ಮದ್ಯರಾತ್ರಿ ವಿಸ್ತರಣೆಗೆ ಕಾಂಗ್ರೆಸಿಗರ ವಿರೋಧ
ಬೆಂಗಳೂರು, ಮಾ.5 : ಬೆಂಗಳೂರಿನಲ್ಲಿ ನೈಟ್ ಲೈಫ್ ಅವಧಿ ವಿಸ್ತರಣೆ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಕಾಂಗ್ರೆಸ್ ನಾಯಕರೇ ವಿರೋಧ ವ್ಯಕ್ತಪಡಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಮತ್ತು ವಿಧಾನಪರಿಷತ್ ಸದಸ್ಯ ಎಂವಿ ರಾಜಶೇಖರನ್ ಮದ್ಯರಾತ್ರಿ ವಿಸ್ತರಣೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ತಡರಾತ್ರಿ 1 ಗಂಟೆವರೆಗೂ ಬಾರ್ ಮತ್ತು ರೆಸ್ಟೋರೆಂಟ್ ತೆರೆಯಲು ಅವಕಾಶ ಕಲ್ಪಿಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿರುವ ವಿಧಾನಪರಿಷತ್ ಸದಸ್ಯ ಎಂ.ವಿ. ರಾಜಶೇಖರನ್ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಅಂಕಿ ಅಂಶಗಳ ಕುರಿತು ಮಾಹಿತಿ ನೀಡಿರುವ ರಾಜಶೇಖರನ್, ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. [ನೈಟ್ ಲೈಫ್ ಗೆ ಬಿಜೆಪಿ ವಿರೋಧ]

ಎಂವಿ ರಾಜಶೇಖರನ್ ಬರೆದ ಪತ್ರದಲ್ಲಿ ಪಾಪದ ದುಡ್ಡಿನಲ್ಲಿ ಪೊಲೀಸ್ ಇಲಾಖೆಯನ್ನು ಬಲಗೊಳಿಸುವ ಅಗತ್ಯವಿಲ್ಲ. ಆದ್ದರಿಂದ ಸರ್ಕಾರದ ನಿರ್ಣಯವನ್ನು ಹಿಂಪಡೆಯಬೇಕು, ಸರ್ಕಾರ ಈ ನಿರ್ಧಾರದ ಕುರಿತು ಪುನರ್ ಪರಿಶೀಲನೆ ನಡೆಸಬೇಕು ಎಂದು ಹೇಳಿದ್ದಾರೆ. [ಪೊಲೀಸರಿಗೆ ಸವಾಲು]
ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ 2012-13ರಲ್ಲಿ ನಡೆಸಿದ ಸಮೀಕ್ಷೆಯ ಪಕ್ರಾರ ಬೆಂಗಳೂರು ನಗರದಲ್ಲಿ ಶೇ.33ಕ್ಕೂ ಹೆಚ್ಚು ಯುವಕ-ಯುವತಿಯರು ಮದ್ಯವ್ಯಸನಿಗಳಾಗಿದ್ದಾರೆ. ಅದರಲ್ಲೂ ಹದಿಹರೆಯದ ಯುವಕ ಯುವತಿಯರು ಮದ್ಯವ್ಯಸನಿಗಳಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನೈಟ್ ಲೈಫ್ ಅವಧಿ ವಿಸ್ತರಣೆ ಬೇಕೆ? ಎಂದು ರಾಜಶೇಖರನ್ ಪ್ರಶ್ನಿಸಿದ್ದಾರೆ. [ಬೆಂಗಳೂರಿನಲ್ಲಿ ಇನ್ನು ಮದ್ಯರಾತ್ರಿ]
ನಿಮ್ಹಾನ್ಸ್ ಸಂಸ್ಥೆಯು ತನ್ನ ವಾರ್ಷಿಕ ಪ್ರಕಟಣೆಯಲ್ಲಿ ಯುವಜನರ ಆರೋಗ್ಯದ ಮೇಲೆ ಮದ್ಯಪಾನ ದುಷ್ಪರಿಣಾಮ ಬೀರುತ್ತಿರುವ ಕುರಿತಂತೆ ವಿಶೇಷ ಅಧ್ಯಯನ ಮಾಡಿ ವರದಿ ಪ್ರಕಟಿಸಿದೆ. ಬೆಂಗಳೂರಿನಂತಹ ನಗರದಲ್ಲಿ ನೈಟ್ ಲೈಫ್ ವಿಸ್ತರಣೆ ಮಾಡುವ ಮೊದಲು ಸರ್ಕಾರ ಗಂಭೀರವಾಗಿ ಆಲೋಚಿಸಬೇಕು ಎಂದು ಪತ್ರದಲ್ಲಿ ರಾಜಶೇಖರನ್ ಮನವಿ ಮಾಡಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications