ಉಚಿತ ಹಾಲು ಹಂಚಿಕೆಯಲ್ಲಿ ಮತ ರಾಜಕಾರಣ: ಎಎಪಿ ಖಂಡನೆ
ಬೆಂಗಳೂರು, ಏಪ್ರಿಲ್ 16: ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕರ್ನಾಟಕ ಹಾಲು ಮಹಾಮಂಡಳದಿಂದ ಪ್ರತಿ ದಿವಸವೂ ಉಚಿತವಾಗಿ ಹಂಚುತ್ತಿರುವ ಹಾಲನ್ನು ಸ್ಥಳೀಯ ಬಿಜೆಪಿ ಮುಖಂಡರುಗಳು ತಮ್ಮ ಮತ ಬ್ಯಾಂಕ್ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.
ಕ್ಷೇತ್ರದ ಬಸವೇಶ್ವರ ನಗರ ವಾರ್ಡಿನಲ್ಲಿ ಅಲ್ಲಿನ ಸ್ಥಳೀಯ ಕಾರ್ಪೊರೇಟರ್ ಪತಿ ಹಾಗೂ ಮಾಜಿ ಕಾರ್ಪೊರೇಟರ್ ಪದ್ಮರಾಜ್ ಅವರು ಉಚಿತವಾಗಿ ಬಂದಿರುವ ಹಾಲನ್ನು ಮತ ಚೀಟಿಯನ್ನು ತೋರಿಸುವವರಿಗೆ ಮಾತ್ರ ಹಂಚುತ್ತಿರುವುದು ಆಮ್ ಆದ್ಮಿ ಪಕ್ಷದ ರಿಯಾಲಿಟಿ ಚೆಕ್ ನಿಂದ ತಿಳಿದು ಬಂದಿದೆ.
ಹಲವು ದಿವಸಗಳಿಂದ ಇದೇ ರೀತಿಯ ವರ್ತನೆಯನ್ನು ತೋರುತ್ತಿರುವ ಪದ್ಮರಾಜ್ ಹಾಗೂ ಅವರ ಅನುಯಾಯಿಗಳು ಕ್ಷೇತ್ರದಲ್ಲಿನ ಕಡು ಬಡವರಿಗೆ,ವಲಸಿಗ ಕಾರ್ಮಿಕರಿಗೆ, ನಿರ್ಗತಿಕರಿಗೆ ಈ ಉಚಿತ ಹಾಲನ್ನು ತಲುಪಿಸದೇ ತಮ್ಮ ಕ್ಷೇತ್ರದ ಮತದಾರರುಗಳಿಗೆ ಮಾತ್ರ ಈ ರೀತಿ ಹಂಚುತ್ತಿರುವುದು ತೀರಾ ವಿಪರ್ಯಾಸದ ಸಂಗತಿಯಾಗಿದೆ.

ಕೋರೋನಾ ಮಹಾಭೀತಿಯಂಥ ಈ ಸಂದರ್ಭದಲ್ಲಿ ಸರ್ಕಾರವು ಸದುದ್ದೇಶದಿಂದ ಪ್ರತಿ ದಿವಸ 2.5 ಕೋಟಿ ರೂ.ಗಳ ಎಂಟು ಲಕ್ಷ ಲೀಟರ್ ಹಾಲುಗಳನ್ನು ಬಡವರಿಗೆ ಹಂಚಲು ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದ್ದರೆ, ಬೆಂಗಳೂರು ನಗರದಲ್ಲಿನ ಅನೇಕ ಶಾಸಕರುಗಳು, ಮಹಾನಗರ ಪಾಲಿಕೆ ಸದಸ್ಯರುಗಳು ಈ ಉದ್ದೇಶದ ಆಶಯವನ್ನೇ ಮರೆತು ಬಡವರಿಗೆ ತಲುಪಿಸದೆ ತಮ್ಮ ವೋಟ್ ಬ್ಯಾಂಕ್ ರಾಜಕೀಯವನ್ನು ಮಾಡುತ್ತಿರುವುದು ಅತ್ಯಂತ ದುರಂತದ ಸಂಗತಿ.
ಆಮ್ ಆದ್ಮಿ ಪಕ್ಷವು ಈ ಹಿಂದೆಯೂ ಸಹ ಉಚಿತ ಹಾಲು ಸಂಪೂರ್ಣ ಕಡು ಬಡವರಿಗೆ ತಲುಪದೇ ದುರ್ಬಳಕೆ ಆಗುತ್ತಿರುವ ಬಗ್ಗೆ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿತ್ತು .
ಸರ್ಕಾರವು ಈ ಕೂಡಲೇ ಮಧ್ಯಪ್ರವೇಶಿಸಿ ಇಂತಹ ದುರುಳ ರಾಜಕೀಯ ವ್ಯಕ್ತಿಗಳ ಮೇಲೆ ಕ್ರಮ ಜರುಗಿಸಬೇಕು ಹಾಗೂ ಕೋಟ್ಯಂತರ ರೂಗಳ ಈ ಹಾಲನ್ನು ಕಡು ಬಡವರಿಗೆ ನಿರ್ಗತಿಕರಿಗೆ ತಲುಪಿಸುವಂತಹ ಕಠಿಣ ಕ್ರಮಗಳನ್ನು ಈ ಕೂಡಲೇ ಕೈಗೊಳ್ಳಬೇಕೆಂದು ಆಮ್ ಆದ್ಮಿ ಪಕ್ಷದ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಗುರುಮೂರ್ತಿ ಅವರು ಆಗ್ರಹಿಸಿದ್ದಾರೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications