ದರ್ಶನ್ ಮನೆ, ಎಸ್ಎಸ್ ಆಸ್ಪತ್ರೆ ನೆಲಸಮವಾಗಲಿದೆ: ಡಿಸಿ ಶಂಕರ್
Recommended Video

ಬೆಂಗಳೂರು, ಅಕ್ಟೋಬರ್ 19: ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ ಒತ್ತುವರಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಶಂಕರ್ ಅವರು ಮಹತ್ವದ ಸುಳಿವು ನೀಡಿದ್ದಾರೆ. ಹೈಕೋರ್ಟಿನಿಂದ ರಿಲೀಫ್ ಪಡೆದರೂ ದರ್ಶನ್ ಮನೆ ಹಾಗೂ ಶಾಮನೂರು ಕುಟುಂಬದ ಆಸ್ಪತ್ರೆ ನೆಲಸಮ ಮಾಡುವ ಅಧಿಕಾರ ಬಿಬಿಎಂಪಿಗಿದೆ ಎಂದಿದ್ದಾರೆ.
ಐಡಿಯಲ್ ಹೋಮ್ ಒತ್ತುವರಿಗೆ ಸಂಬಂಧಿಸಿದಂತೆ ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳುವ ಅಧಿಕಾರ ವಿಶೇಷ ಆಯುಕ್ತರಿಗಿರುತ್ತದೆ ಎಂದು ಡಿಸಿ ಶಂಕರ್ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ರಾಜಕಾಲುವೆ ಒತ್ತುವರಿ ಮಾಡಿ, ಅನಧಿಕೃತವಾಗಿ ನಿರ್ಮಿಸಿರುವ ಮನೆ, ಆಸ್ಪತ್ರೆ ಸೇರಿದಂತೆ ಎಲ್ಲಾ ಕಟ್ಟಡಗಳನ್ನು ತೆರವುಗೊಳಿಸಲಾಗುವುದು. ಈ ಕುರಿತಂತೆ ಎರಡೆರಡು ಬಾರಿ ಸರ್ವೆ ನಡೆಸಿದ್ದೇವೆ, ಬಿಬಿಎಂಪಿ ತೆರವು ಕಾರ್ಯ ಮಾಡಲಿ ಎಂದು ಹೇಳಿದರು.
ನಟ ದರ್ಶನ್ ತೂಗುದೀಪ ಅವರ ಮನೆ ಹಾಗೂ ಕಾಂಗ್ರೆಸ್ ಮುಖಂಡ ಶಾಮನೂರು ಶಿವಶಂಕರಪ್ಪ ಅವರ ಎಸ್.ಎಸ್ ಆಸ್ಪತ್ರೆ ತೆರವು ವಿಚಾರದ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಹೈಕೋರ್ಟ್ ಸೂಚನೆ ಮೇರೆಗೆ ತಾತ್ಕಾಲಿಕವಾಗಿ ತೆರವು ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಆದರೆ, ತೆರವುಗೊಳಿಸುವ ಅಧಿಕಾರವನ್ನು ಸ್ಪೆಷಲ್ ಕಮೀಷನರ್ ಹೊಂದಿರುತ್ತಾರೆ ಎಂದಿದ್ದಾರೆ.

ಸರ್ವೆ ವರದಿ ಏನು ಹೇಳುತ್ತದೆ?
ಭೂ ದಾಖಲೆಗಳ ಇಲಾಖೆಯ ಜಂಟಿ ನಿರ್ದೇಶಕ ಕೆ.ಜಯಪ್ರಕಾಶ್ ಅವರು ಬಿಬಿಎಂಪಿ ಆಯುಕ್ತರಿಗೆ ಸರ್ವೆ ವರದಿಯನ್ನು ಸಲ್ಲಿಸಿದ್ದಾರೆ. ಇದರಲ್ಲಿ ದರ್ಶನ್ ಅವರ ಮನೆ ಮತ್ತು ಎಸ್.ಎಸ್.ಆಸ್ಪತ್ರೆ ಸೇರಿದಂತೆ ವಿವಿಧ ಕಟ್ಟಡಗಳು ಸುಮಾರು 7 ಎಕರೆಯಷ್ಟು ವಿಸ್ತೀರ್ಣದ ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡಿವೆ ಎಂದು ಹೇಳಿದ್ದಾರೆ. ಇದಕ್ಕೂ ಮುನ್ನ ಸರಕಾರಿ ಜಮೀನು ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಎಟಿ ರಾಮಸ್ವಾಮಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. 2007ರಲ್ಲಿ 1,22,918ಎಕರೆ ಸರ್ಕಾರಿ ಜಮೀನು ಒತ್ತುವರಿ ಇದೆ ಅಂತ ವರದಿ ನೀಡಿದ್ದರು.

ಬಿಬಿಎಂಪಿ ಆಯುಕ್ತರು ಹೇಳುವುದೇನು?
ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರು ಈ ಕುರಿತು ಹೇಳಿಕೆ ನೀಡಿ, '1969ರಲ್ಲಿ ಬೆಂಗಳೂರು ನಗರ ಸುಧಾರಣಾ ಟ್ರಸ್ಟ್ ಮಂಡಳಿಯಿಂದ ಐಡಿಯಲ್ ಹೋಮ್ಸ್ ಬಡಾವಣೆ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿತ್ತು. 1989ರಲ್ಲಿ ಬಡಾವಣೆಯ ಪರಿಷ್ಕೃತ ಯೋಜನೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಅನುಮತಿ ದೊರೆತಿದೆ. ಅದರೆ, ನಂತರದ ಬೆಳವಣಿಗೆಯಲ್ಲಿ ಬಡಾವಣೆಯಲ್ಲಿ ರಾಜಕಾಲುವೆ ಒತ್ತುವರಿಯಾಗಿರುವುದು ಕಂಡು ಬಂದಿದೆ. ಈ ಬಗ್ಗೆ ನಡೆಸಿದ ಎರಡು ಸರ್ವೆಗಳ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಗಿದೆ.

ಎಷ್ಟು ಒತ್ತುವರಿಯಾಗಿದೆ?
ನಟ ದರ್ಶನ್ ಅವರು ಒಟ್ಟು 2,100 ಚ. ಅಡಿ ರಾಜ ಕಾಲುವೆ ಪ್ರದೇಶ ಒತ್ತುವರಿ ಮಾಡಿ ಮನೆ ನಿರ್ಮಿಸಿರುವುದು ಬಿಬಿಎಂಪಿ ಪರಿಶೀಲನೆಯಲ್ಲಿ ದೃಢಪಟ್ಟಿದೆ. ಶಾಸಕ ಶಾಮನೂರು ಶಿವಶಂಕರಪ್ಪ ಅವರ ಎಸ್.ಎಸ್. ಆಸ್ಪತ್ರೆಯು ಸಹ ರಾಜಕಾಲುವೆ ಒತ್ತುವರಿ ಮಾಡಿ ನಿರ್ಮಿಸಿರುವುದು ದೃಢಪಟ್ಟಿದೆ. ಒಟ್ಟು 22ಗುಂಟೆ ಒತ್ತುವರಿ ಸ್ಥಳ, 69 ಆಸ್ತಿಗಳನ್ನು ತೆರವುಗೊಳಿಸಲು ಗುರುತಿಸಲಾಗಿದೆ ಎಂದು ತಹಶೀಲ್ದಾರ್ ಶಿವಕುಮಾರ್ ಅವರು ಒನ್ ಇಂಡಿಯಾಗೆ ತಿಳಿಸಿದ್ದಾರೆ.

ಶಾಮನೂರು ಶಿವಶಂಕರಪ್ಪ ಪ್ರಶ್ನೆ
30 ವರ್ಷಗಳ ಹಿಂದೆ ಆಸ್ಪತ್ರೆಗೆಂದು 2.34 ಎಕರೆ ಜಾಗವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ (ಬಿಡಿಎ)ಪಡೆದುಕೊಂಡಿದ್ದೆವು. ಅದು ಈಗ ಹೇಗೆ ಅಕ್ರಮವಾಗುತ್ತದೆ ಎಂದು ದಾವಣಗೆರೆ ದಕ್ಷಿಣದ ಎಂ ಎಲ್ ಎ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರು ಪ್ರಶ್ನಿಸಿದ್ದಾರೆ. ಪ್ರಭಾವಿಗಳ ಮನೆ, ಮಾಲ್ ಗಳನ್ನು ಮಾತ್ರ ತೆರವುಗೊಳಿಸದೆ ಉಳಿಸಲಾಗಿದೆ. ಮಧ್ಯಮ ವರ್ಗದ ಜನರು, ಬಡವರಿಗೆ ಬಿಡಿಎ ಕಾರ್ಯಾಚಾರಣೆಯಿಂದ ಅನ್ಯಾಯವಾಗಿದೆ ಎಂದು ನೊಂದವರು ಪ್ರಶ್ನಿಸಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications