ಬೆಂಗಳೂರಲ್ಲಿ ಹಲವೆಡೆ ಭಾರಿ ಮಳೆ, ಓರ್ವ ವ್ಯಕ್ತಿ ಬಲಿ
ಬೆಂಗಳೂರು, ಏಪ್ರಿಲ್ 17: ಬೆಂಗಳೂರಿಗೆ ಮಳೆರಾಯ ಆಗಮಿಸಿದ್ದು, ಸಂಜೆ ವೇಳೆಗೆ ಜಯನಗರ, ಬನಶಂಕರಿ, ಮಲ್ಲೇಶ್ವರ, ಮೆಜೆಸ್ಟಿಕ್ ಸೇರಿ ಹಲವೆಡೆ ಮಳೆ ಆಗಿದೆ. ಕೆಲವೆಡೆ ಆಲಿಕಲ್ಲು ಸಹಿತ ಮಳೆ ಆಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಇನ್ನೂ ಎರಡು ಮೂರು ದಿನಗಳು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆ ಆಗುವ ನಿರೀಕ್ಷೆ ಇದೆ. ಹವಾಮಾನ ಇಲಾಖೆ ಈ ಬಗ್ಗೆ ಮುನ್ಸೂಚನೆ ನೀಡಿದೆ.
ನಾಲ್ಕು ರಾಜ್ಯಗಳಲ್ಲಿ ಭಾರಿ ಮಳೆ: 34 ಮಂದಿ ಬಲಿ,ಕೇಂದ್ರದ ಪರಿಹಾರ
ಮುಂದಿನ ಎರಡು-ಮೂರು ದಿನಗಳಲ್ಲಿ ಮಂಡ್ಯ, ತುಮಕೂರು, ಬೆಂಗಳೂರು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬಿಜೆಪಿ, ಕಾಂಗ್ರೆಸ್, ಸಿಪಿಎಂ ಪ್ರಣಾಳಿಕೆಯ ತುಲನೆ. ಯಾವ ಪಕ್ಷದ ಪ್ರಣಾಳಿಕೆ ಉತ್ತಮವಾಗಿದೆ?
ಕೆಲ ದಿನಗಳ ಹಿಂದೆ ಬೆಂಗಳೂರಲ್ಲಿ ಲಘುವಾಗಿ ಆಗಿದ್ದ ಮಳೆ ಇಂದು ಸ್ವಲ್ಪ ಬಿರುಸು ಪಡೆದುಕೊಂಡಿತ್ತು. ಕೆಲವು ಭಾಗಗಳಲ್ಲಿ ಭಾರಿ ಮಳೆ ಆಗಿದ್ದು, ನಗರದ ಲುಂಬಿನಿ ಗಾರ್ಡನ್ ಬಳಿ ಮಳೆಯ ಆರ್ಭಟಕ್ಕೆ ಮರ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.
ನಾಳೆ ಸಂಜೆ ವೇಳೆಗೆ ಮತ್ತೆ ಮಳೆ ಆಗುವ ಸಾಧ್ಯತೆ ಇದ್ದು, ಮಧ್ಯಾಹ್ನವೇ ಮತದಾನ ಮಾಡಿದರೆ ಉತ್ತಮ, ಬಿಸಿಲಿದೆ ಸಂಜೆ ಹೋಗೋಣವೆಂದು ಉದಾಸೀನ ಮಾಡಿದರೆ ಸಂಜೆಗೆ ಮಳೆ ಬರುವ ಸಾಧ್ಯತೆ ಹೆಚ್ಚಿದೆ.