ಬೆಂಗಳೂರು ಕರಡು ಮತಪಟ್ಟಿ ಹಾಗೂ ಕಾಂಗ್ರೆಸ್ನ ಮತಚೋರಿಯ ಸುಳ್ಳುಗಳ ಅನಾವರಣ: ಲೇಖಕ ರಾಜೀವ ಹೆಗಡೆ ಬರಹ
ಬೆಂಗಳೂರಿನ ಸ್ಥಳೀಯ ಸಂಸ್ಥೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಡುಗಡೆಯಾಗಿರುವ ಕರಡು ಮತಪಟ್ಟಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮತ್ತೊಂದೆಡೆ ಸಾಮಾನ್ಯ ಮತದಾರರ ಹೆಸರುಗಳೇ ಪಟ್ಟಿಯಿಂದ ಮಾಯವಾಗಿದೆ ಎಂದು ಆರೋಪಿಸಿರುವ ಲೇಖಕ ರಾಜೀವ ಹೆಗಡೆ, ಕರ್ನಾಟಕ ರಾಜ್ಯ ಚುನಾವಣೆ ಆಯೋಗ ಮಾಡಿರುವ 'ಮತಚೋರಿ'ಯನ್ನು ನಾನು ಅನಾವರಣ ಮಾಡುತ್ತೇನೆ ಎಂದು ತಮ್ಮ ಫೇಸ್ಬುಕ್ ಪುಟದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಅವರ ಬರಹ ಇಲ್ಲಿದೆ.
'ಹಲವು ವರ್ಷಗಳ ದರೋಡೆ ಹಾಗೂ ಅಧಿಕಾರಿಗಳ ಉತ್ಸವದ ಬಳಿಕ ಬಿಬಿಎಂಪಿಯನ್ನು ಜಿಬಿಎ ಎನ್ನುವ ದೊಡ್ಡ ನಾಟಕ ಮಂಡಳಿ ಮಾಡಿ ಚುನಾವಣೆಗೆ ತಯಾರಿ ನಡೆಸಿರುವುದು ಎಲ್ಲರಿಗೂ ತಿಳಿದ ವಿಚಾರವಾಗಿದೆ. ಆದರೆ ಈಗ ಶನಿವಾರದಂದು ರಾಜ್ಯ ಚುನಾವಣೆ ಆಯೋಗ ಪ್ರಕಟಿಸಿರುವ ಕರಡು ಮತಪಟ್ಟಿಯು ಕಾಂಗ್ರೆಸ್ನ ನಾಟಕ ಹಾಗೂ ಸುಳ್ಳುಗಳನ್ನು ಅನಾವರಣ ಮಾಡಿದೆ. ಹಾಗೆಯ ಮತಚೋರಿ ಎನ್ನುವುದು ರಾಹುಲ್ ಗಾಂಧಿ ಪಟಾಲಂನ ಸುಳ್ಳುಗಳ ಸರಣಿಯ ಮುಂದುವರಿದ ಭಾಗ ಎನ್ನುವುದು ಖಾತ್ರಿಯಾಗುತ್ತದೆ. ಆದರೀಗ ಕರ್ನಾಟಕ ರಾಜ್ಯ ಚುನಾವಣೆ ಆಯೋಗ ಮಾಡಿರುವ 'ಮತಚೋರಿ'ಯನ್ನು ನಾನು ಅನಾವರಣ ಮಾಡುತ್ತೇನೆ'.

'ಶನಿವಾರ ಸಂಜೆ ಮಲಗುವ ವೇಳೆಗೆ ಜಿಬಿಎ ಕರಡು ಮತಪಟ್ಟಿ ಬಿಡುಗಡೆ ಎನ್ನುವ ನೋಟಿಫಿಕೇಷನ್ ನನ್ನ ಮೊಬೈಲ್ಗೆ ಬಂತು. ಕೂಡಲೇ ಜಿಬಿಎ ವೆಬ್ಸೈಟ್ ಹೋಗಿ ನನ್ನ ಹೆಸರು ಹುಡುಕುವ ಪ್ರಯತ್ನ ಮಾಡಿದೆ. ಸತತ ಅರ್ಧಗಂಟೆಯ ಹರಸಾಹಸದ ಬಳಿಕ ಕೊನೆಗೂ ನಮ್ಮ ಬಡಾವಣೆಯಲ್ಲಿನ ಮತಪಟ್ಟಿಯಲ್ಲಿ ಹೆಸರು ಕಾಣಿಸಿತು. ಬಳಿಕ ನನ್ನ ಹೆಂಡತಿಯ ಹೆಸರನ್ನು ನಾಲ್ಕು ಬಾರಿ ಹುಡುಕಿದರೂ ಸಿಗಲಿಲ್ಲ. ಮತ್ತೆ ಬೆಳಗ್ಗೆ ಎದ್ದು ಲ್ಯಾಪ್ಟಾಪ್ನಲ್ಲಿ ಹುಡುಕಿದೆ. ಮತಪಟ್ಟಿಯಿಂದ ಆಕೆಯ ಹೆಸರು ಮಾಯವಾಗಿತ್ತು. ಇದಾದ ಬಳಿಕ ಆಕೆಯ ಹೆಸರನ್ನು ಕೇಂದ್ರ ಚುನಾವಣೆ ಆಯೋಗದ ವೆಬ್ಸೈಟ್ನಲ್ಲಿ ಹುಡುಕಿದೆ. ಅಲ್ಲಿಯ ಆಕೆಯ ಮತಪತ್ರದ ಎಲ್ಲ ವಿವರ ಹಾಗೂ ಮತಕೇಂದ್ರದ ಮಾಹಿತಿ ಕೂಡ ಇದೆ. ಅದರ ಜೊತೆಗೆ ಸಿರೀಯಲ್ ನಂಬರ್ ಕೂಡ ಲಭ್ಯವಿದೆ. ಬಳಿಕ ನನ್ನ ಮಾಹಿತಿಯನ್ನು ಪರಿಶೀಲಿಸಿದಾಗ ಒಂದಿಷ್ಟು ಸಮಸ್ಯೆ ಕಾಣಿಸಿತು. ನನ್ನ ಸಿರೀಯಲ್ ನಂಬರ್, ಮತಕೇಂದ್ರದ ಸಂಖ್ಯೆ ಬದಲಾಗಿತ್ತು. ಆಗ ರಾಜ್ಯ ಚುನಾವಣೆ ಆಯೋಗ ಹೀಗೆ ನಾಟಕವಾಡಿರಬಹುದು ಎನ್ನುವ ಸಂಶಯ ನನಗೆ ಮೂಡಲಾರಂಭಿಸಿತು'.
ನಾನು ಕಳೆದ ಲೋಕಸಭೆ ಚುನಾವಣೆಯ ವೇಳೆಯಲ್ಲಿ ನನ್ನ ಹೆಂಡತಿಯ ಹೆಸರನ್ನು ಸಾಗರ ವಿಧಾನಸಭೆ ಕ್ಷೇತ್ರದ ಮತಪಟ್ಟಿಯಿಂದ ಬೆಂಗಳೂರಿನ ಹಾಲಿ ವಿಳಾಸಕ್ಕೆ ವರ್ಗಾಯಿಸಿದ್ದೆ. ನಿಯಮದಂತೆ ಅದು ವರ್ಗಾವಣೆಯಾಗಿ ಸ್ಥಳೀಯ ಮತಪಟ್ಟಿಯಲ್ಲಿ ಕಾಣಿಸಿಕೊಂಡಿತ್ತು. ಹಾಗೆಯೇ ಆಕೆಯು ಕಳೆದ ಲೋಕಸಭೆ ಚುನಾವಣೆಯ ವೇಳೆಗೆ ಮತದಾನವನ್ನೂ ಮಾಡಿದ್ದಳು. ಆದರೆ ಜಿಬಿಎಯ ಕರಡು ಮತಪಟ್ಟಿಯಲ್ಲಿ ಇದು ಕಾಣಿಸಿಕೊಂಡಿಲ್ಲ. ಹಾಗೆಯೇ ನಮ್ಮೆಲ್ಲರ ಸಿರೀಯಲ್ ನಂಬರ್ ಕೂಡ ಬದಲಾಗಿದೆ. ನನ್ನ ಗುಮಾನಿಯಂತೆ ರಾಜ್ಯ ಚುನಾವಣೆ ಆಯೋಗದ ಅಧಿಕಾರಿಗಳು 2023ರ ವಿಧಾನಸಭೆ ಚುನಾವಣೆಯ ಮತಪಟ್ಟಿಯನ್ನು ಇರಿಸಿಕೊಂಡು ಕರಡು ಪ್ರತಿಯನ್ನು ಬಿಡುಗಡೆ ಮಾಡಿದ್ದಾರೆ. 2024ರಲ್ಲಿ ನೂತನ ಮತಪಟ್ಟಿ ಇರುವಾಗ ಹಳೆಯ ಮತಪಟ್ಟಿಗೆ ಹೋಗಿದ್ದೇಕೆ ಎನ್ನುವುದು ಸ್ಪಷ್ಟವಾಗಿಲ್ಲ. ಇವೆರಡು ಮತಪಟ್ಟಿಯಲ್ಲಿ ಯಾವ ʼರಾಜಕೀಯʼ ಅಡಗಿದೆ ಎನ್ನುವುದನ್ನು ಸಂವಿಧಾನ ರಕ್ಷಕ ಪಡೆಯೇ ಸ್ಪಷ್ಟಪಡಿಸಬೇಕಿದೆ. ಇನ್ನೊಂದೆಡೆ ನನ್ನ ಹೆಂಡತಿ ರೀತಿಯಲ್ಲಿ ಮತಪಟ್ಟಿಯಿಂದ ಅನಗತ್ಯವಾಗಿ ಹೊರ ಇರುವವರು ಮತ್ತೇಕೆ ನಿಮ್ಮ ಗ್ರೇಟ್ ಜಿಬಿಎ ಕಚೇರಿಗೆ ಅಲೆಯಬೇಕು ಎನ್ನುವ ಮಾಹಿತಿಯನ್ನು ಜನಸಾಮಾನ್ಯರಿಗೆ ಚುನಾವಣೆ ಆಯುಕ್ತರು ನೀಡಬೇಕಿದೆ'.
'ಇಂತಹ ದುರುದ್ದೇಶಪೂರ್ವಕವಾದ ಕ್ರಮಕ್ಕೆ ಒಂದು ಸುಳ್ಳನ್ನು ಸೇರಿಸಲಾಗಿದೆ. ಇವರ ಪ್ರಕಾರ ಕಳೆದ ಅಕ್ಟೋಬರ್ನಲ್ಲಿನ ಮಾಹಿತಿ ಪ್ರಕಾರ ಮತಪಟ್ಟಿ ಕರಡು ಪ್ರಕಟಿಸಲಾಗಿದೆ. ಎಂತಹ ವಿಪರ್ಯಾಸವೆಂದರೆ 2024ರ ಏಪ್ರಿಲ್ನಲ್ಲಿ ಪ್ರಕಟಿಸಿದ ಕರಡು ಪಟ್ಟಿಯಲ್ಲಿರುವ ನನ್ನ ಹೆಂಡತಿ ಹೆಸರು, ಇದ್ದಕ್ಕಿದ್ದಂತೆ ಮಾಯವಾಗಿದೆ. ಹಾಗಿದ್ದರೆ ನನ್ನ ಹೆಂಡತಿ ಹೆಸರು ಅಕ್ರಮವಾಗಿ ಮತಪಟ್ಟಿಗೆ ಸೇರಿದೆಯೆನ್ನುವ ಸಂಶಯದಿಂದ ರದ್ದು ಮಾಡಿರಬಹುದು ಎಂದು ಬಡಾವಣೆಯಲ್ಲಿ ವಿಚಾರಿಸಿದೆ. ಕಳೆದೊಂದು ವರ್ಷದಲ್ಲಿ ನಮ್ಮ ಬಡಾವಣೆಗೆ ಜಿಬಿಎ ಅಥವಾ ಹಿಂದಿನ ಬಿಬಿಎಂಪಿ ಯಾವುದೇ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ. ಹಾಗೆಯೇ ನನ್ನ ಮೊಬೈಲ್ಗೆ ಈ ಸಂಬಂಧ ಯಾವುದೇ ಕರೆ ಕೂಡ ಬಂದಿಲ್ಲ. ಏಕೆಂದರೆ ನನ್ನ ಹೆಂಡತಿಯ ಮತಪತ್ರದಲ್ಲಿ ನನ್ನ ಮತಪತ್ರದ ಜೋಡಣೆಯಾಗಿದೆ. ಕೇಂದ್ರ ಚುನಾವಣೆ ಆಯೋಗದ ವೆಬ್ಸೈಟ್ನಲ್ಲಿ ಮಾಹಿತಿ ಹುಡುಕುವಾಗ ನನ್ನ ಸಂಬಂಧಿ ಎನ್ನುವುದು ಅಲ್ಲಿ ಸ್ಪಷ್ಟವಾಗಿ ಉಲ್ಲೇಖವಾಗಿದೆ. ಅಷ್ಟಕ್ಕೂ ರಾಜ್ಯ ಚುನಾವಣೆ ಆಯೋಗವು ಇಂತಹ ಯಾವುದೇ ಕೆಲಸ ಮಾಡಿರುವ ಹಾಗಿಲ್ಲ. ಬದಲಾಗಿ ʼಮಾಸ್ಟರ್ʼ ಅಣತಿಯಂತೆ 2023ರ ಮತಪಟ್ಟಿಯನ್ನು ಕಣ್ಮುಚ್ಚಿಕೊಂಡು ಮರು ಪ್ರಕಟಿಸಿದೆ'.
ರಾಹುಲ್ ಅಣುಬಾಂಬ್ ಹಾಗೂ ಕರ್ನಾಟಕ
'ಬಿಹಾರ ವಿಧಾನಸಭೆ ಚುನಾವಣೆಗೂ ಮುನ್ನ ರಾಹುಲ್ ಗಾಂಧಿ ಹಾಕಿದ್ದ ಅಣುಬಾಂಬ್ ಹಾಗೂ ಹೈಡ್ರೋಜನ್ ಬಾಂಬ್ ನಿಮಗೆಲ್ಲ ಗೊತ್ತಿದೆ. ಅದಾದ ಬಳಿಕ ಆ ಬಾಂಬ್ ಲೋಕಸಭೆಯಲ್ಲೂ ಸ್ಫೋಟವಾಗಿತ್ತು. ಆ ಸಂದರ್ಭದಲ್ಲಿ ರಾಹುಲ್ ಗಾಂಧಿ ಪದೇಪದೆ ಒಂದು ವಿಚಿತ್ರವಾದ ಬೇಡಿಕೆ ಇರಿಸಿದ್ದರು. ಮತಪಟ್ಟಿಯ ಪಿಡಿಎಫ್ ಫೈಲ್ನಲ್ಲಿ ಸರ್ಚ್ ಅವಕಾಶವನ್ನು ಡಿಸೇಬಲ್ ಮಾಡಲಾಗಿದೆ. ಸರ್ಚ್ ಅವಕಾಶ ಇರುವ ಮತಪಟ್ಟಿಯನ್ನು ನಮ್ಮ ಕೈಗೆ ಕೊಡಿ ಎಂದು ಪದೇಪದೆ ಬಾಂಬ್ ಹಾಕುತ್ತಲೇ ಇದ್ದರು. ಇಂತಹ ಪಟ್ಟಿ ನೀಡಿದರೆ ಸುಲಭವಾಗಿ ಚುನಾವಣೆ ಆಯೋಗದ ಅಕ್ರಮವನ್ನು ಬಯಲಿಗೆ ಹಾಕಬಹುದು ಎನ್ನುವುದು ರಾಹುಲ್ ಗಾಂಧಿಯ ವಾದವಾಗಿತ್ತು. ಆದರೆ ಮತಪಟ್ಟಿಯ ಸುರಕ್ಷತೆ ಹಾಗೂ ದುರ್ಬಳಕೆ ತಡೆಯುವ ಉದ್ದೇಶದಿಂದ ಅದು ಅಸಾಧ್ಯ ಎನ್ನುವುದು ಚುನಾವಣೆಯ ಬಗ್ಗೆ ಲವಶೇಷ ಗೊತ್ತಿರುವ ಅಲ್ಪಜ್ಞಾನಿಗೂ ಗೊತ್ತಿದೆ. ಅಂದ್ಹಾಗೆ ರಾಹುಲ್ ಅಣತಿಯನ್ನು ಪಾಲಿಸುವ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ರಾಜ್ಯ ಚುನಾವಣೆ ಆಯೋಗ ಕೂಡ ಪಿಡಿಎಫ್ನಲ್ಲಿ ಸರ್ಚ್ ಅವಕಾಶ ಕೊಟ್ಟಿಲ್ಲ. ಅದನ್ನು ಕೊಡುವುದು ಸರಿಯಲ್ಲ ಎನ್ನುವ ವಾದಕ್ಕೆ ನಾನು ಈಗಲೂ ಬದ್ಧವಾಗಿದ್ದೇನೆ. ರಾಹುಲ್ ಗಾಂಧಿ ರೀತಿಯಲ್ಲಿ ಪರಿಸ್ಥಿತಿಗೆ ತಕ್ಕಂತೆ ನಿಲುವು ಬದಲಿಸಲು ಸಾಧ್ಯವಿಲ್ಲ. ಆದರೆ ಕೇವಲ ಸಕ್ರಮವನ್ನಷ್ಟೇ ಮಾಡುವ ಮಂದಿ ಮಾಡಿರುವ ತೆರೆಮರೆಯ ನಾಟಕವನ್ನು ನಿಮಗೆ ತಿಳಿಸಲೇಬೇಕು'.
'ಕೇಂದ್ರ ಚುನಾವಣೆಯ ಆಯೋಗದ ವೆಬ್ಸೈಟ್ಗೆ ಯಾವುದೇ ಕ್ಷಣದಲ್ಲಿ ಭೇಟಿ ನೀಡಿದರೂ ನಿಮ್ಮ ಹೆಸರು, ಮತಚೀಟಿಯ ಸಂಖ್ಯೆ ಹಾಗೂ ಮೊಬೈಲ್ ನಂಬರ್ ಮೂಲಕ ವಿವರವನ್ನು ಪಡೆಯುವ ಅವಕಾಶವಿದೆ. ಇದರಿಂದ ಸುಲಭವಾಗಿ ನಿಮ್ಮ ಮತಚೀಟಿಯ ವಿವರವನ್ನು ನೀವು ಹುಡುಕಬಹುದು. ಆದರೆ ರಾಜ್ಯ ಚುನಾವಣೆ ಆಯೋಗವು ಪ್ರಕಟಿಸಿರುವ ವೆಬ್ಸೈಟ್ನಲ್ಲಿ ಅತ್ಯಂತ ಬುದ್ಧಿವಂತಿಕೆಯ ಕೆಲಸ ಮಾಡಲಾಗಿದೆ. ಹೆಸರು ಹಾಗೂ ಮತಚೀಟಿ ಸಂಖ್ಯೆಯ ಮೂಲಕ ಸರ್ಚ್ ಮಾಡುವ ಅವಕಾಶವನ್ನು ತೋರಿಸಲಾಗಿದೆ. ಆದರೆ ಅದನ್ನು ಡಿಸೇಬಲ್ ಮಾಡಿ, ದೂರದಲ್ಲಿನ ಚಂದಮಾಮನನ್ನು ತೋರಿಸಿ ಆಸೆ ಹುಟ್ಟಿಸುವ ಕೆಲಸ ಮಾಡಲಾಗಿದೆ. ಅಂದರೆ ಕರಡು ಮತಪಟ್ಟಿಯಲ್ಲಿನ ದಾಖಲೆಯನ್ನು ಸಾಮಾನ್ಯ ಮತದಾರರು ಹುಡುಕಲು ಸಾಧ್ಯವೇ ಇಲ್ಲದಂತಹ ಕೌಶಲ್ಯವನ್ನು ಜಿಬಿಎಯ ಅಧಿಕಾರಿಗಳು ತೋರಿಸಿದ್ದಾರೆ. ಮುಂದಿನ ಕೆಂಪೆಗೌಡ ಪ್ರಶಸ್ತಿಯನ್ನು ಇವರಿಗೆ ನೀಡಬಹುದು. ಹಾಗೆಯೇ ಲೋಕಸಭೆಯಲ್ಲಿ ಕೇಂದ್ರ ಚುನಾವಣೆ ಅಯೋಗದ ಮುಖ್ಯ ಆಯುಕ್ತರ ಮಹಾಭಿಯೋಗಕ್ಕೆ ಮುಂದಾಗಿರುವಂತೆ, ರಾಜ್ಯದಲ್ಲಿಯೂ ಆ ಕೆಲಸ ಮಾಡಬಹುದು'.
'ಕೊನೆಯದಾಗಿ ಕಾಂಗ್ರೆಸ್ ಎನ್ನುವ ಪಕ್ಷವು ರಾಷ್ಟ್ರ ರಾಜಕೀಯದಿಂದ ಸುಖಾಸುಮ್ಮನೇ ಮಾಯವಾಗುತ್ತಿಲ್ಲ. ಈ ರೀತಿಯ ಇಬ್ಬಗೆಯ ನೀತಿ ಹಾಗೂ ದಿಕ್ಕು ದಿಸೆಯಲ್ಲದ ನಿಲುವಿನಿಂದ ಮತದರರ ಮನಸ್ಸಿನಿಂದ ದೂರವಾಗುತ್ತಿದೆ. ಒಂದೊಮ್ಮೆ ಕೇಂದ್ರ ಚುನಾವಣೆ ಆಯೋಗವು ಸಂವಿಧಾನ ಬಾಹಿರವಾಗಿ ಕೆಲಸ ಮಾಡುತ್ತಿದೆ ಎನ್ನುವುದನ್ನು ಸಾಧಿಸಿ ತೋರಿಸಬೇಕಿದ್ದರೆ, ರಾಜ್ಯ ಚುನಾವಣೆ ಆಯೋಗದ ಕೆಲಸದಲ್ಲಿ ಆ ಎಲ್ಲ ಸುಧಾರಣೆ, ಸಕ್ರಮಗಳನ್ನು ಜಾರಿ ಮಾಡಿ ಮಾದರಿಯಾಗಬೇಕು. ಆಗ ಜನರಿಗೂ ನಂಬಿಕೆ ಬರುತ್ತದೆ ಹಾಗೂ ನಿಮ್ಮ ಹೋರಾಟ ಸರಿಯಾಗಿದೆ ಎನ್ನುವುದು ಅರಿವಾಗುತ್ತದೆ. ಆದರೆ ಈ ಕಾಂಗ್ರೆಸ್ನವರು ರಾತ್ರಿ ಕಂಡ ಬಾವಿಗೆ ಹಗಲಿನಲ್ಲಿ ಟಾರ್ಚ್ ಹಿಡಿದುಕೊಂಡು ಹೋಗಿ ಬೀಳುತ್ತಾರೆ. ಇವರನ್ನು ಯಾರಿಂದಲೂ ಸುಧಾರಿಸಲು ಸಾಧ್ಯವಿಲ್ಲ. ಅಂದ್ಹಾಗೆ ದೇಶದಲ್ಲಿನ ಕಾಂಗ್ರೆಸ್ ಹಾಗೂ ಕರ್ನಾಟಕದಲ್ಲಿನ ಬಿಜೆಪಿಗೆ ಯಾವುದೇ ವ್ಯತ್ಯಾಸವಿಲ್ಲ ಎನ್ನುವುದು ಎಲ್ಲರಿಗೂ ಗೊತ್ತಿದೆ. ಇಲ್ಲಿ ನಿದ್ದೆಯಲ್ಲಿರುವ ನಾಯಕರಿಗೆ ಇಂತಹ ಸೂಕ್ಷ್ಮಗಳು ಗೊತ್ತಾಗುವಷ್ಟರಲ್ಲಿ ಜಿಬಿಎ ಚುನಾವಣೆ ಮುಗಿಯದಿದ್ದರೆ ಸಾಕು'.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications