ಬೆಂಗಳೂರು: ಭಾರಿ ಮಳೆಗೆ ಚರಂಡಿ ನೀರು ಮನೆಗೆ ನುಗ್ಗಿ ವೃದ್ಧೆ ಸಾವು
ಬೆಂಗಳೂರು, ಮೇ 11: ಬೆಂಗಳೂರಿನಲ್ಲಿ ಗುರುವಾರ ಸಂಜೆ ಸುರಿದ ಭಾರಿ ಮಳೆಗೆ ಏಕಾಏಕಿ ಚರಂಡಿ ನೀರು ಮನೆಗೆ ನುಗ್ಗಿ ಮನೆಯಿಂದ ಹೊರ ಬರಲಾರದೆ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ರತ್ನಮ್ಮ (55) ಮೃತ ವೃದ್ಧೆ. ಮನೆಯಲ್ಲಿ ವೃದ್ಧೆ ರತ್ನಮ್ಮ ಒಬ್ಬರೇ ವಾಸವಾಗಿದ್ದರು ಎನ್ನಲಾಗಿದೆ.
ಮನೆಯ ಪಕ್ಕದಲ್ಲೇ ರಾಜಕಾಲುವೆ ದುರಸ್ಥಿಯಾಗುತ್ತಿದ್ದು, ರಾತ್ರಿಯ ಭಾರೀ ಮಳೆಗೆ ಏಕಾಏಕಿ ಮನೆಗೆ ಒಳಚರಂಡಿ ನೀರು ನುಗ್ಗಿದೆ. ಈ ವೇಳೆ ಮನೆಯಿಂದ ಹೊರಬರಲಾರದೇ ವೃದ್ಧೆ ಸಾವಿಗೀಡಾಗಿದ್ದಾರೆ. ಕೆಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.
ಮೇ 15ರವರೆಗೂ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಮೇ 15ರವರೆಗೂ ಸಂಜೆ ಅಥವಾ ರಾತ್ರಿ ಮಳೆ ಮುಂದುವರೆಯುವ ಸೂಚನೆ೩ಯನ್ನು ಹವಾಮಾನ ಇಲಾಖೆ ನೀಡಿದೆ. ನಗರದಲ್ಲಿ ಮೇ 12 ಮತ್ತು 13ರಂದು ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ ನೀಡಲಾಗಿದೆ.

ಗುರುವಾರ 24.5 ಮಿ.ಮೀ ಮಳೆಯಾಗಿದ್ದು, ಎಚ್ಎಎಲ್ ವಿಮಾನ ನಿಲ್ದಾಣ ಪ್ರದೇಶದಲ್ಲಿ 8.4 ಮಿ.ಮೀ ಮಳೆ ದಾಖಲಾಗಿದೆ. ರಾತ್ರಿ 7.30ರ ವೇಳೆಗೆ ಪ್ರಾರಂಭವಾಗಿದ್ದ ಮಳೆ ರಾತ್ರಿ 10 ಗಂಟೆಯವರೆಗೂ ಸತತವಾಗಿ ಸುರಿದಿದೆ.












Click it and Unblock the Notifications