ಭಾರತ ಎಲೆಕ್ಟ್ರಿಕ್ ಉತ್ಪಾದನಾ ಹಬ್ ಆಗುವತ್ತ ಹೆಜ್ಜೆ: ರಾಜೀವ್ ಚಂದ್ರಶೇಖರ್
ಬೆಂಗಳೂರು, ಅಕ್ಟೋಬರ್ 23: ಭಾರತವು ಎಲೆಕ್ಟ್ರಿಕ್ ಉತ್ಪಾದನಾ ಹಬ್ ಆಗುವತ್ತ ಮಹತ್ವದ ಹೆಜ್ಜೆ ಇರಿಸಿದೆ ಎಂದು ಐಟಿ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದರು.
ಭಾರತ ಎಲೆಕ್ಟ್ರಾನಿಕ್ ಉತ್ಪಾದನಾ ಹಬ್ ಆಗಲು ಮತ್ತು ಜಾಗತಿಕ ಮೌಲ್ಯಯುತವಾದ ಜಾಲದ ವಿಶ್ವಾಸಾರ್ಹವಾದ ದೇಶವಾಗಲು ಮಹತ್ವಾಕಾಂಕ್ಷೆಗಳನ್ನು ಹೊಂದಿದ್ದು, ಇದಕ್ಕಾಗಿ ಅಗತ್ಯವಿರುವ ಪರಿಸರ ವ್ಯವಸ್ಥೆಯನ್ನು ರಚಿಸುವತ್ತ ಕಾರ್ಯನಿರತವಾಗಿದೆ ಎಂದರು.
ಆರ್ಥಿಕತೆಯ ಪುನಶ್ಚೇತನ: ಪುನರ್ಕಲ್ಪನೆ. ರೀಬೂಟ್, ಸುಧಾರಣೆ'' ಎಂಬ ಕುರಿತಾದ ವಿಷಯದ ಮೇಲೆ ಪಬ್ಲಿಕ್ ಅಫೇರ್ಸ್ ಫೋರಂ ಆಫ್ ಇಂಡಿಯಾ(ಪಿಎಎಫ್ಐ) ಏರ್ಪಡಿಸಿದ್ದ 8 ನೇ ರಾಷ್ಟ್ರೀಯ ವಿಚಾರ ಸಂಕಿರಣವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, 2014-15 ರಲ್ಲಿ ನಮ್ಮ ದೇಶದಲ್ಲಿ 1.8 ಲಕ್ಷ ಕೋಟಿ ಮೌಲ್ಯದ ಎಲೆಕ್ಟ್ರಾನಿಕ್ ಉತ್ಪಾದನೆ ಇತ್ತು.

ನಂತರದ ಐದು ವರ್ಷಗಳಲ್ಲಿ ಇದರ ಪ್ರಮಾಣ 5.5 ಲಕ್ಷ ಕೋಟಿ ರೂಪಾಯಿಗಳಿಗೆ ತಲುಪಿತು. ನಾವು ನಿಖರವಾದ ನೀತಿಗಳನ್ನು ರೂಪಿಸಿರುವುದು ಮತ್ತು ಗುರಿಯನ್ನು ಇಟ್ಟುಕೊಂಡು ನೀತಿಗಳನ್ನು ರೂಪಿಸುವ ಮೂಲಕ ಬೆಳವಣಿಗೆಯನ್ನು ಕಂಡಿದ್ದೇವೆ. ಇದು ನಮ್ಮ ಯಶಸ್ಸು ಎಂದೇ ಹೇಳಬಹುದು. ಇದೇ ವೇಳೆ ವಿಶ್ವಾಸಾರ್ಹವಾದ ಮೌಲ್ಯಯುತ ಜಾಲದಲ್ಲಿ ನಾವು ಪ್ರಮುಖ ಪಾತ್ರವನ್ನು ವಹಿಸುವುದು ನಮ್ಮ ಉದ್ದೇಶವಾಗಿದೆ.
2024-25 ರ ವೇಳೆಗೆ ಭಾರತ 250-300 ಯುಎಸ್ಡಿ ಬಿಲಿಯನ್ ಮೊತ್ತದ ಎಲೆಕ್ಟ್ರಾನಿಕ್ ಉತ್ಪಾದನೆಯನ್ನು ಹೊಂದುವ ಉದ್ದೇಶವನ್ನು ಇಟ್ಟುಕೊಂಡಿದ್ದೇವೆ ಎಂದು ತಿಳಿಸಿದರು.
ಜಾಗತಿಕ ಮಾರುಕಟ್ಟೆಗೆ ಅತ್ಯಂತ ವಿಶ್ವಾಸಾರ್ಹವಾದ ಉತ್ಪನ್ನಗಳು ಮತ್ತು ಸೇವೆಗಳನ್ನು ಪ್ರಮುಖ ಪೂರೈಕೆದಾರ ದೇಶವಾಗಲಿದೆ. ಈ ದಿಸೆಯಲ್ಲಿ ಕಾರ್ಯೋನ್ಮುಖರಾಗಿದ್ದೇವೆ ಮತ್ತು ನಮಗೆ ಉತ್ತಮ ಅವಕಾಶ ಲಭ್ಯವಾಗಲಿದೆ. ಡಿಜಿಟಲ್ ಆರ್ಥಿಕತೆ ಮತ್ತು ಇದಕ್ಕೆ ಸಂಬಂಧಿಸಿದ ಕ್ಷೇತ್ರಗಳಿಗೆ ಇದು ವೈ2ಕೆ ಕ್ಷಣವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಇಕ್ವಿಪ್ಮೆಂಟ್ ಮತ್ತು ಸಿಸ್ಟಂನಲ್ಲಿ ವಿಸ್ತರಣೆ ಯೋಜನೆಗಳನ್ನು ರೂಪಿಸುತ್ತಿದ್ದೇವೆ. ಇದಲ್ಲದೇ, ಆಟೋಮೋಟಿವ್ ಮತ್ತು ಮೆಡಿಕಲ್ ಇಕ್ವಿಪ್ಮೆಂಟ್ನತ್ತಲೂ ಗಮನಹರಿಸುತ್ತಿದ್ದೇವೆ. ಭಾರತವನ್ನು ಎಲೆಕ್ಟ್ರಾನಿಕ್ ಶಕ್ತಿಯನ್ನಾಗಿ ರೂಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ನಾವು ಹೆಜ್ಜೆ ಇಟ್ಟಿದ್ದೇವೆ ಎಂದು ರಾಜೀವ್ ಚಂದ್ರಶೇಖರ್ ತಿಳಿಸಿದರು.
ನಾವು ಪ್ರಮುಖ ಎಲೆಕ್ಟ್ರಾನಿಕ್ ಉತ್ಪಾದಕ ದೇಶವಾಗುವ ದೂರದೃಷ್ಟಿಯನ್ನು ಇಟ್ಟುಕೊಂಡಿದ್ದೇವೆ. ಇದು ಇತರೆ ದೇಶಗಳಿಗಿಂತ ಭಿನ್ನವಾಗಿರುತ್ತದೆ. ಇದು ಕೇವಲ ಪ್ರಚಾರಕ್ಕಾಗಿ ರೂಪಿಸಿರುವ ಉಪಕ್ರಮವಲ್ಲ. ಇದು ಸೆಮಿಕಂಡಕ್ಟರ್ ಮತ್ತು ಬಿಡಿಭಾಗಗಳ ಕ್ಷೇತ್ರದಲ್ಲಿ ಆಳವಾದ, ಸುಸ್ಥಿರವಾದ ಮತ್ತು ಸ್ಪರ್ಧಾತ್ಮಕತೆಯನ್ನು ಪಡೆಯಲಿದೆ ಎಂದರು.
ಪಿಎಎಫ್ಐನ ವ್ಯವಸ್ಥಾಪನಾ ಸಮಿತಿ ಸದಸ್ಯ ಮತ್ತು ಇಂಡಿಯನ್ ಪಬ್ಲಿಕ್ ಪಾಲಿಸಿ ಉಪಾಧ್ಯಕ್ಷ ಹಾಗೂ ಅಮೆಜಾನ್ ಇಂಡಿಯಾದ ಚೇತನ್ ಕೃಷ್ಣಸ್ವಾಮಿ ಅವರು ಅತಿಥಿಗಳನ್ನು ಸ್ವಾಗತಿಸಿದರೆ, ಟ್ವಿಟರ್ ಇಂಡಿಯಾದ ಸೀನಿಯರ್ ಮ್ಯಾನೇಜರ್, ಪಬ್ಲಿಕ್ ಪಾಲಿಸಿ ಆಂಡ್ ಫಿಲಾಂಥ್ರಪಿ ಶುಗುಫ್ತಾ ಕಮ್ರಾನ್ ಅವರು ಸಮಾರೋಪ ನುಡಿಗಳನ್ನಾಡಿದರು.
ಈ ಕಾರ್ಯಕ್ರಮವನ್ನು ಪಿಎಎಫ್ಐನ ಉಪಾಧ್ಯಕ್ಷ ಮತ್ತು ಆಪಲ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ವಿರಾಟ್ ಭಾಟಿಯಾ ಅವರು ನಡೆಸಿಕೊಟ್ಟರು.
Recommended Video
-
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications