ಕೊಡಗಿನ ಜನರ ಪುನರ್ವಸತಿಗೆ 10 ಲಕ್ಷ ನೀಡಿದ ರಾಜೀವ್ ಚಂದ್ರಶೇಖರ್
Recommended Video

ಬೆಂಗಳೂರು, ಆಗಸ್ಟ್ 21: ಪ್ರವಾಹ ಪೀಡಿತ ಕೊಡಗಿಗೆ ಬಿಜೆಪಿಯ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರು 10 ಲಕ್ಷ ರೂಪಾಯಿ ಧನ ಸಹಾಯ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು, ತಮ್ಮ, ಹಲವು ಉದ್ಯಮಪತಿ ಗೆಳೆಯರನ್ನು ಸಂಪರ್ಕಿಸಿ ಕೊಡಗು ಕಟ್ಟಲು ಸಹಾಯ ನೀಡುವಂತೆ ಅವರು ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ.
'ಈಗಾಗಲೇ ನಾನು ಹಲವು ಎನ್ಜಿಓ ಮತ್ತು ಸಾರ್ವಜನಿಕ ಸಂಘಗಳ ಜೊತೆಯಾಗಿ ಕೊಡಗಿನ ಜನತೆಯ ಸಹಾಯಕ್ಕಾಗಿ ದುಡಿಯುತಿದ್ದೇನೆ' ಎಂದು ಮಾಹಿತಿ ನೀಡಿದ್ದಾರೆ.

ಕೊಡಗಿನ ಜನರಿಗೆ ಪುನರ್ವಸತಿ ಕಲ್ಪಿಸಬೇಕಿರುವುದು ಮೊದಲ ಆದ್ಯತೆ ಆಗಬೇಕು ಎಂದು ಹೇಳಿರುವ ಅವರು, ಈ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯ ಮಾಡುವುದಾಗಿ ಭರವಸೆ ನೀಡಿದ್ದಾರೆ. ತಮ್ಮ ಸಂಸದರ ನಿಧಿಯನ್ನು ಕೊಡಗಿನ ಪುನರ್ವಸತಿಗೆ ಬಳಸುವುದಾಗಿಯೂ ಅವರು ಹೇಳಿದ್ದಾರೆ.
ಕೊಡಗಿಗೆ ಹರಿದು ಬರುತ್ತಿರುವ ಸಹಾಯದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿರುವ ರಾಜೀವ್ ಚಂದ್ರಶೇಖರ್ ಅವರು, ಕೊಡಗಿನ ನೋವಿಗೆ ಕರ್ನಾಟಕದ ಜನ ಸ್ಪಂದಿಸಿರುವ ರೀತಿ ಭಾವುಕನನ್ನಾಗಿಸಿದೆ ಎಂದಿದ್ದಾರೆ. ಅಲ್ಲದೆ ತಮ್ಮ ಒಡೆತನದ ಸುದ್ದಿ ಪತ್ರಕೆ ಮತ್ತು ಮಾಧ್ಯಮ ಸಂಸ್ಥೆ ಈಗಾಗಲೇ 32 ಲಾರಿ ಲೋಡಿನ ಪರಿಹಾರ ಸಾಮಗ್ರಿಗಳನ್ನು ಕೊಡಗಿಗೆ ತಲುಪಿಸಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications