ ವಿಳಂಬವಾಯಿತು" ಎಂದು ಅಶೋಕ್ ಕುಮಾರ್ ವರ್ಮಾ ತಿಳಿಸಿದ್ದಾರೆ.
ರೈಲು ಸಂಚಾರ ಯಾವಾಗ? : ಕೆಐಎಎಲ್ ಬಳಿ ರೈಲು ನಿಲ್ದಾಣ ಕಾಮಗಾರಿ ಪೂರ್ಣಗೊಂಡರೂ ರೈಲು ಸಂಚಾರ ಆರಂಭಯಾವಾಗ? ಎಂಬ ಪ್ರಶ್ನೆ ಕಾಡುತ್ತಿದೆ. ರೈಲುಗಳ ಸಾಮಾನ್ಯ ಸಂಚಾರ ಆರಂಭವಾದ ಬಳಿಕ ಕೆಐಎಎಲ್ಗೆ ಪ್ರಯಾಣಿಕರು ರೈಲಿನಲ್ಲಿ ಸಂಚಾರ ನಡೆಸಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ದೇವನಹಳ್ಳಿ ರೈಲು ನಿಲ್ದಾಣದಿಂದ ಕೆಐಎಎಲ್ ವಿಮಾನ ನಿಲ್ದಾಣಕ್ಕೆ 10 ನಿಮಿಷದಲ್ಲಿ ಸಂಚಾರ ನಡೆಸಬಹುದಾಗಿದೆ. ಬಿಎಂಟಿಸಿ ರೈಲು ನಿಲ್ದಾಣದಿಂದ ವಿಮಾನ ನಿಲ್ದಾಣಕ್ಕೆ ಫೀಡರ್ ಬಸ್ ಸೇವೆಯನ್ನು ಆರಂಭಿಸಲು ತೀರ್ಮಾನಿಸಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
Opinion - Kalyana Karnataka Train: ಕೇಂದ್ರ ಸಚಿವ ವಿ ಸೋಮಣ್ಣ ಅವರೇ ಕನ್ನಡಿಗರ ಸಂಕಷ್ಟ ಸ್ವಲ್ಪ ನೋಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
New Railway Line: 6000 ಕಿಮೀ ರೈಲ್ವೆ ಜಾಲ ವಿಸ್ತರಣೆ, 100 ಯೋಜನೆಗಳ ಜಾರಿಗೆ ₹1.53 ಲಕ್ಷ ಕೋಟಿ ಹೂಡಿಕೆ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications