ರಾಜ್ ಲೀಲಾ ವಿನೋದಕ್ಕೆ ನಕಲಿ ಹಾವಳಿ, ಆದರೂ 15 ಸಾವಿರ ಪ್ರತಿ ಖಾಲಿ
ನಟಿ ಲೀಲಾವತಿ ಅವರ ಆತ್ಮಕಥನ, ರವಿ ಬೆಳಗೆರೆ ಅವರು ಬರೆದಿರುವ ರಾಜ್ ಲೀಲಾ ವಿನೋದ ಪುಸ್ತಕ ಒಮ್ದು ತಿಂಗಳೊಳಗಾಗಿ ಹದಿನೈದು ಸಾವಿರ ಪ್ರತಿಗಳು ಮಾರಾಟವಾಗಿವೆ. ನಕಲು ಪ್ರತಿಗಳ ಮಾರಾಟ ನಡೆಯುತ್ತಿದ್ದು, ಈ ಬಗ್ಗೆ ದೂರು ದಾಖಲಿಸಲು ನಿರ್ಧರಿಸಿದ್ದಾರೆ
ಬೆಂಗಳೂರು, ಜನವರಿ 19: ಲೇಖಕ-ಪತ್ರಕರ್ತ ರವಿ ಬೆಳಗೆರೆ ಅವರು ಡಿಸೆಂಬರ್ 25ರಂದು ಐದಕ್ಕೂ ಹೆಚ್ಚು ಪುಸ್ತಕ ಬಿಡುಗಡೆ ಮಾಡಿದರು. ಅದರಲ್ಲೂ ನಟಿ ಲೀಲಾವತಿ ಅವರ ಆತ್ಮಕಥನ 'ರಾಜ್ ಲೀಲಾ ವಿನೋದ' ಪುಸ್ತಕದ ಬಗ್ಗೆ ವಿಪರೀತ ಕುತೂಹಲ ಹಾಗೂ ನಿರೀಕ್ಷೆಗಳಿದ್ದವು. ಇದೀಗ ಆ ಪುಸ್ತಕದ ಮಾರಾಟ ಸಂಖ್ಯೆಯ ಮಾಹಿತಿ ಒನ್ಇಂಡಿಯಾ ಕನ್ನಡಕ್ಕೆ ಸಿಕ್ಕಿದೆ.
ಭಾವನಾ ಪ್ರಕಾಶನದ ಮಾರಾಟ ವಿಭಾಗದ ಮುಖ್ಯಸ್ಥರಾದ ರವಿಕುಮಾರ್ ಅವರು ನೀಡಿದ ಮಾಹಿತಿ ಪ್ರಕಾರ ಈ ವರೆಗೆ 'ರಾಜ್ ಲೀಲಾ ವಿನೋದ' ಪುಸ್ತಕದ ಹದಿನೈದು ಸಾವಿರ ಪ್ರತಿಗಳು ಮಾರಾಟವಾಗಿವೆ. ಸದ್ಯಕ್ಕೆ ಮತ್ತೆ ಪುಸ್ತಕದ ಮುದ್ರಣ ನಡೆಯುತ್ತಿದ್ದು, ಬೇಡಿಕೆಗೆ ತಕ್ಕಷ್ಟು ಪುಸ್ತಕ ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.[ನನ್ನ ಸ್ಥಿತೀಲಿ ಬೇರೆ ಹೆಂಗಸಿದ್ದಿದ್ದರೆ ಎಷ್ಟು ರಾದ್ಧಾಂತ ಆಗ್ತಿತ್ತು?]

ಉಳಿದಂತೆ ಅದು ಬಿಡುಗಡೆಯಾದ ಆತ್ಮ, ಬಾಟಮ್ ಐಟಮ್, ಕಾಳಿಂಗ ಕಾಳಗ ಪುಸ್ತಕಗಳ ಮಾರಾಟವು ಭರ್ಜರಿಯಾಗಿ ನಡೆದಿದೆ. ಕರ್ನಾಟಕದಾದ್ಯಂತ ಇರುವ ಹಲವು ಮಾರಾಟ ಮಳಿಗೆಗಳಿಂದ ಪುಸ್ತಕಕ್ಕೆ ಬೇಡಿಕೆ ಬಂದಿದೆ. ಆನ್ ಲೈನ್ ನಲ್ಲಿ ಪುಸ್ತಕವನ್ನು ಆರ್ಡರ್ ಮಾಡಿದವರಿಗೆ ಪೂರೈಸಲು ಸಹ ಸಾಧ್ಯವಾಗುತ್ತಿಲ್ಲ ಎಂದು ಕೆಲವು ಮಾರಾಟಗಾರರು ಹೇಳುತ್ತಿದ್ದಾರೆ ಎಂದು ಅವರು ಹೇಳಿದರು.
ಇದೇ ವೇಳೆ ರಾಜ್ ಲೀಲಾ ವಿನೋದ ಪುಸ್ತಕದ ನಕಲು ಮಾಡಿ, ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಅಂಥವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ನಿರ್ಧರಿಸಿದ್ದೇನೆ ಎಂದು ರವಿ ಬೆಳಗೆರೆ ಅವರು ಹೇಳಿದರು.[ಲೀಲಾವತಿ ಆತ್ಮಕಥನ 'ರಾಜ್ ಲೀಲಾ ವಿನೋದ'ದಲ್ಲಿ ಅಂಥಾದ್ದೇನಿದೆ?]
ಆನ್ ಲೈನ್ ಪುಸ್ತಕ ಮಾರಾಟ ಸೇರಿದಂತೆ ಇತರೆ ಓದು ಹಾಗೂ ಪುಸ್ತಕಕ್ಕೆ ಸಂಬಂಧಿಸಿದ ಚಟುವಟಿಕೆಗಳಿಗಾಗಿ ಮೊಬೈಲ್ ಅಪ್ಲಿಕೇಷನ್ ವೊಂದನ್ನು ರೂಪಿಸುವ ಆಲೋಚನೆ ಇದೆ ಎಂದು ಹೇಳಿದ ಅವರು, ಆ ಬಗ್ಗೆ ತಜ್ಞರು, ಸಲಹೆ ನೀಡಬಯಸುವವರು [email protected]ಗೆ ಇ ಮೇಲ್ ಕಳುಹಿಸಬಹುದು ಎಂದು ತಿಳಿಸಿದರು.
-
Vijay Sethupathi: ರಿಷಬ್ ಶೆಟ್ಟಿ ಜೊತೆ ನಟಿಸುವ ದೊಡ್ಡ ಆಸೆ ನನಗಿದೆ: ಆಸೆ ಬಿಚ್ಚಿಟ್ಟ ನಟ ವಿಜಯ್ ಸೇತುಪತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications