ರಾಜಭವನ ನೋಡಲೊಂದು ಜನಸಾಮಾನ್ಯರಿಗೆ ಸುವರ್ಣಾವಕಾಶ
ಬೆಂಗಳೂರು, ಆಗಸ್ಟ್ 8: ಬೆಂಗಳೂರಿನ ರಾಜಭವನ ಆಗಸ್ಟ್ 16ರಿಂದ 31ರವರೆಗೆ ಸಾರ್ವಜನಿಕರಿಗೆ ಮುಕ್ತವಾಗಿರಲಿದೆ. ಜನಸಾಮಾನ್ಯರ ರಾಜ್ಯಪಾಲರು ಎಂಬ ಖ್ಯಾತಿಗೆ ಪಾತ್ರರಾಗಿದ್ದ ವಿ.ಎಸ್. ರಮಾದೇವಿ ಅಧಿಕಾರಾವಧಿ ಬಳಿಕ ಜನಸಾಮಾನ್ಯರಿಗೆ ರಾಜಭವನ ಪ್ರವೇಶಿಸಲು ಅನುಮತಿ ಇರಲಿಲ್ಲ.
ಇದೀಗ ಮತ್ತೊಮ್ಮೆ ಸಾರ್ವಜನಿಕರಿಗೆ ರಾಜಭವನ ತೆರೆದುಕೊಳ್ಳಲಿದೆ ಆಗಸ್ಟ್ 16ರಿಂದ 31ರವರೆಗೆ ರಾಜಭವನ ವೀಕ್ಷಿಸಲು ಬಯಸುವವರು ಮುಕ್ತವಾಗಿ ತೆರಳಬಹುದಾಗಿದೆ. ಇತ್ತೀಚಿನ ದಿನಗಳಲ್ಲಿ ಆಹ್ವಾನಿತ ಗಣ್ಯರು ಮತ್ತು ಅತಿಥಿಗಣ್ಯರಿಗೆ ಮಾತ್ರ ಸೀಮಿತವಾಗಿತ್ತು. ದೆಹಲಿ ರಾಷ್ಟ್ರಪತಿ ಭವನ ಮಾದರಿಯಲ್ಲಿ ಸ್ವಾತಂತ್ರ್ಯೋತ್ಸವ ಅಂಗವಾಗಿ ಪ್ರವೇಶ ಕಲ್ಪಿಸಲಿದೆ.
ಈ ಅವಧಿಯಲ್ಲಿ ಸಾರ್ವಜನಿಕರು ರಾಜಭವನದ ಕಟ್ಟಡ, ವಿಶಾಲ ಉದ್ಯಾನ, ಗಾಜಿನ ಮನೆ ಎಲ್ಲವನ್ನೂ ವೀಕ್ಷಿಸಬಹುದಾಗಿದೆ. ಆದರೆ ಸಾರ್ವಜನಿಕರ ಪ್ರವೇಶಕ್ಕೆ ಕೆಲವು ನಿಯಮ ಹಾಗೂ ಷರತ್ತುಗಳು ಅನ್ವಯವಾಗುತ್ತದೆ. ಆಗಸ್ಟ್ 16ರಿಂದ 31ರವರೆಗೆ ಸಂಜೆ 4 ಗಂಟೆಯಿಂದ 6.30ರವರೆಗೆ ಸಾರ್ವತ್ರಿಕ ರಜಾ ದಿನಗಳಲ್ಲೂ ಪ್ರವೇಶವಿರುತ್ತದೆ.

ಭೇಟಿಗೆ ಕನಿಷ್ಠ ಐದು ದಿನಗಳ ಮೊದಲು ಹೆಸರು ನೋಂದಾಯಿಸಿಕೊಳ್ಳಬೇಕು. ಒಂದು ತಂಡದಲ್ಲಿ 30 ಜನರಿಗೆ ಪ್ರವೇಶ ಅವಕಾಶ ಕಲ್ಪಿಸಲಾಗುತ್ತದೆ. ಪ್ರತಿ ತಂಡದ ಸುತ್ತಾಟಕ್ಕೆ 30 ನಿಮಿಷ ಮಾತ್ರ ಕಾಲಾವಕಾಶ ನೀಡಲಾಗುತ್ತದೆ.
ನಿಗದಿತ ಸಮಯಕ್ಕಿಂತ 15 ನಿಮಿಷ ಮೊದಲು ಬರಬೇಕು, ಗುರುತಿನ ಚೀಟಿ ಹೊಂದಿರಬೇಕು. ಕೈಚೀಲ, ಮೊಬೈಲ್, ಕ್ಯಾಮರಾವನ್ನು ಕೊಂಡೊಯ್ಯುವಂತಿಲ್ಲ ಪ್ರವೇಶ ಉಚಿತವಾಗಿರುತ್ತದೆ. ಪ್ರವೇಶಕ್ಕೆ ವೆಬ್ ಸೈಟ್ ನಲ್ಲಿ ನೋಂದಾಯಿಸಿಕೊಳ್ಳಬೇಕು.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು












Click it and Unblock the Notifications