ಬೆಂಗಳೂರಿನಲ್ಲಿ ಹಲವು ಪ್ರಮುಖ ಕಾಮಗಾರಿಗಳ ಮುಕ್ತಾಯಕ್ಕೆ ಅಡ್ಡಿಯಾದ ಮಳೆ
ಬೆಂಗಳೂರು, ಆಗಸ್ಟ್ 14: ಮುಂಗಾರು ಆರಂಭದಿಂದ ರಾಜಧಾನಿ ಬೆಂಗಳೂರಿನಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಹಲವು ಅಭಿವೃದ್ಧಿ ಕಾಮಗಾರಿಗಳ ಮುಕ್ತಾಯ ವಿಳಂಬಕ್ಕೆ ಕಾರಣವಾಗಿದೆ. ಮುಕ್ತಾಯ ಹಂತದಲ್ಲಿದ್ದ ಹಲವು ಕಾಮಗಾರಿಗಳನ್ನು ಮಳೆಯ ಕಾರಣದಿಂದ ಸ್ಥಗಿತಗೊಳಿಸಲಾಗಿದೆ.
75 ನೇ ಸ್ವಾತಂತ್ರ್ಯ ದಿನಾಚರಣೆಯ ಸ್ಮರಣಾರ್ಥ ನಗರದಲ್ಲಿ ಎರಡು ಪ್ರಮುಖ ಯೋಜನೆಗಳನ್ನು ಉದ್ಘಾಟಿಸುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯೋಜನೆ ಮಳೆಯಿಂದಾಗಿ ಹಾಳಾಗಿದೆ.
ಕೋರಮಂಗಲ ಪ್ರದೇಶದ ಮಳೆ ನೀರು ಬೆಳ್ಳಂದೂರು ಕೆರೆಗೆ ಸೇರುವ ಜಲಮಾರ್ಗ ಯೋಜನೆ ಆಗಸ್ಟ್ 15ರಂದು ಉದ್ಘಾಟನೆಯಾಗಬೇಕಾಗಿತ್ತು. ಆದರೆ ಮಳೆಯ ಕಾರಣದಿಂದ ಎರಡು ತಿಂಗಳಿನಿಂದ ಕಾಮಗಾರಿಯಲ್ಲಿ ಯಾವುದೇ ಪ್ರಗತಿ ಸಾಧಿಸಲು ಸಾಧ್ಯವಾಗಿಲ್ಲ.
"9.2 ಕಿಲೋ ಮೀಟರ್ ಉದ್ದದ ಯೋಜನೆಯಲ್ಲಿ, ಶಾಂತಿನಗರ ಬಸ್ ಟರ್ಮಿನಲ್ ಬಳಿಯ ವಾಕ್ವೇ ಸೇರಿದಂತೆ ಎನ್ಆರ್ ರಸ್ತೆ ಮತ್ತು ಬನ್ನೇರುಘಟ್ಟ ರಸ್ತೆ ನಡುವೆ ಕನಿಷ್ಠ 2.4 ಕಿಲೋ ಮೀಟರ್ ವ್ಯಾಪ್ತಿಯನ್ನು ಪೂರ್ಣಗೊಳಿಸಲು ನಾವು ಬಯಸಿದ್ದೇವೆ. ಆದರೆ, ಮಳೆಯಿಂದ ಯೋಜನೆ ಹಾಳಾಗಿದೆ ಮತ್ತು BWSSB ಕೊಳಚೆನೀರಿನ ಹರಿವನ್ನು ತಡೆಯಲು ಸಾಧ್ಯವಾಗಲಿಲ್ಲ. ಸಿವಿಲ್ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವುದು ಕೂಡ ಕಷ್ಟಕರವಾಗಿತ್ತು, ಏಕೆಂದರೆ ನಾವು ಯಂತ್ರೋಪಕರಣಗಳನ್ನು ಸ್ಥಳಾಂತರಿಸಲು ಸಾಧ್ಯವಿಲ್ಲ," ಎಂದು ಬಿಬಿಎಂಪಿ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಶೇಕಡ 62 ರಷ್ಟು ಕಾಮಗಾರಿ ಮಾತ್ರ ಪೂರ್ಣ
ಒಟ್ಟಾರೆ ಯೋಜನೆಯ ಪ್ರಗತಿ ಶೇಕಡ 62ರಷ್ಟಿದೆ ಎಂದು ಬಿಬಿಎಂಪಿ ಮುಖ್ಯ ಎಂಜಿನಿಯರ್ ಬಿ. ಎಸ್. ಪ್ರಹ್ಲಾದ್ ಹೇಳಿದ್ದಾರೆ. "ನಾವು ಯೋಜನೆಯ ಶೇಕಡ 62 ರಷ್ಟನ್ನು ಪೂರ್ಣಗೊಳಿಸಲು ಸಾಧ್ಯವಾಯಿತು. ಮಳೆಯಿಂದಾಗಿ ಕಾಲುದಾರಿ ತೆರೆಯುವ ಯೋಜನೆಯನ್ನು ಮುಂದೂಡಲಾಗಿದೆ'' ಎಂದು ಹೇಳಿದರು.
ಯೋಜನೆಯು ಮಾರ್ಚ್ 2022 ರ ಆರಂಭಿಕ ಗಡುವನ್ನು ಹೊಂದಿದ್ದರೂ, ಆಗಸ್ಟ್ ವರೆಗೆ ಐದು ತಿಂಗಳ ವಿಸ್ತರಣೆಯನ್ನು ನೀಡಲಾಯಿತು. ಯೋಜನೆಯು ಮಾರ್ಚ್ 2023 ರವರೆಗೆ ಮುಂದುವರಿಯಬಹುದು ಎಂದು ಗುತ್ತಿಗೆದಾರರು ಹೇಳಿದ್ದಾರೆ.

ಸ್ಟೀಲ್ ಬ್ರಿಡ್ಜ್ ಉದ್ಘಾಟನೆ ವಿಳಂಬ ಸಾಧ್ಯತೆ
ಸ್ವಾತಂತ್ರ್ಯ ದಿನಾಚರಣೆಗೆ ಯೋಜಿಸಲಾಗಿದ್ದ ಶಿವಾನಂದ ಸರ್ಕಲ್ ಮೇಲ್ಸೇತುವೆಯ ಉದ್ಘಾಟನೆಯನ್ನು ಮುಂದೂಡುವ ಸಾಧ್ಯತೆಯಿದೆ. ''ಹೈಕೋರ್ಟ್ನಲ್ಲಿ ಪ್ರಕರಣ ಇದ್ದ ಕಾರಣ ಕಾಮಗಾರಿಯನ್ನು ನಿಲ್ಲಿಸಲಾಗಿತ್ತು. ಹೈಕೋರ್ಟ್ನಿಂದ ಹಸಿರು ನಿಶಾನೆ ದೊರೆತ ತಕ್ಷಣ ಕಾಮಗಾರಿ ಪುನರಾರಂಭಿಸಿದ್ದರೂ ಮಳೆಯಿಂದಾಗಿ ಹೆಚ್ಚಿನ ಪ್ರಗತಿ ಸಾಧಿಸಲು ಸಾಧ್ಯವಾಗಿಲ್ಲ" ಎಂದು ಬಿಬಿಎಂಪಿಯ ಹಿರಿಯ ಎಂಜಿನಿಯರ್ ತಿಳಿಸಿದ್ದಾರೆ.
ಕಳೆದೆರಡು ದಿನಗಳಿಂದ ವಾತಾವರಣ ಸುಧಾರಿಸಿರುವುದರಿಂದ ಸೋಮವಾರದಂದು ಕನಿಷ್ಠ ಒಂದು ಬದಿಯನ್ನಾದರೂ ಮತ್ತು ಒಂದು ವಾರದೊಳಗೆ ಇನ್ನೊಂದು ಬದಿಯನ್ನು ತೆರೆಯಬಹುದು ಎಂದು ಬಿಬಿಎಂಪಿ ಅಧಿಕಾರಿಗಳು ನಿರೀಕ್ಷಿಸುತ್ತಿದ್ದಾರೆ.

ಮಳೆ ನಿಂತ ನಂತರ ಕಾಮಗಾರಿ ಚುರುಕು
''ರಸ್ತೆ ಡಾಂಬರೀಕರಣ ಮಾತ್ರ ಬಾಕಿ ಇದೆ. ಕಳೆದ ಎರಡು ದಿನಗಳಿಂದ ಮಳೆಗೆ ಬಿಡುವು ಇರುವ ಕಾರಣ, ಸೋಮವಾರದಂದು ಫ್ಲೈಓವರ್ನ ಕನಿಷ್ಠ ಒಂದು ಬದಿಯನ್ನು ಸಾರ್ವಜನಿಕರಿಗೆ ತೆರೆಯಲು ನಾವು ಶ್ರಮಿಸುತ್ತಿದ್ದೇವೆ" ಎಂದು ಬಿಬಿಎಂಪಿ ಯೋಜನಾ ವಿಭಾಗದ ಮುಖ್ಯ ಎಂಜಿನಿಯರ್ ಲೋಕೇಶ್ ಎಂ ಹೇಳಿದರು.
ಮೂಲಗಳ ಪ್ರಕಾರ, ಬಸವೇಶ್ವರನಗರ ಮೇಲ್ಸೇತುವೆ ಮತ್ತು ಸುರಂಜನ್ ದಾಸ್ ಜಂಕ್ಷನ್ ಅಂಡರ್ಪಾಸ್ ಸೇರಿದಂತೆ ಹಲವು ಪ್ರಮುಖ ಯೋಜನೆಗಳು ಕನಿಷ್ಠ ಒಂದು ತಿಂಗಳು ವಿಳಂಬವಾಗಬಹುದು.

ಬೆಂಗಳೂರಿನಲ್ಲಿ ದಾಖಲೆ ಮಳೆ
ಆಗಸ್ಟ್ 1ರಿಂದ 8ರ ನಡುವೆ ಬೆಂಗಳೂರಿನಲ್ಲಿ ಸಾಮಾನ್ಯವಾಗಿ 28 ಮಿಲಿ ಮೀಟರ್ ವಾಡಿಕೆ ಮಳೆಯಾಗುತ್ತದೆ ಆದರೆ ಈ ಬಾರಿ ಇದೇ ವೇಳೆಯದಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ದಾಖಲೆಯ 143 ಮಿಲಿ ಮೀಟರ್ ಮಅಂದರೆ ವಾಡಿಕೆ ಮಳೆಗಿಂದ ಶೇಕಡಾ 410ರಷ್ಟು ಹೆಚ್ಚು ಮಳೆ ಬಿದ್ದಿದೆ.
ಭಾರಿ ಮಳೆಯಿಂದಾಗಿ ಬೆಂಗಳೂರಿನ ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗುತ್ತದೆ. ಮಳೆಯಿಂದಾಗುವ ಹಾನಿ ತಡೆಯಲು ಬಿಬಿಎಂಪಿ ಹಲವು ಕ್ರಮಗಳನ್ನು ತೆಗೆದುಕೊಂಡರೂ ಪ್ರತಿ ಬಾರಿ ಮಳೆಯಾದಾಗಲೂ ಒಂದಿಲ್ಲೊಂದು ಸಮಸ್ಯೆ ಎದುರಾಗುತ್ತಲೇ ಇದೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ











Click it and Unblock the Notifications