ಉಚಿತ ಹಾಲು ಹಂಚಿಕೆಯಲ್ಲಿ ಮತ ರಾಜಕಾರಣ: ಎಎಪಿ ಖಂಡನೆ
ಬೆಂಗಳೂರು, ಏಪ್ರಿಲ್ 16: ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕರ್ನಾಟಕ ಹಾಲು ಮಹಾಮಂಡಳದಿಂದ ಪ್ರತಿ ದಿವಸವೂ ಉಚಿತವಾಗಿ ಹಂಚುತ್ತಿರುವ ಹಾಲನ್ನು ಸ್ಥಳೀಯ ಬಿಜೆಪಿ ಮುಖಂಡರುಗಳು ತಮ್ಮ ಮತ ಬ್ಯಾಂಕ್ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.
ಕ್ಷೇತ್ರದ ಬಸವೇಶ್ವರ ನಗರ ವಾರ್ಡಿನಲ್ಲಿ ಅಲ್ಲಿನ ಸ್ಥಳೀಯ ಕಾರ್ಪೊರೇಟರ್ ಪತಿ ಹಾಗೂ ಮಾಜಿ ಕಾರ್ಪೊರೇಟರ್ ಪದ್ಮರಾಜ್ ಅವರು ಉಚಿತವಾಗಿ ಬಂದಿರುವ ಹಾಲನ್ನು ಮತ ಚೀಟಿಯನ್ನು ತೋರಿಸುವವರಿಗೆ ಮಾತ್ರ ಹಂಚುತ್ತಿರುವುದು ಆಮ್ ಆದ್ಮಿ ಪಕ್ಷದ ರಿಯಾಲಿಟಿ ಚೆಕ್ ನಿಂದ ತಿಳಿದು ಬಂದಿದೆ.
ಹಲವು ದಿವಸಗಳಿಂದ ಇದೇ ರೀತಿಯ ವರ್ತನೆಯನ್ನು ತೋರುತ್ತಿರುವ ಪದ್ಮರಾಜ್ ಹಾಗೂ ಅವರ ಅನುಯಾಯಿಗಳು ಕ್ಷೇತ್ರದಲ್ಲಿನ ಕಡು ಬಡವರಿಗೆ,ವಲಸಿಗ ಕಾರ್ಮಿಕರಿಗೆ, ನಿರ್ಗತಿಕರಿಗೆ ಈ ಉಚಿತ ಹಾಲನ್ನು ತಲುಪಿಸದೇ ತಮ್ಮ ಕ್ಷೇತ್ರದ ಮತದಾರರುಗಳಿಗೆ ಮಾತ್ರ ಈ ರೀತಿ ಹಂಚುತ್ತಿರುವುದು ತೀರಾ ವಿಪರ್ಯಾಸದ ಸಂಗತಿಯಾಗಿದೆ.

ಕೋರೋನಾ ಮಹಾಭೀತಿಯಂಥ ಈ ಸಂದರ್ಭದಲ್ಲಿ ಸರ್ಕಾರವು ಸದುದ್ದೇಶದಿಂದ ಪ್ರತಿ ದಿವಸ 2.5 ಕೋಟಿ ರೂ.ಗಳ ಎಂಟು ಲಕ್ಷ ಲೀಟರ್ ಹಾಲುಗಳನ್ನು ಬಡವರಿಗೆ ಹಂಚಲು ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದ್ದರೆ, ಬೆಂಗಳೂರು ನಗರದಲ್ಲಿನ ಅನೇಕ ಶಾಸಕರುಗಳು, ಮಹಾನಗರ ಪಾಲಿಕೆ ಸದಸ್ಯರುಗಳು ಈ ಉದ್ದೇಶದ ಆಶಯವನ್ನೇ ಮರೆತು ಬಡವರಿಗೆ ತಲುಪಿಸದೆ ತಮ್ಮ ವೋಟ್ ಬ್ಯಾಂಕ್ ರಾಜಕೀಯವನ್ನು ಮಾಡುತ್ತಿರುವುದು ಅತ್ಯಂತ ದುರಂತದ ಸಂಗತಿ.
ಆಮ್ ಆದ್ಮಿ ಪಕ್ಷವು ಈ ಹಿಂದೆಯೂ ಸಹ ಉಚಿತ ಹಾಲು ಸಂಪೂರ್ಣ ಕಡು ಬಡವರಿಗೆ ತಲುಪದೇ ದುರ್ಬಳಕೆ ಆಗುತ್ತಿರುವ ಬಗ್ಗೆ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿತ್ತು .
ಸರ್ಕಾರವು ಈ ಕೂಡಲೇ ಮಧ್ಯಪ್ರವೇಶಿಸಿ ಇಂತಹ ದುರುಳ ರಾಜಕೀಯ ವ್ಯಕ್ತಿಗಳ ಮೇಲೆ ಕ್ರಮ ಜರುಗಿಸಬೇಕು ಹಾಗೂ ಕೋಟ್ಯಂತರ ರೂಗಳ ಈ ಹಾಲನ್ನು ಕಡು ಬಡವರಿಗೆ ನಿರ್ಗತಿಕರಿಗೆ ತಲುಪಿಸುವಂತಹ ಕಠಿಣ ಕ್ರಮಗಳನ್ನು ಈ ಕೂಡಲೇ ಕೈಗೊಳ್ಳಬೇಕೆಂದು ಆಮ್ ಆದ್ಮಿ ಪಕ್ಷದ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಗುರುಮೂರ್ತಿ ಅವರು ಆಗ್ರಹಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications