'ನಮ್ಮ ಮೆಟ್ರೋ' ಕೋಚ್ನೊಳಗೆ ನುಗ್ಗಿದ ಮಳೆ ನೀರು
ಬೆಂಗಳೂರು, ಮೇ 07: ಬೆಂಗಳೂರಿನಲ್ಲಿ ಶುಕ್ರವಾರ ಸುರಿದ ಮಳೆಯಿಂದಾಗಿ ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣಿಕರ ಕೋಚ್ಗಳಿಗೆ ಮಳೆ ನೀರು ನುಗ್ಗಿ ಪ್ರಯಾಣಿಕರನ್ನು ಸ್ಪಲ್ಪ ಹೊತ್ತು ಆತಂಕವನ್ನು ಉಂಟು ಮಾಡಿರುವ ಘಟನೆ ನಗರದ ಬೈಯಪ್ಪನಹಳ್ಳಿ ಮೆಟ್ರೊ ನಿಲ್ದಾಣದ ಮೂರನೇ ಪ್ಲಾಟ್ಫಾರ್ಮನಲ್ಲಿ ನಡೆದಿದೆ.
ರೈಲುಗಳಿಗೆ ನೀರು ನುಗ್ಗಿ ಬೋಗಿಗಳ ನೆಲದ ಮೇಲೆ ನೀರು ತುಂಬಿ ಅವಘಡ ಸಂಭವಿಸುವ ಸಾಧ್ಯತೆ ಇದೆ ಎಂದು ಪ್ರಯಾಣಿಕರು ಆತಂಕ ಪಟ್ಟಿದ್ದರು. ಮಳೆ ನೀರು ನುಗ್ಗಿರುವುದನ್ನು ಕಂಡು ಪ್ರಯಾಣಿಸುತ್ತಿದ್ದ ವೇಳೆ ಹೆದರಿ ಆತಂಕ ಪಟ್ಟಿದ್ದರು.
ಪ್ಲಾಟ್ಫಾರ್ಮ್ 3ರ ಒಂದು ಭಾಗವು ಓವರ್ಹೆಡ್ ಕವರ್ ಹೊಂದಿಲ್ಲದ ಕಾರಣ ಬೆಂಗಳೂರಿನಲ್ಲಿ ಸುರಿಯುವ ಮಳೆ ಸಮಯದಲ್ಲಿ ರೈಲುಗಳ ಕೊನೆಯ ಎರಡು ಮೆಟ್ರೋ ಬೋಗಿಗಳಿಗೆ ನೀರು ಪ್ರವೇಶಿಸುತ್ತದೆ. ಹೀಗಾಗಿ ಮಟ್ರೋ ರೈಲಿಗೆ ಭಾರಿ ಮಳೆ ನೀರು ನುಗ್ಗಿ ನಿಲ್ಲುವ ನಿಂತ ನೀರಿನ ಸ್ಥಳಗಳಲ್ಲಿ ಪ್ರಯಾಣಿಕರು ಕುಳಿತುಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ಒಂದು ವೇಳೆ ಬೋಗಿ ತುಂಬಿದರೆ ನೀರು ಇಡೀ ರೈಲಿನ ಬೋಗಿಗಳು ತುಂಬಿ ಪ್ರವಾಹ ಎದುರಾಗಬಹುದು ಎಂದು ಮೆಟ್ರೋ ಪ್ರಯಾಣಿಕರು ಆತಂಕ ಪಟ್ಟಿದ್ದರು.

ಇನ್ನು ಆತಂಕ್ಕಕೆ ಒಳಗಾಗಿದ್ದ ಪ್ರಯಾಣಿಕರೊಬ್ಬರು "ಇಂತಹ ಘಟನೆಗಳು ತುಂಬಾ ಅಪಾಯಕಾರಿ ಬಿಎಂಆರ್ಸಿಎಲ್ ಈ ಕುರಿತು ಗಂಭೀರವಾಗಿ ಈ ಸಮಸ್ಯೆಯನ್ನು ಸರಿಪಡಿಸಬೇಕು'' ಎಂದು ಆಗ್ರಹಿಸಿದರು.

"ಈ ವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ಬಹಳ ದಿನಗಳಿಂದ ತಿಳಿದಿತ್ತು. ಉಳಿದ ಪ್ಲಾಟ್ಫಾರ್ಮ್ಗಳಿಗೆ ಅವರು ಏಕೆ ಓವರ್ಹೆಡ್ ಶೆಲ್ಟರ್ ನಿರ್ಮಿಸಲು ಸಾಧ್ಯವಾಗಲಿಲ್ಲ? ಮೆಟ್ರೊ ರೈಲಿನ ನೆಲ ನುಣುಪಾಗಿದ್ದು, ಅಂತಹ ಮಹಡಿಯಲ್ಲಿ ನೀರು ನುಗ್ಗುವ ವೇಳೆ ಅವಘಡಗಳಿಗೆ ಕಾರಣವಾಗಬಹುದು. ಆದರೆ, ಇಂತಹ ಘಟನೆಗಳಿಂದ ಪ್ರಯಾಣಿಕರಿಗೆ ಸಾವು-ನೋವುಗಳು ಘಟನೆಗಳು ಸಂಭವಿಸಿದರೆ ಯಾರು ಹೊಣೆ,'' ಎಂದು ಮೆಟ್ರೋ ಪ್ರಯಾಣಿಕರು ಬಿಎಂಆರ್ಸಿಎಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈಲಿನ ಕೋಚ್ ಒಳಗೆ ನೀರು ನುಗ್ಗಿರುವ ಬಗ್ಗೆ ಬಿಎಂಆರ್ಸಿಎಲ್ನ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಬಿ.ಎಲ್. ಯಶವಂತ ಚವಾಣ್ ಅವರನ್ನು ಪ್ರಶ್ನಿಸಿದಾಗ, "ಸಮಸ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗುವುದು. ಮೆಟ್ರೋ ಬೋಗಿಗಳಲ್ಲಿ ಮಳೆ ನೀರು ನುಗ್ಗಿದರೆ ಯಾವುದೇ ರೀತಿಯ ವಿದ್ಯುತ್ ಅಪಾಯಗಳು ಸಂಭವಿಸುವುದಿಲ್ಲ,'' ಎಂದು ಅವರು ತಿಳಿಸಿದರು.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
BMTC: 3 ನಿಲ್ದಾಣಗಳಿಂದ ಮೆಟ್ರೋ ಫೀಡರ್ ಬಸ್ ಸೇವೆ ಆರಂಭ: ಸಂಚಾರ ಮಾರ್ಗ, ಸಮಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications