ಮಳೆ ತಂದ ಅವಾಂತರ: ಎರಡು ಎಕರೆ ದ್ರಾಕ್ಷಿ ಬೆಳೆ ನಾಶ
ಬೆಂಗಳೂರು, ಏಪ್ರಿಲ್ 30: ಬುಧವಾರ ಸುರಿದ ಭಾರೀ ಮಳೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವೆಂಕಟಗಿರಿಕೋಟೆ ಗ್ರಾಮದಲ್ಲಿ ಸುಮಾರು ಎರಡು ಎಕರೆ ದ್ರಾಕ್ಷಿ ಬೆಳೆ ಸಂಪೂರ್ಣ ನಾಶವಾಗಿದೆ.
Recommended Video
ಈ ಕೊರೊನಾ ವೈರಸ್ ಎಫೆಕ್ಟ್ ಮಧ್ಯೆ ರೈತರಿಗೆ ನ್ಯಾಯಯುತ ಬೆಲೆ ಸಿಗದೇ ಸಂಕಟ ಪಡುತ್ತಿರುವ ಸಂದರ್ಭದಲ್ಲಿಯೇ ದ್ರಾಕ್ಷಿ ಬೆಳೆ ನಾಶವಾಗಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ.
ಮಳೆ ತಂದ ಅವಾಂತರ: ದೇವನಹಹಳ್ಳಿಯಲ್ಲಿ ಎರಡು ಎಕರೆ ದ್ರಾಕ್ಷಿ ಬೆಳೆ ನಾಶBS Yediyurappa Siddaramaiah
Posted by Bengaluru Zone onThursday, 30 April 2020
ದೇವನಹಳ್ಳಿ ತಾಲ್ಲೂಕಿನ ವೆಂಕಟಗಿರಿಕೋಟೆ ಗ್ರಾಮದ ದೇವರಾಜಪ್ಪ ಎಂಬ ರೈತ ಕಳೆದ ಐದಾರು ವರ್ಷಗಳಿಂದ ಸಾಕಿ ಬೆಳೆಸಿದ್ದ, 15 ರಿಂದ 20 ಲಕ್ಷ ರೂ. ಮೌಲ್ಯದ ದ್ರಾಕ್ಷಿ ತೋಟ ಈಗ ಕಟಾವಿಗೆ ಸಿದ್ದವಾಗಿತ್ತು.

ಸುಮಾರು 50 ರಿಂದ 60 ಟನ್ ದ್ರಾಕ್ಷಿ ಬೆಳೆ ಬಂದಿತ್ತು. ಬುಧವಾರ ಬೆಳಿಗ್ಗೆ ಸುರಿದ ಧಾರಾಕಾರ ಮಳೆಗೆ ಮಕಾಡೆ ಮಲಗಿ ಚಾಪೆಯಂತಾಗಿದೆ. ರೈತ ದೇವರಾಜಪ್ಪ ದಂಪತಿ ತಮಗೆ ಆಗಿರುವ ನಷ್ಟವನ್ನು ತಾಲ್ಲೂಕು ಆಡಳಿತ ಹಾಗೂ ಸರ್ಕಾರ ಮಾನವೀಯ ದೃಷ್ಟಿಯಿಂದ ಪರಿಹಾರ ಕೊಡುವ ಮೂಲಕ ಆಸರೆಯಾಗಬೇಕೆಂದು ಕೇಳಿಕೊಂಡಿದ್ದಾರೆ.

ಗಾಳಿ-ಮಳೆಗೆ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳಲ್ಲಿ ದ್ರಾಕ್ಷಿ, ಹೂವು, ಹಣ್ಣು, ಟೊಮ್ಯಾಟೊ, ತರಕಾರಿ ಬೆಳೆಗಳು ನಾಶವಾಗಿ ಹೋಗಿವೆ. ರೈತರ ಗೋಳು ಕೇಳುವವರಾರು ಇಲ್ಲದಂತಾಗಿದೆ.
-
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications