ಬೆಂಗಳೂರು ಉತ್ತರ : ಯುವ ಕಾಂಗ್ರೆಸ್ ಸದಸ್ಯರಿಗೆ ಸನ್ಮಾನ
ಬೆಂಗಳೂರು, ಜ.23 : ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಕಾರ್ಯಕರ್ತರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿದ ಯುವ ಕಾಂಗ್ರೆಸ್ ಸದಸ್ಯರನ್ನು ಎಐಸಿಸಿ ಮಾಧ್ಯಮ ವಿಭಾಗದ ಸಂಪನ್ಮೂಲ ವ್ಯಕ್ತಿ ಪ್ರೊ.ಎಂ.ವಿ.ರಾಜೀವ್ ಗೌಡ ಬುಧವಾರ ಸನ್ಮಾನಿಸಿದರು. ಮುಂದಿನ ಲೋಕಸಭೆ ಚುಣಾವಣೆಗೆ ಸಿದ್ಧರಾಗಿ ಎಂದು ಈ ಸಮಯದಲ್ಲಿ ಯುವ ಕಾಂಗ್ರೆಸ್ ಸದಸ್ಯರಿಗೆ ಕರೆ ನೀಡಲಾಯಿತು.
ಬುಧವಾರ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಅತಿ ಹೆಚ್ಚು ಕಾರ್ಯಕರ್ತರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿದ ಯುವ ಕಾಂಗ್ರೆಸ್ ಸದಸ್ಯರನ್ನು ಸನ್ಮಾನಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕೃಷಿ ಸಚಿವ ಕೃಷ್ಣ ಭೈರೇಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಅರ್ಷದ್ ರಿಜ್ವಾನ್, ಬಿಬಿಎಂಪಿ ಉಪ ಮೇಯರ್ ಇಂದಿರಾ ಮುಂತಾದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಚಿತ್ತಾಪುರ ಶಾಸಕ ಪ್ರಿಯಾಂಕ ಖರ್ಗೆ, ಮನೆ-ಮನೆ ಪ್ರಚಾರ ನಡೆಸುವ ಕುರಿತು ಯುವ ಕಾಂಗ್ರೆಸ್ ಸದ್ಯರಿಗೆ ಸಲಹೆಗಳನ್ನು ನೀಡಿದರು. ಇಂದಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸಿಕೊಂಡು ಪ್ರಚಾರ ನಡೆಸುವ ಅಗತ್ಯವಿದೆ ಎಂದು ಹೇಳಿದರು. ಪ್ರೊ.ರಾಜೀವ್ ಗೌಡ ಅವರು, ಯುವ ಕಾಂಗ್ರೆಸ್ ಸದಸ್ಯರಿಗೆ ನಾಯಕತ್ವದ ಕುರಿತು ತರಬೇತಿ ನೀಡಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದರು.
ಹೆಬ್ಬಾಳ ಕ್ಷೇತ್ರದ ರೆಹಮಾನ್ ಪರೀಫ್, ಕೆಪಿಸಿಸಿ ಕಾರ್ಮಿಕ ವಿಭಾಗದ ಅಧ್ಯಕ್ಷ ಪ್ರಕಾಶಂ, ಮಾಜಿ ಸಚಿವ ನಾಸೀರ್ ಅಹಮದ್, ಕರ್ನಾಟಕ ಯುವ ಕಾಂಗ್ರೆಸ್ ಉಪಾಧ್ಯಕ್ಷ ವರುಣ್ ಪ್ರಸನ್ನ ಕುಮಾರ್ ಸೇರಿದಂತೆ 150ಕ್ಕೂ ಅಧಿಕ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಅಂದಹಾಗೆ ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಯಶವಂತಪುರ, ಮಹಾಲಕ್ಷ್ಮೀ ಲೇ ಔಟ್, ಕೆ.ಆರ್.ಪುರಂ, ಹೆಬ್ಬಾಳ, ಬ್ಯಾಟರಾಯನಪುರ, ಮಲ್ಲೇಶ್ವರಂ, ಪುಲಕೇಶಿ ನಗರ, ದಾಸರಹಳ್ಳಿ ವಿಧಾನಸಭಾ ಕ್ಷೇತ್ರಗಳು ಒಳಪಡುತ್ತದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications