ಬೆಂಗಳೂರಲ್ಲಿ ಮಳೆ: ಬೆಳ್ಳಂದೂರು ಕೆರೆಯಲ್ಲಿ ನೊರೆ!
ಬೆಂಗಳೂರು, ಜುಲೈ 20: ಕಳೆದ ಎರಡು ದಿನದಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಬರದಿಂದ ಕಂಗಾಲಾಗಿದ್ದ ಜನರ ಮುಖದಲ್ಲಿ ಮಂದಹಾಸ ಮೂಡಿದೆ. ಆದರೆ ಬೆಂಗಳೂರಿನ ಬೆಳ್ಳಂದೂರು ಭಾಗದ ಜನರಿಗೆ ಮಾತ್ರ ಮಳೆ ಬಂತು ಅಂದ್ರೆ ನಿದ್ದೆ ಕೆಡುತ್ತದೆ!
ಉದ್ಯಾನ ನಗರಿಯಲ್ಲಿ ಸ್ವಲ್ಪ ಮಳೆ ಸುರಿದರೂ, ನೊರೆ ತುಂಬಿಕೊಂಡು ದುರ್ನಾತ ಬೀರುವ ಬೆಳ್ಳಂದೂರು ಕೆರೆ ಈ ಭಾಗದ ಜನರಿಗೆ ದೊಡ್ಡ ತಲೆನೋವಾಗಿದೆ. ನಿನ್ನೆ(ಜುಲೈ 19) ಬೆಂಗಳೂರಿನಲ್ಲಿ ಸುರಿದ ಮಳೆಗೆ ಬೆಳ್ಳಂದೂರು ಕೆರೆಯಲ್ಲಿ ಮತ್ತೆ ನೊರೆ ಏಳುವುದಕ್ಕೆ ಶುರುವಾಗಿದೆ.

ಕೆರೆಯ ತುಂಬ ರಾಸಾಯನಿಕಯುಕ್ತ ಬಿಳಿ ನೊರೆ ತುಂಬಿಕೊಂಡಿದ್ದು, ರಸ್ತೆಗೆಲ್ಲ ಹಾರಿ, ದಾರಿಹೋಕರ ಮುಖಕ್ಕೆಲ್ಲ ರಾಚುತ್ತಿದೆ. ಬೆಳ್ಳಂದೂರು ಕೆರೆಯಲ್ಲಿ ಹೀಗೆ ಮಾಲಿನ್ಯಯುಕ್ತ ನೊರೆಯೇಳುವುದೇನು ಹೊಸ ವಿಷಯವಲ್ಲ. ಎಷ್ಟೋ ವರ್ಷಗಳಿಂದಲೂ ಇದು ನಡೆದುಕೊಂಡುಬಂದಿದೆ. ಕೆರೆಗೆ ಅವ್ಯಾಹತವಾಗಿ ಬಂದುಸೇರಿದ ಕಾರ್ಖಾನೆಗಳ ತ್ಯಾಜ್ಯ, ಪ್ಲಾಸ್ಟಿಕ್, ರಾಸಾಯನಿಕಗಳಿಂದಾಗಿ ಕೆರೆ ಮಾಲಿನ್ಯಕ್ಕೊಳಗಾಗಿದೆ.
Karnataka : Bengaluru's Bellandur Lake spills toxic foam pic.twitter.com/y63lE3ejxZ
— ANI (@ANI_news) July 20, 2017
ಈ ಅತಿಯಾದ ರಾಸಾಯನಿಕದಿಂದಾಗಿ ಕೆರೆಯಲ್ಲಿ ಆಗಾಗ ಬೆಂಕಿಯೂ ಏಳುತ್ತಿದೆ. ಈ ಎಲ್ಲ ಬೆಳವಣಿಗೆಯೊಂದಿಗೆ, ಸ್ಥಳಿಯರ ಆಕ್ರೋಶವೂ ಸೇರಿ ಬೆಳ್ಳಂದೂರು ಕೆರೆಯನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಕೊನೆಗೂ ಸರ್ಕಾರ ನಾಂದಿ ಹಾಡಿತ್ತು. ಹೀಗೆ ಸರ್ಕಾರಕ್ಕೆ ಬೆಳ್ಳಂದೂರು ಕೆರೆಯ ಸ್ವಚ್ಛತೆ ನೆನಪಾಗಿದ್ದು, ರಾಷ್ಟ್ರೀಯ ಹಸಿರು ಪ್ರಾಧಿಕಾರ(ಎನ್ ಜಿಟಿ)ವು ಬಿಬಿಎಂಪಿ(ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ), ಎಲ್ ಡಿಎ(ಕೆರೆ ಅಭಿವೃದ್ಧಿ ಪ್ರಾಧಿಕಾರ) ಮತ್ತು ಕರ್ನಾಟಕ ಸರ್ಕಾರಕ್ಕೆ ಛೀಮಾರಿ ಹಾಕಿದ ಮೇಲೆ!
The pollution that still emerges from #BellandurLake even after all these years. #Bangalore @BangaloreMirror @BangaloreTimes1 pic.twitter.com/qdGgj1vWSo
— Trisha Lara D'souza (@trisha_lara8900) July 19, 2017
ಎನ್ ಜಿಟಿ ಸೂಚನೆಯ ಮೇರೆಗೆ ಬೆಳ್ಳಂದೂರು ಕೆರೆ ಸುತ್ತಲಿನ 76 ಕೈಗಾರಿಕೆಗಳನ್ನು ಮುಚ್ಚಿ, ಅವುಗಳಿಗೆ ನೀರು ಮತ್ತು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿರುವ ಸರ್ಕಾರ ಬೆಳ್ಳಂದೂರು ಕೆರೆ ಸ್ವಚ್ಛತೆಗೆ ಆದ್ಯತೆ ನೀಡುತ್ತಿದೆ. ಆದರೆ ಎನ್ ಜಿಟಿ, 2017 ರ ಮೇ ತಿಂಗಳಾಂತ್ಯದ ವೇಳೆಗೇ ಕೆರೆಯನ್ನು ಸಂಪೂರ್ಣ ಸ್ವಚ್ಛಗೊಳಿಸುವಂತೆ ಹೇಳಿತ್ತಾದರೂ, ಆ ಡೆಡ್ ಲೈನ್ ನ ಗುರಿತಲುಪುವುದಕ್ಕೆ ಸಾಧ್ಯವೇ ಇಲ್ಲ ಎಂದು ಕರ್ನಾಟಕ ಸರ್ಕಾರ ಹೇಳಿತ್ತು.
ಏನೇ ಆಗಲಿ, ಕೆರೆ ಸ್ವಚ್ಛವಾಗಿ ನಮಗೆ ನೆಮ್ಮದಿಯಿಂದ ಉಸಿರಾಡುವಂತಾದರೆ ಸಾಕು ಎಂಬುದು ಬೆಳ್ಳಂದೂರು ಭಾಗದ ಜನರ ಅಂಬೋಣ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications