ಡಾಂಬರು ಭಾಗ್ಯ ಕಾಣದ ರಾಜರಾಜೇಶ್ವರಿ ನಗರದ ರಸ್ತೆ
Recommended Video

ಬೆಂಗಳೂರು, ಅಕ್ಟೋಬರ್ 05 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಗರದ ರಸ್ತೆಗಳ ಗುಂಡಿಗಳನ್ನು ಮುಚ್ಚಲು ಕಾರ್ಯಾಚರಣೆ ಆರಂಭಿಸಿದೆ. ಆದರೆ, ನಾಲ್ಕು ತಿಂಗಳು ಕಳೆದರೂ ರಸ್ತೆಯೊಂದಕ್ಕೆ ಡಾಂಬರು ಭಾಗ್ಯ ಸಿಕ್ಕಿಲ್ಲ. ರಸ್ತೆ ಸರಿಪಡಿಸುವಂತೆ ನಿವಾಸಿಗಳು ಬಿಬಿಎಂಪಿಯನ್ನು ಒತ್ತಾಯಿಸುತ್ತಿದ್ದಾರೆ.
ರಾಜರಾಜೇಶ್ವರಿ ನಗರದ ಬಿಎಚ್ಇಎಲ್ ಲೇಔಟ್ನ ರಸ್ತೆಯ ಸ್ಥಿತಿ ಇದು. ಒನ್ ಇಂಡಿಯಾ ಕನ್ನಡದ ಓದುಗರೊಬ್ಬರು ಬಡಾವಣೆಯ ರಸ್ತೆಯ ಸ್ಥಿತಿಯ ಚಿತ್ರ, ವಿಡಿಯೋವನ್ನು ಕಳುಹಿಸಿದ್ದಾರೆ. ಎಲ್ಜಿ ಗೋಡಾನ್ ಬಳಿ ಇರುವ ಕೆಂಪೇಗೌಡ ರಸ್ತೆ ಆರಂಭದಿಂದ ಕೊನೆಯ ತನಕ ಹಾಳಾಗಿ ಹೋಗಿದೆ.

4ನೇ ಮೈನ್ನ ರಸ್ತೆಯಲ್ಲಿ ಒಳಚರಂಡಿ ಕಾಮಗಾರಿಗಾಗಿ ಚೆನ್ನಾಗಿದ್ದ ರಸ್ತೆಯನ್ನು ಅಗೆದು ಹಾಕಲಾಗಿತ್ತು. ಪೈಪ್ ಅಳವಡಿಕೆ ಮಾಡಿ, ಕಾಮಗಾರಿ ಮುಗಿದು ನಾಲ್ಕು ತಿಂಗಳು ಕಳೆದಿದೆ. ಆದರೆ, ರಸ್ತೆಗೆ ಮಾತ್ರ ಡಾಂಬರು ಭಾಗ್ಯ ಸಿಕ್ಕಿಲ್ಲ.
ಚೆನ್ನಾಗಿದ್ದ ರಸ್ತೆಯನ್ನು ಅಗೆದು ಹಾಕಿದ ಬಳಿಕ ಸಂಬಂಧಪಟ್ಟವರು ಇತ್ತ ತಿರುಗಿ ನೋಡಿಲ್ಲ. ನಿರಂತರವಾಗಿ ಸುರಿದ ಮಳೆಯಿಂದಾಗಿ ರಸ್ತೆ ಮತ್ತಷ್ಟು ಹದಗೆಟ್ಟಿದ್ದು, ನಿವಾಸಿಗಳು, ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು ಪರದಾಡುತ್ತಿದ್ದಾರೆ.

ಒಳಚರಂಡಿ ಪೈಪುಗಳು ಚೆನ್ನಾಗಿತ್ತು, ಆದರೂ ಅದನ್ನು ಬದಲಾವಣೆ ಮಾಡಲಾಗಿದೆ. ಪ್ರತಿ ಮನೆಗೆ ಮತ್ತೆ ಒಳಚರಂಡಿ ಸಂಪರ್ಕ ಕಲ್ಪಿಸಲು ಕಾಮಗಾರಿಯ ಗುತ್ತಿಗೆ ಪಡೆದವರು ನಿವಾಸಿಗಳಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

ನಗರದ ರಸ್ತೆ ಗುಂಡಿಗಳನ್ನು ಮುಚ್ಚಲು ಕಾರ್ಯಾಚರಣೆ ಆರಂಭಿಸಿರುವ ಬಿಬಿಎಂಪಿ ಅಧಿಕಾರಿಗಳು, ಡಾಂಬರು ಭಾಗ್ಯವಿಲ್ಲದ ಈ ರಸ್ತೆಯನ್ನು ಒಮ್ಮೆ ನೋಡಲಿ, ತಕ್ಷಣ ಇದನ್ನು ರಿಪೇರಿ ಮಾಡಿಸಲಿ ಎಂಬುದು ನಿವಾಸಿಗಳ ಒತ್ತಾಯವಾಗಿದೆ.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications