ಬಿಬಿಎಂಪಿ ಚುನಾವಣೆಗಾಗಿ ಬಿಗ್ ಬೆಂಗಳೂರು ಫೈಟ್
ಬೆಂಗಳೂರು, ಜು.1: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ನಗರದ 198 ವಾರ್ಡ್ಗಳಲ್ಲಿ ಒಂದೇ ಹಂತದಲ್ಲಿ ಜುಲೈ 28ರಂದು ಮತದಾನ ನಡೆಯಲಿದೆ. ಅದರೆ, ಭ್ರಷ್ಟಾಚಾರ ಅಳಿಸಿ, ಸುಸ್ಥಿರ ಬೆಂಗಳೂರಿಗಾಗಿ ಸಂಸದ ರಾಜೀವ್ ಚಂದ್ರಶೇಖರ್ ಅವರು ವಿಶಿಷ್ಟ ಜಾಗೃತಿ ಅಭಿಯಾನ ಆರಂಭಿಸಿದ್ದಾರೆ.
ನಮ್ಮ ಬೆಂಗಳೂರು ಪ್ರತಿಷ್ಠಾನದ ಮುಖ್ಯಸ್ಥರೂ ಆಗಿರುವ ರಾಜ್ಯ ಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರು ಬಿಬಿಎಂಪಿ ಚುನಾವಣೆಗೂ ಮುನ್ನ ಸ್ವಯಂ ಪ್ರೇರಿತರಾಗಿ ವ್ಯವಸ್ಥೆಯಲ್ಲಿನ ಭ್ರಷ್ಟತೆಯನ್ನು ತೊಡೆದು ಹಾಕಲು ಸ್ವಯಂಸೇವಕರನ್ನು ಆಹ್ವಾನಿಸಿದ್ದಾರೆ.
ಆಸಕ್ತರು 'ಬಿಗ್ ಬೆಂಗಳೂರು ಫೈಟ್' ವೆಬ್ ಸೈಟ್ ಗೆ ಹೋಗಿ ತಮ್ಮ ಹೆಸರು, ಇಮೇಲ್ ವಿಳಾಸ ಹಾಗೂ ಫೋನ್ ನಂಬರ್ ನೀಡಿ ನೋಂದಾಯಿಸಿಕೊಳ್ಳಬಹುದು. [ಅಪ್ರಾಪ್ತರ ಕೈಗೆ ಎಣ್ಣೆ ಗ್ಲಾಸ್! ವಿರುದ್ಧ ರಾಜೀವ್ ವಿನೂತನ ಜಾಗೃತಿ]

ಅಭಿಯಾನ ಏಕೆ?: ಜನ ಜಾಗೃತಿ ಅಭಿಯಾನ ಕೈಗೊಳ್ಳುವುದರಲ್ಲಿ ಸಿದ್ದ ಹಸ್ತರಾಗಿರುವ ರಾಜೀವ್ ಅವರು ಇತ್ತೀಚೆಗೆ ಬಾರ್ ಗಳಲ್ಲಿ ಅಪ್ರಾಪ್ತ ಬಾಲಕರಿಗೆ ಮದ್ಯ ಪೂರೈಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಟ್ವಿಟ್ಟರ್ ನಲ್ಲಿ ಜಾಗೃತಿ ಮೂಡಿಸಿದ್ದರು. [ಬಿಬಿಎಂಪಿ ಚುನಾವಣೆ ವೇಳಾಪಟ್ಟಿ]
ಈಗ ಬಿಬಿಎಂಪಿ ಚುನಾವಣೆಗೂ ಮುನ್ನ ಚುನಾವಣೆ ಮಹತ್ವ, ಮತದಾನ, ಭ್ರಷ್ಟಾಚಾರ ನಿರ್ಮೂಲನೆ, ನಿಮ್ಮ ಪರಿಸರದ ಬಗ್ಗೆ ಅರಿವು ಹೀಗೆ ಅನೇಕ ವಿಷಯಗಳ ಮೇಲೆ ಜನ ಜಾಗೃತಿ ಮೂಡಿಸುತ್ತಿದ್ದಾರೆ. [ಬಿಬಿಎಂಪಿ ಚುನಾವಣೆಗೆ ತಯಾರಿ ಆರಂಭಿಸಿದ ಎಎಪಿ]
ಆಡಳಿತದಲ್ಲಿ ಪಾರದರ್ಶಕತೆ, ಭ್ರಷ್ಟಾಚಾರ ರಹಿತ ಆಡಳಿತ ನಿಮಗೆ ಸಿಗಬೇಕಾದರೆ ಈ ಅಭಿಯಾನದಲ್ಲಿ ಪಾಲ್ಗೊಳ್ಳಿ, ಅಕ್ರಮ ಸಕ್ರಮ, ಭೂ ಒತ್ತುವರಿ, ಆಸ್ತಿ ತೆರಿಗೆ, ಮೂಲ ಸೌಕರ್ಯ ಕೊರತೆ ಹೀಗೆ ಅನೇಕ ಸಮಸ್ಯೆಗಳ ಬಗ್ಗೆ ಎಲ್ಲರಿಗೂ ಮೂಡಬಹುದಾದ ಸಹಜ ಪ್ರಶ್ನೆಗಳಿಗೆ ಉತ್ತರ ಕೇಳುವ ಸಮಯ ಈಗ ಬಂದಿದೆ ಎಂದು ರಾಜೀವ್ ಹೇಳಿದ್ದಾರೆ. ಆಸಕ್ತರು ಈ ಅಭಿಯಾನದಲ್ಲಿ ಪಾಲ್ಗೊಳ್ಳಲು ಈ ಲಿಂಕ್ ಕ್ಲಿಕ್ ಮಾಡಿ
ಅವಿಭಜಿತ ಬಿಬಿಎಂಪಿಯ 198 ವಾರ್ಡ್ಗಳಿಗೆ ಒಂದೇ ಹಂತದಲ್ಲಿ ಜುಲೈ 28ರ ಮಂಗಳವಾರ ಮತದಾನ ನಡೆಯಲಿದ್ದು, ಜು.31ರ ಶುಕ್ರವಾರ ಫಲಿತಾಂಶ ಪ್ರಕಟಗೊಳ್ಳಲಿದೆ. (ಒನ್ ಇಂಡಿಯಾ ಸುದ್ದಿ)
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು










Click it and Unblock the Notifications