ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭಾನುವಾರದ ಸುತ್ತಾಟಕ್ಕೆ ತಡೆ ಹಾಕಿದ ಬೆಂಗಳೂರು ಮಳೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 16 : ಉದ್ಯಾನ ನಗರಿ ಬೆಂಗಳೂರಿನ ಜನರ ವೀಕೆಂಡ್ ಸುತ್ತಾಟಕ್ಕೆ ಮಳೆರಾಯ ಅಡ್ಡಿ ಮಾಡಿದ್ದಾನೆ. ಹೌದು..ಭಾನುವಾರ ಮಧ್ಯಾಹ್ನದ ಬಳಿಕ ನಗರದ ವಿವಿಧ ಬಡಾವಣೆಗಳಲ್ಲಿ ಭಾರಿ ಮಳೆಯಾಗಿದೆ.

ಭಾನುವಾರ ಮಧ್ಯಾಹ್ನ 2 ಗಂಟೆ ಬಳಿಕ ನಗರದ ವಿವಿಧ ಪ್ರದೇಶದಲ್ಲಿ ಭಾರಿ ಮಳೆಯಾಗಿದೆ. ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ರಾತ್ರಿ ಮಳೆ ಸುರಿಯುವ ನೀರಿಕ್ಷೆ ಇದೆ.

ಬೆಂಗಳೂರಿಗೆ ಮತ್ತೆ ಮರಳಿದ ಮಳೆರಾಯ, ಮೂರು ದಿನ ಮಳೆಯೋ ಮಳೆ ಬೆಂಗಳೂರಿಗೆ ಮತ್ತೆ ಮರಳಿದ ಮಳೆರಾಯ, ಮೂರು ದಿನ ಮಳೆಯೋ ಮಳೆ

ಜಯನಗರ, ವಿಧಾನಸೌಧ, ಶಾಂತಿನಗರ, ಮಲ್ಲೇಶ್ವರ, ರಾಜಾಜಿನಗರ, ಹನುಮಂತನಗರ, ಮೈಸೂರು ರಸ್ತೆ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಉತ್ತಮ ಮಳೆಯಾಗಿದೆ. ಇನ್ನೂ ತುಂತುರು ಹನಿ ಬೀಳುತ್ತಿದ್ದು, ಜನರು ಹೊರಗೆ ಸುತ್ತಾಡಲು ಹೋಗಲು ಆಲೋಚಿಸುವಂತಾಗಿದೆ.

ಬೆಂಗಳೂರಲ್ಲಿ 31 ಡಿಗ್ರಿ ತಲುಪಿದ ಉಷ್ಣಾಂಶ: ಬಸವಳಿದ ಜನರುಬೆಂಗಳೂರಲ್ಲಿ 31 ಡಿಗ್ರಿ ತಲುಪಿದ ಉಷ್ಣಾಂಶ: ಬಸವಳಿದ ಜನರು

Rain may continue 3 to 4 days in Bengaluru city

ಮಲ್ಲೇಶ್ವರದಲ್ಲಿ ಮಳೆಯಿಂದಾಗಿ ದೊಡ್ಡ ಮರವೊಂದು ಉರುಳಿ ಬಿದ್ದಿದೆ. ಮರದಡಿ 2 ಆಟೋ, 1 ಕಾರು ಸಿಕ್ಕಿಹಾಕಿಕೊಂಡಿದೆ. ಆದರೆ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಕೋರಮಂಗಲ ನಿವಾಸಿಗಳಿಗೆ ಮತ್ತೆ ದುಸ್ವಪ್ನವಾದ ಮಳೆ ನೀರುಕೋರಮಂಗಲ ನಿವಾಸಿಗಳಿಗೆ ಮತ್ತೆ ದುಸ್ವಪ್ನವಾದ ಮಳೆ ನೀರು

ಬೆಂಗಳೂರು ನಗರದಲ್ಲಿ ಇನ್ನೂ 3 ರಿಂದ 4 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈಗಾಗಲೇ ಕಳೆದ ಐದು ದಿನಗಳಿಂದ ನಗರದಲ್ಲಿ ಸಂಜೆ ಮಳೆಯಾಗುತ್ತಿದೆ.

English summary
Rain lashed Bengaluru city on Sunday, September 16 evening.In many parts of the city commuters stuck in traffic jam. Meteorological department said rain is likely to continue 3 to 4 days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X