ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆರ್. ಆರ್. ನಗರ ಉಪ ಚುನಾವಣೆ; ಬಿಬಿಎಂಪಿ ಆಯುಕ್ತರ ಸಭೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 30: ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಕ್ಷೇತ್ರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರುತ್ತದೆ. ಚುನಾವಣಾ ನೀತಿ ಸಂಹಿತೆ ಕ್ಷೇತ್ರದ ವ್ಯಾಪ್ತಿಯಲ್ಲಿ ಈಗಾಗಲೇ ಜಾರಿಗೆ ಬಂದಿದೆ.

ಬುಧವಾರ ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ ಪ್ರಸಾದ್ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕುರಿತು ರಾಜಕೀಯ ಪಕ್ಷಗಳ ಜೊತೆ ಸಭೆ ನಡೆಸಿದರು.

ಆರ್. ಆರ್. ನಗರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮ? ಆರ್. ಆರ್. ನಗರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮ?

ಸೆಪ್ಟೆಂಬರ್ 29ರ ಮಂಗಳವಾರದಿಂದ ಮಾದರಿ ನೀತಿ ಸಂಹಿತೆ ಕ್ಷೇತ್ರದಲ್ಲಿ ಜಾರಿಯಾಗಿದೆ. ಬಿಬಿಎಂಪಿ ಆಯುಕ್ತರೇ ಚುನಾವಣಾಧಿಕಾರಿಗಳಾಗಿದ್ದಾರೆ. ಮಾದರಿ ನೀತಿ ಸಂಹಿತೆ ಕುರಿತು ರಾಜಕೀಯ ಪಕ್ಷಗಳ ಮುಖಂಡರ ಜೊತೆ ಚುನಾವಣಾಧಿಕಾರಿಗಳು ಸಭೆ ನಡೆಸಿದರು.

ಉಪ ಚುನಾವಣೆ ಘೋಷಣೆ; ಸಂಪುಟ ವಿಸ್ತರಣೆ ಮುಂದಕ್ಕೆ? ಉಪ ಚುನಾವಣೆ ಘೋಷಣೆ; ಸಂಪುಟ ವಿಸ್ತರಣೆ ಮುಂದಕ್ಕೆ?

Rajarajeshwari Nagar By Election Meeting With Political Partys

ಕ್ಷೇತ್ರದ ವ್ಯಾಪ್ತಿಯಲ್ಲಿ ಮಾದರಿ‌ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಮಾರ್ಗಸೂಚಿ ಗಳನ್ನು ಪಾಲನೆ ಮಾಡುವಂತೆ ರಾಜಕೀಯ ಪಕ್ಷಗಳಿಗೆ ಸೂಚನೆ ನೀಡಲಾಯಿತು. ಸಭೆಯಲ್ಲಿ ಪಾಲಿಕೆ ವಿಶೇಷ ಆಯುಕ್ತರು (ಆಡಳಿತ) ಜೆ. ಮಂಜುನಾಥ್ ಸಹ ಇದ್ದರು.

ಶಿರಾ, ಆರ್‌ಆರ್‌ ನಗರ ಉಪ ಚುನಾವಣೆಗೆ ದಿನಾಂಕ ಪ್ರಕಟ!ಶಿರಾ, ಆರ್‌ಆರ್‌ ನಗರ ಉಪ ಚುನಾವಣೆಗೆ ದಿನಾಂಕ ಪ್ರಕಟ!

Recommended Video

ಅವತ್ತು ಆಗಿದ್ದು ಇವತ್ತು ಆಗ್ತಿರೋದು ಎಲ್ಲಾ ಒಂದೇ | Oneindia Kanada

ಆರ್. ಆರ್. ನಗರ ಕ್ಷೇತ್ರದ ಉಪ ಚುನಾವಣೆಗೆ ಅಕ್ಟೋಬರ್ 9ರಂದು ಅಧಿಸೂಚನೆ ಪ್ರಕಟವಾಗಲಿದೆ. ಅಕ್ಟೋಬರ್ 16 ನಾಮಪತ್ರ ಸಲ್ಲಿಕೆ ಮಾಡಲು ಕೊನೆಯ ದಿನವಾಗಿದೆ. ಅಕ್ಟೋಬರ್ 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನವೆಂಬರ್ 3ರಂದು ಮತದಾನ ನಡೆಯಲಿದ್ದು, ನವೆಂಬರ್ 10ರಂದು ಮತ ಎಣಿಕೆ ನಡೆಯಲಿದೆ.

English summary
Bruhat Bengaluru Mahanagara Palike (BBMP) commissioner Manjunath Prasad chaired the meeting with political party's regarding Rajarajeshwari Nagar by election. Election will be held on November 3.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X