ರಮ್ಯಾ ಟ್ವೀಟ್ ಗೆ ಮೌನ ಮುರಿದು ಉತ್ತರಿಸಿದ ರಾಜೀವ್ ಚಂದ್ರಶೇಖರ್
Recommended Video

ಬೆಂಗಳೂರು, ಫೆಬ್ರವರಿ 07: ಕರ್ನಾಟಕ ವಿಧಾನಸಭೆ ಚುನಾವಣೆ ಇನ್ನು ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಈಗಾಗಲೇ ಕರ್ನಾಟಕದಲ್ಲಿ ಸಾಕಷ್ಟು ಕೆಸರೆರಚಾಟ ಆರಂಭವಾಗಿದೆ.
ಪ್ರಧಾನಿ ಮೋದಿಯವರ ಬೆಂಗಳೂರು ಭೇಟಿಯನ್ನು ಟೀಕಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಸಭಾ ಸದಸ್ಯ ರಾಜೀವ ಚಂದ್ರಶೇಖರ್ ಸಾಲು ಸಾಲು ಟ್ವೀಟ್ ಗಳನ್ನು ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಟ್ವೀಟ್ ಮಾಡಿದ್ದ ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಮುಖ್ಯಸ್ಥೆ ರಮ್ಯಾ, "ಇಲ್ಲಿ ಸಂಪೂರ್ಣ ಪಟ್ಟಿ ಇದೆ. ಇದಕ್ಕೆ ನಿಮ್ಮಿಂದ ಉತ್ತರ ಬೇಕಾಗಿದೆ," ಎಂದು ಟ್ಟೀಟ್ ಮಾಡಿದ್ದರು.
ಇದರಲ್ಲಿ ಅವರು ನಾಲ್ಕು ಅಂಶಗಳನ್ನು ಉಲ್ಲೇಖಿಸಿದ್ದರು. "1. ಕೆಎಂಎಫ್ ಗೆ ಕೋರಮಂಗಲದಲ್ಲಿ ಹಂಚಿಕೆ ಮಾಡಿದ ಭೂಮಿ 2. ಹಾಸನದಲ್ಲಿ ಹಂಚಿಕೆ ಮಾಡಿದ ಎಸ್ಇಝಡ್ ಜಮೀನು 3. ಬೆಂಗಳೂರು ವಿಮಾನ ನಿಲ್ದಾಣ ಸಮೀಪ ಹಂಚಿಕೆಯಾದ 75 ಎಕರೆ ಭೂಮಿ 4. ದಾಬಸ್ ಪೇಟೆಯಲ್ಲಿ ಘಟಕ ಸ್ಥಾಪಿಸಲು ಕೆಐಎಡಿಬಿಯಿಂದ ವಶಕ್ಕೆ ಪಡೆದುಕೊಂಡ ಜಾಗ" ಎಂದಜು ಪಟ್ಟಿಗಳನ್ನು ಉಲ್ಲೇಖಿಸಿ ರಾಜೀವ್ ಚಂದ್ರಶೇಖರ್ ಅವರಿಗೆ ಉತ್ತರಿಸುವಂಥ ಪಂಥಾಹ್ವಾನ ಮಾಡಿದ್ದರು.
|
ಖಡಕ್ ಉತ್ತರ ನೀಡಿದ ರಾಜೀವ್ ಚಂದ್ರಶೇಖರ್
ಕೆಲ ಕಾಲ ಮೌನವಾಗಿಯೇ ಇದ್ದ ರಾಜೀವ್ ಚಂದ್ರಶೇಖರ್ ಇದೀಗ ಟ್ವೀಟ್ ಮೂಲಕ ಉತ್ತರಿಸಿದ್ದು, "ಸಿದ್ದರಾಮಯ್ಯನವರೇ, ನಿಮ್ಮಿಂದ ಏನೆಲ್ಲ ಮಾಡಲಾಗುತ್ತದೆಯೋ ಎಲ್ಲವನ್ನೂ ಮಾಡಿ. ನೀವು ಏನೇ ಮಾಡಿದರೂ ಫಲಿತಾಂಶ ಒಂದೇ. ನೀವು ನಮ್ಮ ಬೆಂಗಳೂರಿನಿಂದ ಮತ್ತು ಕರ್ನಾಟಕ ಸರ್ಕಾರದಿಂದ ನಿರ್ಗಮನದೆಡೆಗೆ ಸಾಗುತ್ತೀರಾ ಅಷ್ಟೇ" ಎಂದಿದ್ದಾರೆ. ಅಂದರೆ ಸಿದ್ದರಾಮಯ್ಯ ಅವರನ್ನು ಯಾರೇ ಸಮರ್ಥಿಸಿಕೊಂಡರೂ ಅಷ್ಟೇ, ಈ ಚುನಾವಣೆಯಲ್ಲಿ ಅವರಿಗೆ ಸೋಲು ಕಟ್ಟಿಟ್ಟಬುತ್ತಿಯೇ ಎಂದು ಪರೋಕ್ಷವಾಗಿ ರಮ್ಯಾ ಅವರನ್ನೂ ಟೀಕಿಸಿದ್ದಾರೆ.
|
ವಿವಾದ ಸೃಷ್ಟಿಸಿದ್ದ ಸಿದ್ದರಾಮಯ್ಯ ಟ್ವೀಟ್
ಫೆ.4 ರ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಲೆಳೆದಿದ್ದರು. 'ಬಂಡವಾಳ ಹೂಡಿಕೆ ಮತ್ತು ಪ್ರಗತಿಯಲ್ಲಿ ನಂ.1 ಸ್ಥಾನದಲ್ಲಿರುವ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಸ್ವಾಗತ' ಎಂಬ ಸಿದ್ದರಾಮಯ್ಯನವರ ಟ್ವೀಟ್ ವಿವಾದ ಸೃಷ್ಟಿಸಿತ್ತು. ಇದಕ್ಕೆ ಹಲವರು ಖಾರವಾಗಿ ಪ್ರತಿಕ್ರಿಯೆ ನೀಡಿದ್ದರು.
|
ಸಿದ್ದರಾಮಯ್ಯ ದುರಾಡಳಿತಕ್ಕೆ ಅಂತ್ಯ ಬೇಕಿದೆ
ಸನ್ಮಾನ್ಯ ನರೇಂದ್ರ ಮೋದಿಯವರೇ - ನಮ್ಮ ಬೆಂಗಳೂರಿಗೆ ಆಗಮಿಸುತ್ತಿರುವ ನಿಮಗೆ ನನ್ನ ಆದರದ ಸ್ವಾಗತ - 450 ವರ್ಷ ಇತಿಹಾಸ ಹೊಂದಿರುವ ನಮ್ಮೆಲ್ಲರ ಹಮ್ಮೆಯ ಬೆಂಗಳೂರನ್ನು ಲೂಟಿ ಮಾಡುತ್ತಿರುವ ಸಿದ್ದರಾಮಯ್ಯನವರ ದುರಾಡಳಿತದ ಅಂತ್ಯಕ್ಕೆ ನಿಮ್ಮ ಭೇಟಿ ನಾಂದಿ ಹಾಡಲಿದೆ ಎಂದು ರಾಜೀವ್ ಚಂದ್ರಶೇಖರ್
|
ರಮ್ಯಾ ಅವರಿಗೂ ಟಾಂಗ್ ನೀಡಿದ್ದ ರಾಜೀವ್ ಚಂದ್ರಶೇಖರ್
ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಭೇಟಿಯ ನಂತರ 'ಪ್ರಧಾನಿ ನಶೆಯಲ್ಲಿ ಮಾತನಾಡಿದ್ದಾರೆ' ಎಂಬ ಬಾಲಿಶ ಹೇಳಿಕೆ ನೀಡಿದ್ದ ರಮ್ಯಾ ಅವರನ್ನೂ ರಾಜೀವ್ ಚಂದ್ರಶೇಖರ್ ತರಾಟೆಗೆ ತೆಗೆದುಕೊಂಡಿದ್ದರು. ಇಂಥ ಬಾಲಿಶ ನಡೆಯಿಂದ ಹಿಡಿದು, ವಯಸ್ಕರ ಭ್ರಷ್ಟಾಚಾರದವರೆಗೆ ಸಿದ್ದರಾಮಯ್ಯನವರ ದೂರದೃಷ್ಟಿ ವಿಸ್ತಾರವಾಗಿದೆ. ಆದರೆ ಜನರು ಸಿದ್ದರಾಮಯ್ಯ ಅವರ ದೂರದೃಷ್ಟಿಗೆ ಸದ್ಯದಲ್ಲೇ ಬೀಳ್ಕೊಡುಗೆ ನೀಡುತ್ತಾರೆ ಎಂದು ರಾಜೀವ್ ಚಂದ್ರಶೇಖರ್ ಟ್ವೀಟ್ ಮಾಡಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications