ಬೆಂಗಳೂರಲ್ಲಿ ಮಳೆ ಸಮಸ್ಯೆ: ಬಿಬಿಎಂಪಿಯ ಫ್ರೀ ಹೆಲ್ಪ್ಲೈನ್ ನಂಬರ್ ಇಲ್ಲಿದೆ
ಬೆಂಗಳೂರಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನ ಪರದಾಡುತ್ತಿದ್ದಾರೆ. ಬೆಂಗಳೂರಲ್ಲಿ ಜನರ ಸಮಸ್ಯೆ ಎದುರಾದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಉಚಿತ ಸಹಾಯವಾಣಿಗೆ ಕರೆ ಮಾಡಿ ದೂರು ದಾಖಲಿಸಬಹುದಾಗಿದೆ. ಬಿಬಿಎಂಪಿಯ ಅಧಿಕಾರಿಗಳು ನಿಮ್ಮ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಮಳೆಯಿಂದ ನೀರು ನಿಂತಿದ್ದರೆ ಅಥವಾ ಮರ ಬೀಳುವುದು ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಈ ಸಹಾಯವಾಣಿಗೆ ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ.
ನಗರದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ನಗರದ ಜನ ರೋಸಿ ಹೋಗಿದ್ದಾರೆ. ಆಘಾತಕಾರಿ ವಿಷಯವೆಂದರೆ ಇದೇ ರೀತಿ ಧಾರಾಕಾರ ಮಳೆ ಶುಕ್ರವಾರದ ವರೆಗೂ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಬೆಂಗಳೂರಲ್ಲಿ ಸೋಮವಾರ ಹಾಗೂ ಮಂಗಳವಾರ ಸುರಿದ ಮಳೆಯಿಂದ ಭಾರೀ ಅನಾಹುತವೇ ಸಂಭವಿಸಿದೆ. ಅಲ್ಲದೇ ಸಾವು ನೋವು ಸಹ ಸಂಭವಿಸಿದೆ. ನಿರಂತರ ಮಳೆಯಿಂದಾಗಿ ಅಪಾರ ಪ್ರಮಾಣದ ಅಸ್ತಿಗೂ ಹಾನಿಯಾಗಿದೆ.

ಬೆಂಗಳೂರಲ್ಲಿ ಮಳೆ ಅನಾಹುತ ತಡೆಯುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಹ ಶ್ರಮಿಸುತ್ತಿದೆ. ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 8 ವಲಯಗಳಿದ್ದು, ಎಂಟೂ ವಲಯಗಳಲ್ಲೂ ಬಿಬಿಎಂಪಿಯ ಸಹಾಯವಾಣಿ ಇದೆ. ಮಳೆಯಿಂದ ಜನರಿಗೆ ಸಮಸ್ಯೆಯಾದರೆ, ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದಾಗಿದೆ.
ಅಲ್ಲದೇ ಬಿಬಿಎಂಪಿಯ ಕೇಂದ್ರ ಕಚೇರಿಯ ಸಹಾಯವಾಣಿಯೂ ಸಾರ್ವಜನಿಕರ ನೆರವಿಗೆ ಬರಲಿದೆ. ಮಳೆ ಪ್ರಾರಂಭವಾದ ಮೇಲೆ ದೂರುಗಳ ಸುರಿಮಳೆಯೇ ಶುರುವಾಗಿದೆ. ಬೃಹತ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಫ್ರೀ ಸಹಾಯವಾಣಿ ಸಂಖ್ಯೆಯ ವಿವರ ಇಲ್ಲಿದೆ. ಬಿಬಿಎಂಪಿ 24*7 (ಉಚಿತ ಸಹಾಯವಾಣಿ) ಟೋಲ್ ಫ್ರೀ ಸಂಖ್ಯೆ 1533ಗೆ ಕರೆ ಮಾಡಬಹುದು.
ಬಿಬಿಎಂಪಿ ಕಂಟ್ರೋಲ್ ರೂಮ್ ಸಂಖ್ಯೆ: 08022660000/08022975595/ 08022221188 ವಾಟ್ಸಪ್ ಸಹಾಯವಾಣಿ ಸಂಖ್ಯೆ: 9480685700
ಪೂರ್ವ ವಲಯ: 9480685702,080-22975803
ಪಶ್ಚಿಮ ವಲಯ: 9480685703,08023561692 ಮತ್ತು 08023463366
ದಕ್ಷಿಣ ವಲಯ: 9480685704, 08026566362 ಮತ್ತು 08022975703
ಮಹದೇವಪುರ ವಲಯ: 9480685706 ಮತ್ತು 08028512300
ಬೊಮ್ಮನಹಳ್ಳಿ ವಲಯ: 9480685707, 08025735642 ಮತ್ತು 08025732447
ಯಲಹಂಕ ವಲಯ: 9480685705, 7022664419,08023636671 ಮತ್ತು 08022975936
ರಾಜರಾಜೇಶ್ವರಿ ನಗರ: 9480685708 ಮತ್ತು 08028601851
ದಾಸರಹಳ್ಳಿ ವಲಯ: 9480685709 ಮತ್ತು 08028394909

1,300ಕ್ಕೂ ಹೆಚ್ಚು ದೂರು: ಬೆಂಗಳೂರಲ್ಲಿ ಮಳೆ ಹೆಚ್ಚಾಗ್ತಿದ್ದು, ಬಿಬಿಎಂಪಿ ಸಹಾಯವಾಣಿಗೆ ದೂರುಗಳ ಸುರಿಮಳೆಯೇ ಶುರುವಾಗಿದೆ. ಮಳೆಯಿಂದ ಬೆಂಗಳೂರಿನ ವಿವಿಧ ವಲಯಗಳಿಂದ ನಿರಂತರವಾಗಿ ದೂರುಗಳು ಬರುತ್ತಿರುವುದಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಂಗಳೂರಲ್ಲಿ ಬಿಬಿಎಂಪಿಗೆ ಮಂಗಳವಾರ ಮಧ್ಯಾಹ್ನ 3 ಗಂಟೆಯ ವರೆಗೆ ಮಳೆ ಅನಾಹುತ ಹಾಗೂ ಮಳೆ ಸಮಸ್ಯೆಗೆ ಸಂಬಂಧಿಸಿದಂತೆ 1,328ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ. ಅದರಲ್ಲಿ 590 ದೂರುಗಳನ್ನು ಪರಿಹರಿಸಿರುವುದಾಗಿ ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಳೆ ಮುಂದುವರಿಯುತ್ತಿದ್ದು ನಗರದಲ್ಲಿರುವ ಅಪಾರ್ಟ್ಮೆಂಟ್ ಹಾಗೂ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗಿ ಸಮಸ್ಯೆ ಆಗಿದೆ. ಮಳೆ ನೀರು ನಿಂತು ಬೈಕ್ ಹಾಗೂ ಕಾರುಗಳಿಗೂ ಹಾನಿಯಾಗಿದ್ದು, ಜನ ಕಂಗಾಲಾಗಿದ್ದಾರೆ. ಮಳೆಯಿಂದ ಸಮಸ್ಯೆ ಹೆಚ್ಚಾಗುತ್ತಿದ್ದು, ಬಿಬಿಎಂಪಿ ಸಹಾಯವಾಣಿಗೆ ಜನ ಕರೆ ಮಾಡುತ್ತಿದ್ದಾರೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications