ಸಲ್ಲೇಖನ ನಿಷೇಧ ಖಂಡಿಸಿ ಬೆಂಗಳೂರಲ್ಲಿ ಜೈನರ ಬೃಹತ್ ಜಾಥಾ
ಬೆಂಗಳೂರು, ಆಗಸ್ಟ್, 27 : ಜೈನಧರ್ಮೀಯರು ಸಲ್ಲೇಖನ ವ್ರತ ವಿರುದ್ದ ರಾಜಸ್ಥಾನ ಹೈಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಪರಮ ಪೂಜ್ಯ 108 ಬಾಲಾಚಾರ್ಯಶ್ರೀ ಸಿದ್ಧಸೇನ ಮಹಾರಾಜರ ನೇತೃತ್ವದಲ್ಲಿ ಮೌನ ಜಾಥಾ ಕೈಗೊಂಡರು.
ಜೈನ ಧರ್ಮ ಪವಿತ್ರ ಆಚರಣೆಯಾದ ಸಲ್ಲೇಖನ ವ್ರತಕ್ಕೆ ನಿಷೇಧ ಹೇರಿ ರಾಜಸ್ಥಾನ ಹೈಕೋರ್ಟ್ ಎಡವಟ್ಟು ಎಸಗಿದೆ. ಈ ಪ್ರಯುಕ್ತ ಬೆಂಗಳೂರು ಸೇರಿದಂತೆ ದೇಶದಾದ್ಯಂತ ಜೈನ ಧರ್ಮೀಯರು ಪ್ರತಿಭಟನೆ ಕೈಗೊಂಡಿದ್ದಾರೆ.[ಜೈನರ ಸಲ್ಲೇಖನ ವ್ರತ ಕಾನೂನುಬಾಹಿರ ಆಚರಣೆಯಂತೆ!]
ಸಲ್ಲೇಖನ ವ್ರತ ಆತ್ಮಹತ್ಯೆಗೆ ಸಮಾನವಾದದು, ಅದನ್ನು ನಿಷೇಧಿಸಬೇಕು ಎಂದು ನಿಖಿಲ್ ಸೋನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ರಾಜಸ್ಥಾನ ಹೈಕೋರ್ಟ್ ನ್ಯಾಯಾಧೀಶ ಸುನೀಲ್ ಅಂಬ್ಬಾವಿ ನೇತೃತ್ವದ ಖಂಡ ಪೀಠ ಐಪಿಸಿ ಸೆಕ್ಷನ್ 306(ಆತ್ಮಹತ್ಯೆಗೆ ಪ್ರೇರಣೆ), 309( ಆತ್ಮಹತ್ಯೆಗೆ ಯತ್ನ) ಪ್ರಕಾರ ಕಾನೂನು ಬಾಹಿರ. ಈ ವ್ರತ ಅನುಸರಿಸಲು ಮುಂದಾದಲ್ಲಿ ಅವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ಜೈನರ ಆಚರಣಾ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಿತ್ತು.
ಈ ತೀರ್ಪನ್ನು ವಿರೋಧಿಸಿದ ಜೈನರು ಬೆಂಗಳೂರಿನ ಜಯನಗರ ಜಿನ ಮಂದಿರದಿಂದ ಸುಮಾರು ಬೆಳಿಗ್ಗೆ 8.30 ರ ವೇಳೆಗೆ ಜಾಥಾ ಆರಂಭಿಸಿದ್ದು, ಇದು ಮೈಸೂರು ಬ್ಯಾಂಕ್, ಕೆ. ಆರ್ ರಸ್ತೆ ಮೂಲಕ ಚಿಕ್ಕಪೇಟೆ ಬಳಿಯ ಶ್ವೇತಾಂಬರ ಜಿನ ಮಂದಿರ, ಅವೆನ್ಯೂ ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿತು. ಇದರ ಚಿತ್ರ ತುಣುಕುಗಳು ಇಲ್ಲಿದೆ ನೋಡಿ.

ಏನಿದು ಸಲ್ಲೇಖನ ವ್ರತ?
ಜೈನ ಧರ್ಮದಲ್ಲಿ ದೀಕ್ಷೆ ಪಡೆದ ವ್ಯಕ್ತಿ ತನ್ನ ಸ್ವಇಚ್ಛೆಯಿಂದ ನೀರು ಆಹಾರವನ್ನು ಬಿಟ್ಟು ಕ್ರಮಬದ್ದವಾದ ಉಪವಾಸ ಕೈಗೊಳ್ಳುತ್ತಾರೆ. ಆಹಾರ ಕ್ರಮಾಧಿಗಳನ್ನು ಬಿಡುತ್ತಾ ದೇಹದ ಮೇಲಿನ ಮಮತೆಯನ್ನು ಕಳೆದುಕೊಂಡು, ಕೊನೆ ಕ್ಷಣದವರೆಗೂ ಸಾವನ್ನು ಬಹಳ ಖುಷಿಯಿಂದಲೇ ಸ್ವೀಕರಿಸುವುದೇ ಸಲ್ಲೇಖನ ವ್ರತ.

ಪರಮ ಪೂಜ್ಯ 108 ಬಾಲಾಚಾರ್ಯಶ್ರೀ ಸಿದ್ಧಸೇನ ಮಹಾರಾಜರು
ಇಹಲೋಕದ ವ್ಯಾಮೋಹ ತೊರೆದು ಮೋಕ್ಷವನ್ನು ಸಾಧಿಸಲು ಇರುವ ಒಂದು ಅತ್ಯುತ್ತಮ ಮಾರ್ಗವೇ ಸಲ್ಲೇಖನ ವ್ರತ. ಇದು ಜೈನ ಧರ್ಮೀಯರ ಪವಿತ್ರ ನಂಬಿಕೆ.

ಶ್ವೇತಾಂಬರ ಮತ್ತು ದಿಗಂಬರ ಜೈನರು ಒಟ್ಟಾಗಿ ಪ್ರತಿಭಟನೆ
ಸಲ್ಲೇಖನ ವ್ರತ ಯಾವ ವ್ರತ ಮರಣದಲ್ಲಿ ಬರುತ್ತದೆ?
ಜೈನಧರ್ಮದಲ್ಲಿ ಬಾಲ ಮರಣ, ಪಂಡಿತ ಮರಣ, ವ್ರತ ಮರಣ ಎಂಬ ಮೂರು ವರ್ಗವಿದೆ. ಇದರಲ್ಲಿ ಸಲ್ಲೇಖನ ವ್ರತವು ವ್ರತ ಮರಣದಲ್ಲಿ ಬರುತ್ತದೆ.

ಸಲ್ಲೇಖನ ವ್ರತ ಮೊದಲು ಕೈಗೊಂಡವರು
ವ್ರತ ಮರಣದಲ್ಲಿನ ಸಲ್ಲೇಖನ ವ್ರತವನ್ನು ಜೈನಧರ್ಮದ ೨೪ನೇ ತೀರ್ಥಂಕರ ವರ್ಧಮಾನ ಮಹಾವೀರ, ಭದ್ರಬಾಹುಮುನಿ ಮತ್ತು ಚಂದ್ರಗುಪ್ತ ಮೌರ್ಯ ಕೈಗೊಂಡರೆಂದು ತಿಳಿದು ಬಂದಿದೆ. ವಿಶ್ವದಲ್ಲಿ ಸಲ್ಲೇಖನ ವ್ರತ ಮರಣಗಳು ಹೆಚ್ಚಾಗಿ ಶ್ರವಣ ಬೆಳಗೊಳದಲ್ಲಿ ಸಂಭವಿಸಿದೆ.

ಸಲ್ಲೇಖನ ವ್ರತ ಪದಶಃ ಅರ್ಥ:
ಸತ್ (ಶ್ಲಾಘನೀಯ), ಲೇಖನಾ (ಕಾರ್ಯಕ್ಲೇಷ) ಎಂಬ ೨ ಪದಗಳು ಸಲ್ಲೇಖನವನ್ನು ವಿಧಿ ವಿಧಾನ ಸಾಧನೆ ತಪಸ್ಸು, ಯೋಗ ಎಂದೆಲ್ಲ ಗುರುತಿಸಲಾಗಿದೆ. ಇಂದ್ರಿಯ ನಿಗ್ರಹ, ಮಲವಿನಾಶ, ಕರ್ಮಕಳಂಕದಿಂದ ಮುಕ್ತಿ ಪಡೆದುಕೊಂಡು ಆತ್ಮದತ್ತ ಮನಸ್ಸನ್ನು ಕೇಂದ್ರೀಕರಿಸುವುದು.

ಜೈಪುರದಲ್ಲಿನ ಜೈನರು
ಜೈಪುರದಲ್ಲಿ ಸುಮಾರು 1 ಲಕ್ಷ ಜೈನರು ಸಲ್ಲೇಖನ ವ್ರತ ನಿಷೇಧದ ತೀರ್ಪು ವಿರೋಧಿಸಿ ಜಾಥಾ ಕೈಗೊಂಡಿದ್ದರು
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications