ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗಿನ ಜನರ ಪುನರ್ವಸತಿಗೆ 10 ಲಕ್ಷ ನೀಡಿದ ರಾಜೀವ್ ಚಂದ್ರಶೇಖರ್

By Manjunatha
|
Google Oneindia Kannada News

Recommended Video

Kodagu floods: Bangalore drone start-up helps locate stranded people

ಬೆಂಗಳೂರು, ಆಗಸ್ಟ್ 21: ಪ್ರವಾಹ ಪೀಡಿತ ಕೊಡಗಿಗೆ ಬಿಜೆಪಿಯ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರು 10 ಲಕ್ಷ ರೂಪಾಯಿ ಧನ ಸಹಾಯ ನೀಡಿದ್ದಾರೆ.

ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ನೆರವಾಗುವುದು ಹೇಗೆ?ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ನೆರವಾಗುವುದು ಹೇಗೆ?

ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು, ತಮ್ಮ, ಹಲವು ಉದ್ಯಮಪತಿ ಗೆಳೆಯರನ್ನು ಸಂಪರ್ಕಿಸಿ ಕೊಡಗು ಕಟ್ಟಲು ಸಹಾಯ ನೀಡುವಂತೆ ಅವರು ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ.

ನಗರದ ಅಭಿವೃದ್ಧಿಗೆ ಯುನೈಟೆಡ್ ಬೆಂಗಳೂರಿನಿಂದ 'ಬೆಂಗಳೂರು ಡಿಮ್ಯಾಂಡ್ಸ್' ಚಳವಳಿನಗರದ ಅಭಿವೃದ್ಧಿಗೆ ಯುನೈಟೆಡ್ ಬೆಂಗಳೂರಿನಿಂದ 'ಬೆಂಗಳೂರು ಡಿಮ್ಯಾಂಡ್ಸ್' ಚಳವಳಿ

'ಈಗಾಗಲೇ ನಾನು ಹಲವು ಎನ್‌ಜಿಓ ಮತ್ತು ಸಾರ್ವಜನಿಕ ಸಂಘಗಳ ಜೊತೆಯಾಗಿ ಕೊಡಗಿನ ಜನತೆಯ ಸಹಾಯಕ್ಕಾಗಿ ದುಡಿಯುತಿದ್ದೇನೆ' ಎಂದು ಮಾಹಿತಿ ನೀಡಿದ್ದಾರೆ.

Rajeev Chandrashekhar donate 10 lakh rupees to Kodagu flood victims

ಕೊಡಗಿನ ಜನರಿಗೆ ಪುನರ್ವಸತಿ ಕಲ್ಪಿಸಬೇಕಿರುವುದು ಮೊದಲ ಆದ್ಯತೆ ಆಗಬೇಕು ಎಂದು ಹೇಳಿರುವ ಅವರು, ಈ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯ ಮಾಡುವುದಾಗಿ ಭರವಸೆ ನೀಡಿದ್ದಾರೆ. ತಮ್ಮ ಸಂಸದರ ನಿಧಿಯನ್ನು ಕೊಡಗಿನ ಪುನರ್ವಸತಿಗೆ ಬಳಸುವುದಾಗಿಯೂ ಅವರು ಹೇಳಿದ್ದಾರೆ.

15 ಟ್ರಕ್ ಗಳಲ್ಲಿ ಕೊಡಗು ಸಂತ್ರಸ್ತರಿಗೆ ಅಗತ್ಯ ಸಾಮಗ್ರಿ ಕಳಿಸಿದ ಬಿಜೆಪಿ15 ಟ್ರಕ್ ಗಳಲ್ಲಿ ಕೊಡಗು ಸಂತ್ರಸ್ತರಿಗೆ ಅಗತ್ಯ ಸಾಮಗ್ರಿ ಕಳಿಸಿದ ಬಿಜೆಪಿ

ಕೊಡಗಿಗೆ ಹರಿದು ಬರುತ್ತಿರುವ ಸಹಾಯದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿರುವ ರಾಜೀವ್ ಚಂದ್ರಶೇಖರ್ ಅವರು, ಕೊಡಗಿನ ನೋವಿಗೆ ಕರ್ನಾಟಕದ ಜನ ಸ್ಪಂದಿಸಿರುವ ರೀತಿ ಭಾವುಕನನ್ನಾಗಿಸಿದೆ ಎಂದಿದ್ದಾರೆ. ಅಲ್ಲದೆ ತಮ್ಮ ಒಡೆತನದ ಸುದ್ದಿ ಪತ್ರಕೆ ಮತ್ತು ಮಾಧ್ಯಮ ಸಂಸ್ಥೆ ಈಗಾಗಲೇ 32 ಲಾರಿ ಲೋಡಿನ ಪರಿಹಾರ ಸಾಮಗ್ರಿಗಳನ್ನು ಕೊಡಗಿಗೆ ತಲುಪಿಸಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.

English summary
Rajya Sabha MP Rajeev Chandrashekhar donate 10 lakh rupees to help Kodagu flood victims. He says, I have already reached out to many corporate from across India to help rebuild Kodagu.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X