ಬಿಬಿಎಂಪಿ: ರಾಜಕಾಲುವೆ ಮೇಲಿನ ಕಾಂಪೌಂಡ್ ತೆರವು
ಬೆಂಗಳೂರು, ಅಕ್ಟೋಬರ್ 11: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಮಂಗಳವಾರ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದೆ. ಮಹದೇವಪುರ ವಿಭಾಗದ ಶೀಲವಂತನಕೆರೆ ಹಾಗೂ ಕೆ.ಆರ್.ಪುರ ವಿಭಾಗದ ಎಸ್.ಆರ್ ಲೇಔಟ್ ನಲ್ಲಿ ರಾಜಕಾಲುವೆ ಮೇಲಿನ ಒತ್ತುವರಿ ತೆರವು ಮಾಡಲಾಯಿತು.
ಮಹದೇವಪುರ ವಿಭಾಗದ ಶೀಲವಂತನ ಕೆರೆಯ ಅಸೆಂಟ್ ಗಾರ್ಡೇನಿಯ ಹಿಂಭಾಗ ಸುಮಾರು 130 ಮೀಟರ್ ಉದ್ದದ ಕಾಂಪೌಂಡ್ ಗೋಡೆಯನ್ನು ತೆರವುಗೊಳಿಸಲಾಗಿದೆ. ಅಲ್ಲದೇ ಕೆ.ಆರ್.ಪುರ ವಿಭಾಗದ ಬಸವನಪುರ ವಾರ್ಡ್ ಎಸ್.ಆರ್ ಲೇಔಟ್ ನಲ್ಲಿ ಸಹ ಒತ್ತುವರಿ ತೆರವು ನಡೆಯಿತು.

ರಾಜಕಾಲುವೆ ಮೇಲೆ ಸುಮಾರು 80 ಮೀಟರ್ ಉದ್ದದ ಮಳೆ ನೀರುಗಾಲುವೆ ಒತ್ತುವರಿ, ಮಳೆ ನೀರುಗಾಲುವೆಗೆ ಹೊಂದಿಕೊಂಡಂತೆ 6 ಆರ್.ಸಿ.ಸಿ ಮನೆ ಹಾಗೂ ಒಂದು ಶೀಟಿನ ಮನೆಗಳು ಇವೆ. ಈ ಪೈಕಿ 2 ಮನೆಯ ಕಾಂಪೌಂಡ್ ಗೋಡೆ ಹಾಗೂ ಮೆಟ್ಟಿಲುಗಳ ಭಾಗವನ್ನು ತೆರವುಗೊಳಿದಲಾಗಿದೆ. ನಂತರ ಎರಡು ಅಂತಸ್ತಿನ ಕಟ್ಟಡವನ್ನು ಮಳೆ ನೀರುಗಾಲುವೆಯ ಮೇಲೆ ನಿರ್ಮಾಣ ಮಾಡಲಾಗಿದೆ. ಮಾರ್ಕಿಂಗ್ ಮಾಡಿರುವ ಭಾಗದವರೆಗೆ ಗೋಡೆ ತೆರವು ಮಾಡಲು ಮುಂದಾದಾಗ ಮನೆಯ ಮಾಲಿಕರೇ ಸ್ವತಹ ತೆರವುಗೊಳಿಸುವುದಾಗಿ ತಿಳಿಸಿದ್ದಾರೆ. ಕೂಡಲೇ ತೆರವು ಮಾಡುವಂತೆ ಮನೆಯ ಮಾಲೀಕರಿಗೆ ಬಿಬಿಎಂಪಿ ಅಧಿಕಾರಿಗಳು ಸೂಚನೆ ನೀಡಿದರು.

ಮತ್ತೊಂದು ಪ್ರತ್ಯೇಕ ಸ್ಥಳದಲ್ಲಿ ಒಂದು ಮನೆಯ ಗೋಡೆ ಭಾಗ ಹಾಗೂ ಕಾಂಪೌಂಡ್ ಗೋಡೆಯನ್ನು ತೆರವುಗೊಳಿಸಲಾಗಿದೆ. ಶೆಡ್ ನ ಒಂದು ಗೋಡೆ, ಮಳೆ ನೀರುಗಾಲುವೆ ಮೇಲೆ ನಿರ್ಮಿಸಿದ್ದ ಮನೆಯ ಎರಡು ಗೋಡೆ ಭಾಗ ತೆರವುಗೊಳಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications