ಭಾರೀ ಮಳೆಯಿಂದಾಗಿ ಹೆಸರಘಟ್ಟ ಕೆರೆಗೆ ಜೀವಕಳೆ
ಬೆಂಗಳೂರು, ಸೆಪ್ಟೆಂಬರ್ 12 : ಬೆಂಗಳೂರು ನಗರದ ಸುತ್ತ-ಮುತ್ತ ಭಾರೀ ಮಳೆಯಾಗಿದ್ದು, ಹೆಸರಘಟ್ಟ ಕೆರೆಗೆ ಜೀವಕಳೆ ಬಂದಿದೆ. ಬರಗಾಲದಿಂದ ಕಂಗೆಟ್ಟಿದ್ದ ರೈತರು ಕೆರೆ ತುಂಬುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ.
ಒಂದು ಕಾಲದಲ್ಲಿ ಬೆಂಗಳೂರು ನಗರಕ್ಕೆ ಹೆಸರಘಟ್ಟ ಕೆರೆ ನೀರು ಪೂರೈಕೆ ಮಾಡುತ್ತಿತ್ತು. ಆದರೆ, ಸತತ ಬರಗಾಲದಿಂದ ಕೆರೆ ಬತ್ತಿ ಹೋಗಿತ್ತು. ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಕೆರೆಗೆ 10 ಅಡಿ ನೀರು ಹರಿದುಬಂದಿದೆ.

ಕೆರೆ ತುಂಬಿರುವುದರಿಂದ ಕೆರೆ ಅಚ್ಚುಕಟ್ಟು ಪ್ರದೇಶದ ಕೊಳವೆ ಬಾವಿಗಳು ಮರುಜೀವ ಪಡೆದುಕೊಳ್ಳಲಿವೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂದು ರೈತರು ಸಂತಸ ವ್ಯಕ್ತಪಡಿಸಿದ್ದಾರೆ.
ಮಧುರೆ ಗ್ರಾಮದ ಕೆರೆಯೂ ಭರ್ತಿಯಾಗುವ ಹಂತ ತಲುಪಿದ್ದು, ಇದು ಭರ್ತಿಯಾದರೆ ಹೆಚ್ಚಿನ ನೀರು ಹೆಸರಘಟ್ಟ ಕೆರೆಗೆ ಹರಿದುಬರಲಿದೆ. ಹೆಸರಘಟ್ಟ ಹೋಬಳಿಯ ಬ್ಯಾತ, ಹನಿಯೂರು, ಕಾಕೋಳು, ಮಧುರೆ, ದೊಡ್ಡ ಬೆಳವಂಗಲ ಕೆರೆಗಳಿಗೆ 7 ರಿಂದ 8 ಅಡಿ ನೀರು ಹರಿದುಬಂದಿದೆ.

ಬೆಂಗಳೂರು ನಗರಕ್ಕೆ ನೀರು ಪೂರೈಕೆ ಮಾಡಲು ಹಿಂದೆ ಹೆಸರಘಟ್ಟ ಕೆರೆಯನ್ನು ಬಳಕೆ ಮಾಡಿಕೊಳ್ಳಲಾಗುತ್ತಿತ್ತು. ಇಟ್ಟಿಗೆಗಳಿಂದ ನಿರ್ಮಿಸಿದ ಕಾಲುವೆ ಮೂಲಕ ಕೆರೆಯ ನೀರನ್ನು ತರಬನಹಳ್ಳಿಗೆ ತರಲಾಗುತ್ತಿತ್ತು. ಅಲ್ಲಿ ನೀರನ್ನು ಶುದ್ಧೀಕರಿಸಿ ಸೋಲ ದೇವನಹಳ್ಳಿಗೆ ತರಲಾಗುತ್ತಿತ್ತು. ಅಲ್ಲಿಂದ ಬೆಂಗಳೂರು ನಗರಕ್ಕೆ ಪೂರೈಕೆ ಮಾಡಲಾಗುತ್ತಿತ್ತು.
ಮೂರು ವರ್ಷಗಳ ಕಾಲ ಮಳೆಯಾಗದೆ ಕೆರೆ ಬತ್ತಿತ್ತು. ಆದ್ದರಿಂದ, ಪರ್ಯಾಯ ಜಲಮೂಲ ಹುಡುಕಲಾಯಿತು. ನಂತರ ಹೆಸರಘಟ್ಟ ಕೆರೆಯಿಂದ ನೀರು ಪೂರೈಕೆಯನ್ನು ಸ್ಥಗಿತಗೊಳಿಸಲಾಯಿತು.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ












Click it and Unblock the Notifications