ಬೆಂಗಳೂರಿನಲ್ಲಿ ಮುಂದುವರಿದ ಮಳೆ: ಎಲ್ಲೆಡೆ ಟ್ರಾಫಿಕ್ ಜಾಮ್
ಬೆಂಗಳೂರು, ನ.22: ನಗರದಲ್ಲಿ ಭಾನುವಾರ ರಾತ್ರಿಯೂ ಧಾರಾಕಾರ ಮಳೆ ಸುರಿದಿದ್ದು, ಸಾಕಷ್ಟು ಅವಾಂತರ ಸೃಷ್ಟಿ ಮಾಡಿದೆ. ರಸ್ತೆಯಲ್ಲಿ ಮಳೆ ನೀರು ನುಗ್ಗಿದ್ದರಿಂದ ನಗರದ ಹಲವೆಡೆ ತಡರಾತ್ರಿಯವರೆಗೂ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಸತತ ಮೂರು ತಾಸು ಸುರಿದ ಮಳೆಗೆ ಸಿಲಿಕಾನ್ ಸಿಟಿ ಜನ ಹೈರಾಣಾಗಿದ್ದಾರೆ. ಸಂಜೆ 6 ರಿಂದ 9 ಗಂಟೆಯವರೆಗೆ ಮಳೆ ಸುರಿದಿದೆ. ನಗರದ ಹಲವು ರಸ್ತೆಗಳು ಮಳೆ ನೀರಿನಿಂದಾಗಿ ಕೆರೆಗಳಂತಾಗಿದ್ದವು. ಪೀಣ್ಯ, 8ನೇ ಮೈಲಿ ರಸ್ತೆಯಲ್ಲಿ ಐದಾರು ಅಡಿಯಷ್ಟು ನೀರು ನಿಂತಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ತಡರಾತ್ರಿವರೆಗೂ ಪರದಾಟ ನಡೆಸಿದರು.
ಪ್ಯಾಲೆಸ್ ರಸ್ತೆ, ಯಲಹಂಕ, ವಿದ್ಯಾರಣ್ಯಪುರ ಮುಖ್ಯ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಇಲ್ಲಿ ರಾತ್ರಿ 12 ಆಗಿದ್ದರೂ ಸಹ ಟ್ರಾಫಿಕ್ ಜಾಮ್ ಕಂಡುಬಂತು. ರಸ್ತೆಯಲ್ಲಿ ಮೊಣಕಾಲು ಮಟ್ಟದವರೆಗೂ ನೀರು ನಿಂತಿದ್ದರಿಂದ ಬಹುತೇಕ ಕಾರು, ಬೈಕ್ಗಳು ರಸ್ತೆಯಲ್ಲಿಯೇ ನಿಂತಿದ್ದವು. ಯಲಹಂಕ ಪೊಲೀಸ್ ಠಾಣೆ ಸಮೀಪ ಮಳೆ ನೀರು ಕೆರೆಗೆ ಹೋಗದೆ ರಾಜಕಾಲುವೆಗೆ ರಸ್ತೆಗೆ ನುಗ್ಗಿದ್ದವು. ನಾಲ್ಕೈದು ಬಿಎಂಟಿಸಿ ಬಸ್ಗಳು ರಸ್ತೆಯಲ್ಲಿಯೇ ಕೆಟ್ಟು ನಿಂತಿದ್ದವು.
ಯಲಹಂಕ ಕೋಗಿಲು ಬಳಿ ಬೆಳಗ್ಗೆಯಾದರೂ ರಸ್ತೆಯ ಮೇಲೆ ನೀರು ಹಾಗೇ ನಿಂತಿತ್ತು. ಸುಮಾರು ನಾಲ್ಕು ಅಡಿಯಷ್ಟು ನೀರು ನಿಂತಿದ್ದರಿಂದ ರಸ್ತೆ ಮಧ್ಯೆ ಹೆಚ್ಚಿನ ವಾಹನಗಳು ಕಟ್ಟು ನಿಂತಿದ್ದವು. ಸೋಮವಾರ ಆದ್ದರಿಂದ ಹೆಚ್ಚಿನ ಜನದಟ್ಟಣೆ ಈ ರಸ್ತೆಯಲ್ಲಿ ಇದ್ದರಿಂದ ಸಹ ಟ್ರಾಪಿಕ್ ಜಾಮ್ಗೆ ಕಾರಣವಾಯಿತು. ಇನ್ನು ಯಲಹಂಕ ಫ್ಳೈ ಓವರ್ ಕೆಳಗೂ ಸಹ ವಾಹನಗಳು ಮುಳುಗುವಷ್ಟು ನೀರು ನಿಂತಿದ್ದವು.
ಬೆಂಗಳೂರು ನಗರದಲ್ಲಿ ಭಾನುವಾರ ರಾತ್ರಿ ಸುರಿದ ಮಳೆಗೆ ರಸ್ತೆಯಲ್ಲಿ ನೀರು ನುಗ್ಗಿ ಅವಾಂತರ. ಕೆಲವೆಡೆ ಮನೆಗಳಿಗೂ ನೀರು ನುಗ್ಗಿದೆ. ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.#Bengalore #Rainfall #ಬೆಂಗಳೂರು pic.twitter.com/NZEKGi6U1w
— oneindiakannada (@OneindiaKannada)ಬೆಂಗಳೂರು ನಗರದಲ್ಲಿ ಭಾನುವಾರ ರಾತ್ರಿ ಸುರಿದ ಮಳೆಗೆ ರಸ್ತೆಯಲ್ಲಿ ನೀರು ನುಗ್ಗಿ ಅವಾಂತರ. ಕೆಲವೆಡೆ ಮನೆಗಳಿಗೂ ನೀರು ನುಗ್ಗಿದೆ. ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
#Bengalore #Rainfall #ಬೆಂಗಳೂರು pic.twitter.com/NZEKGi6U1w— oneindiakannada (@OneindiaKannada) Novembe…/1462608297563856899?ref_src=twsrc%5Etfw">Novembe…
ಕಳೆದ ಒಂದು ವಾರದಿಂದ ಮಳೆರಾಯನ ಕಾಟ ಬೆಂಗಳೂರಿಗೆ ತುಸು ಜೋರಾಗಿಯೇ ಇತ್ತು. ಭಾನುವಾರ ಬೆಳಗ್ಗೆ ಬಿಸಿಲು ಬಂದಿತ್ತು. ಇದರಿಂದ ಜನ ಸ್ವಲ್ಪ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಆದರೆ ಸಂಜೆಯಾಗುತ್ತಲೇ ಮತ್ತೆ ಮಳೆ ಮೋಡ ಆವರಿಸಿತು ಮತ್ತೆ ಧಾರಾಕಾರ ಮಳೆ ಸುರಿದು ಜನಜೀವನ ಅಸ್ತವ್ಯಸ್ಥಗೊಳಿಸಿತು.
ಮನೆಗಳಿಗೆ ನುಗ್ಗಿದ ನೀರು:
ಧಾರಾಕಾರ ಮಳೆಯಿಂದಾಗಿ ಹಲವೆಡೆ ಮನೆ, ಅಂಗಡಿಗಳಿಗೆ ನೀರು ನುಗ್ಗಿ ಜನಜೀವನ ಅಸ್ತವಯಸ್ತವಾಗಿದೆ. ನಗರದ ತಗ್ಗು ಪ್ರದೇಶಗಳಲ್ಲಿ ಮನೆಯೊಳಗೆ ನೀರು ನುಗ್ಗಿದ್ದರಿಂದ ಮನೆಯಲ್ಲಿನ ವಸ್ತುಗಳೆಲ್ಲವೂ ಹಾಳಾಗಿವೆ. ರಾತ್ರಿ ಒಂದು ಕಡೆ ಧಾರಾಕಾರ ಮಳೆ, ಮತ್ತೊಂದು ಕಡೆ ಮಲಗಲು ಜಾಗವಿಲ್ಲದೆ ಬಹುತೇಕರು ಜಾಗರಣೆ ಮಾಡಬೇಕಾದಂತಹ ಪರಿಸ್ಥಿತಿ ಇತ್ತು. ವಿದ್ಯಾರಣ್ಯಪುರದ ವೆಂಕಟಸ್ವಾಮಪ್ಪ ಲೇಔಟ್, ಹಾಗೂ ಬಸವ ಸಮಿತಿ ಲೇಔಟ್ ರಸ್ತೆಗಳು ಕೆರೆಯಂತಾಗಿದ್ದವು.
ಬಿಬಿಎಂಪಿ, ಶಾಸಕರು ವಿರುದ್ಧ ಆಕ್ರೋಶ:
ಬಿಬಿಎಂಪಿ ಅಧಿಕಾರಿಗಳು ಹಾಗೂ ಶಾಸಕರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿ ಬಾರಿ ಮಳೆ ಬಂದಾಗಲೂ ಇದೇ ರೀತಿ ಸಮಸ್ಯೆಯಾಗುತ್ತದೆ. ಆದರೆ, ಬಿಬಿಎಂಪಿ ಅಧಿಕಾರಿಗಳು, ಶಾಸಕರು ಮಾತ್ರ ಇತ್ತ ಗಮನ ಹರಿಸುತ್ತಿಲ್ಲ, ನಮ್ಮ ಬೇಡಿಕೆಗಳಿಗೆ ಕ್ಯಾರೆ ಎನ್ನುತ್ತಿಲ್ಲ ಎಂದು ವೆಂಕಟಸ್ವಾಮಪ್ಪ ಹಾಗೂ ಬಸವ ಸಮಿತಿ ಲೇಔಟ್ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು.
ಮಳೆ ಬಂದಾಗ ಮನೆಗೆ ನೀರು ನುಗ್ಗಿ ರಾತ್ರಿ ಇಡೀ ಜಾಗರಣೆ ಮಾಡುವುದು ಕಳೆದ ಮೂರು ವರ್ಷಗಳಿಂದ ನಡೆಯುತ್ತಿದೆ. ಜನಪ್ರತಿನಿಧಿಗಳು ಎನಿಸಿಕೊಂಡವರು ಕೇವಲ ಓಟು ಕೇಳುವುದಕ್ಕೆ ಮಾತ್ರ ನಮ್ಮ ಲೇಔಟ್ಗೆ ಬರುತ್ತಾರೆ. ಮಳೆಯಿಂದ ನಮಗೆ ಸಮಸ್ಯೆಯಾಗುತ್ತಿದೆ, ಶಾಶ್ವತ ಪರಿಹಾರ ರೂಪಿಸಿ ಎಂದು ಕೇಳಿದಾಗ ಯಾರೂ ಇತ್ತ ನೋಡುತ್ತಿಲ್ಲ. ನಮ್ಮ ಬಡಾವಣೆಯ ಎಲ್ಲ ಮನೆಗಳಿಗೆ, ಅಂಗಡಿ ಮುಗ್ಗಟ್ಟುಗಳಿಗೆ ಮಳೆ ನೀರು ನುಗ್ಗಿದೆ. ಹೀಗಾದರೆ ನಾವು ಜೀವನ ಹೇಗೆ ಮಾಡುವುದು ಎಂದು ಪ್ರಶ್ನಿಸಿದರು. ನಮ್ಮ ಜೀವನದ ಬಗ್ಗೆ ಇವರಿಗೆ ಕಾಳಜಿಯೇ ಇಲ್ಲ ಎನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Recommended Video
ಪೊಲೀಸರು ನೆಡದಿದ್ದೆ ದಾರಿನಾ? | Oneindia Kannada