ರಾಜಭವನ ನೋಡಲೊಂದು ಜನಸಾಮಾನ್ಯರಿಗೆ ಸುವರ್ಣಾವಕಾಶ
ಬೆಂಗಳೂರು, ಆಗಸ್ಟ್ 8: ಬೆಂಗಳೂರಿನ ರಾಜಭವನ ಆಗಸ್ಟ್ 16ರಿಂದ 31ರವರೆಗೆ ಸಾರ್ವಜನಿಕರಿಗೆ ಮುಕ್ತವಾಗಿರಲಿದೆ. ಜನಸಾಮಾನ್ಯರ ರಾಜ್ಯಪಾಲರು ಎಂಬ ಖ್ಯಾತಿಗೆ ಪಾತ್ರರಾಗಿದ್ದ ವಿ.ಎಸ್. ರಮಾದೇವಿ ಅಧಿಕಾರಾವಧಿ ಬಳಿಕ ಜನಸಾಮಾನ್ಯರಿಗೆ ರಾಜಭವನ ಪ್ರವೇಶಿಸಲು ಅನುಮತಿ ಇರಲಿಲ್ಲ.
ಇದೀಗ ಮತ್ತೊಮ್ಮೆ ಸಾರ್ವಜನಿಕರಿಗೆ ರಾಜಭವನ ತೆರೆದುಕೊಳ್ಳಲಿದೆ ಆಗಸ್ಟ್ 16ರಿಂದ 31ರವರೆಗೆ ರಾಜಭವನ ವೀಕ್ಷಿಸಲು ಬಯಸುವವರು ಮುಕ್ತವಾಗಿ ತೆರಳಬಹುದಾಗಿದೆ. ಇತ್ತೀಚಿನ ದಿನಗಳಲ್ಲಿ ಆಹ್ವಾನಿತ ಗಣ್ಯರು ಮತ್ತು ಅತಿಥಿಗಣ್ಯರಿಗೆ ಮಾತ್ರ ಸೀಮಿತವಾಗಿತ್ತು. ದೆಹಲಿ ರಾಷ್ಟ್ರಪತಿ ಭವನ ಮಾದರಿಯಲ್ಲಿ ಸ್ವಾತಂತ್ರ್ಯೋತ್ಸವ ಅಂಗವಾಗಿ ಪ್ರವೇಶ ಕಲ್ಪಿಸಲಿದೆ.
ಈ ಅವಧಿಯಲ್ಲಿ ಸಾರ್ವಜನಿಕರು ರಾಜಭವನದ ಕಟ್ಟಡ, ವಿಶಾಲ ಉದ್ಯಾನ, ಗಾಜಿನ ಮನೆ ಎಲ್ಲವನ್ನೂ ವೀಕ್ಷಿಸಬಹುದಾಗಿದೆ. ಆದರೆ ಸಾರ್ವಜನಿಕರ ಪ್ರವೇಶಕ್ಕೆ ಕೆಲವು ನಿಯಮ ಹಾಗೂ ಷರತ್ತುಗಳು ಅನ್ವಯವಾಗುತ್ತದೆ. ಆಗಸ್ಟ್ 16ರಿಂದ 31ರವರೆಗೆ ಸಂಜೆ 4 ಗಂಟೆಯಿಂದ 6.30ರವರೆಗೆ ಸಾರ್ವತ್ರಿಕ ರಜಾ ದಿನಗಳಲ್ಲೂ ಪ್ರವೇಶವಿರುತ್ತದೆ.

ಭೇಟಿಗೆ ಕನಿಷ್ಠ ಐದು ದಿನಗಳ ಮೊದಲು ಹೆಸರು ನೋಂದಾಯಿಸಿಕೊಳ್ಳಬೇಕು. ಒಂದು ತಂಡದಲ್ಲಿ 30 ಜನರಿಗೆ ಪ್ರವೇಶ ಅವಕಾಶ ಕಲ್ಪಿಸಲಾಗುತ್ತದೆ. ಪ್ರತಿ ತಂಡದ ಸುತ್ತಾಟಕ್ಕೆ 30 ನಿಮಿಷ ಮಾತ್ರ ಕಾಲಾವಕಾಶ ನೀಡಲಾಗುತ್ತದೆ.
ನಿಗದಿತ ಸಮಯಕ್ಕಿಂತ 15 ನಿಮಿಷ ಮೊದಲು ಬರಬೇಕು, ಗುರುತಿನ ಚೀಟಿ ಹೊಂದಿರಬೇಕು. ಕೈಚೀಲ, ಮೊಬೈಲ್, ಕ್ಯಾಮರಾವನ್ನು ಕೊಂಡೊಯ್ಯುವಂತಿಲ್ಲ ಪ್ರವೇಶ ಉಚಿತವಾಗಿರುತ್ತದೆ. ಪ್ರವೇಶಕ್ಕೆ ವೆಬ್ ಸೈಟ್ ನಲ್ಲಿ ನೋಂದಾಯಿಸಿಕೊಳ್ಳಬೇಕು.
-
Karnataka Highways: 1846 ಕಿಮೀ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 5000 ಕೋಟಿ ರೂ ಘೋಷಣೆ -
ಬೆಂಗಳೂರು, ವಿದ್ಯಾಕಾಶಿ ಧಾರವಾಡದಲ್ಲಿ "ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್" ಆರಂಭ: ಬಜೆಟ್ನಲ್ಲಿ ಘೋಷಣೆ -
Karnataka Weather: ಮಾರ್ಚ್ 12ರ ವರೆಗೆ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುನ್ಸೂಚನೆ -
ಕರ್ನಾಟಕದ 66 ಆರ್ಟಿಓಗಳಲ್ಲಿ ಡಿಜಿಟಲ್ ವ್ಯವಸ್ಥೆ: ವಾಹನ ತೋರಿಸಿದರಷ್ಟೇ ಫಿಟ್ನೆಸ್ ಪ್ರಮಾಣಪತ್ರ, ಏನಿದು? -
ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಇದು ನಿಜಕ್ಕೂ ಕಾರ್ಯಸಾಧುವೆ? ತಜ್ಞರು ಹೇಳುವುದೇನು? -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ












Click it and Unblock the Notifications