ಬೆಳ್ಳಂದೂರು ಕೆರೆಯಲ್ಲಿ ಮತ್ತೆ ನೊರೆ: ಇದಕ್ಕಿಲ್ಲವೇ ಶಾಶ್ವತ ಪರಿಹಾರ
ಬೆಂಗಳೂರು, ಮೇ5: ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಬೆಳ್ಳಂದೂರು ಕೆರೆಯಲ್ಲಿ ಮತ್ತೆ ನೊರೆ ಕಾಣಿಸಿಕೊಂಡಿದೆ. ಕೆರೆ ಪೂರ್ತಿ ನೊರೆ ತುಂಬಿಕೊಂಡಿದ್ದು, ಮತ್ತೊಂದು ಮಳೆ ಬಂದರೆ ನೊರೆಯ ಬುಗ್ಗೆಗಳು ರಸ್ತೆಗೆ ಹಾರುವ ಆತಂಕ ಶುರುವಾಗಿದೆ.
ಕೆರೆಯಲ್ಲಿ ನೊರೆ ಹೆಚ್ಚಿದಷ್ಟೂ ಸಮಸ್ಯೆಗಳು ಉಲ್ಬಣಿಸುತ್ತವೆ. ಯಮಲೂರು ಕೋಡಿ ಬಳಿಯಲ್ಲಿ ಹೆಚ್ಚು ಪ್ರಮಾಣದ ನೊರೆ ಕಾಣಿಸಿಕೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಅನೇಕ ವರ್ಷಗಳಿಂದ ಈ ಸಮಸ್ಯೆ ಹಾಗೆಯೇ ಉಳಿದಿದೆ. ರಾಜಕೀಯ ಪಕ್ಷಗಳ ನಾಯಕರು ಈಗ ಮತ ಕೇಳಲು ಬರುತ್ತಿದ್ದಾರೆ. ಆದರೆ ಅಧಿಕಾರದಲ್ಲಿದ್ದಾಗ ಯಾವುದೇ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನ ಮಾಡಿಲ್ಲ. ಅನೇಕ ವರ್ಷಗಳಿಂದ ಈ ಬಗ್ಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವೆಗಿಲ್ಲ.

ನ್ಯಾಯಾಲಯ ಮಧ್ಯ ಪ್ರವೇಶಿಸಿದಾಗ ತೋರಿಕೆಗೆ ಕೆಲವು ಕ್ರಮಗಳನ್ನು ಕೈಗೊಂಡಿದ್ದು ಬಿಟ್ಟರೆ ಅಕ್ಷರಶಃ ನರಕದಲ್ಲಿ ಬದುಕುವಂತಾಗಿದೆ ಎಂದು ಆರೋಪಿಸಿದ್ದಾರೆ.
ಇದುವರೆಗೆ ಹಲವಾರು ಬಾರಿ ಬೆಂಕಿ, ನೊರೆ ಕಾಣಿಸಿಕೊಂಡರು, ಆ ಸಂದರ್ಭದಲ್ಲಿ ಅದನ್ನು ಆರಿಸುವ ಕೆಲಸ ಮಾಡಿದ್ದಾರೆ ವಿನಃ ಅದಕ್ಕೆ ಶಾಶ್ವತ ಪರಿಹಾರ ಕೊಡಿಸುವಲ್ಲಿ ಎಲ್ಲಾ ಪಕ್ಷಗಳು ವಿಫಲವಾಗಿದೆ. ಈಗ ಮತ್ತೊಮ್ಮೆ ಅದೇ ಪರಿಸ್ಥಿತಿ ನಿರ್ಮಾಣವಾಗಿದೆ ಇದು ಅಲ್ಲಿರುವ ಸ್ಥಳೀಯರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರಲಿದೆ. ಆದಷ್ಟು ಬೇಗ ಈ ಸಮಸ್ಯೆಯನ್ನು ಬಗೆಹರಿಸುವತ್ತ ಗಮನಹರಿಸಬೇಕಿದೆ.
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್












Click it and Unblock the Notifications