Get Updates
Get notified of breaking news, exclusive insights, and must-see stories!

ಕನ್ನಡ ದಿನಪತ್ರಿಕೆಯಲ್ಲಿ ಪತ್ರಕರ್ತರಾಗಿದ್ದ ರಜನಿಕಾಂತ್

ಬೆಂಗಳೂರು, ಜನವರಿ 03: ರಜನಿಕಾಂತ್ ಅವರು ಸಿನಿಮಾ ಸೂಪರ್ ಸ್ಟಾರ್ ಆಗುವ ಮುಂಚೆ ಬೆಂಗಳೂರಿನಲ್ಲಿ ಬಿಎಂಟಿಸಿ ಕಂಡಕ್ಟರ್ ಆಗಿದ್ದರೆನ್ನುವುದು ಬಹುತೇಕ ಎಲ್ಲರಿಗೂ ಗೊತ್ತಿರುವ ವಿಷಯ ಆದರೆ ಗೊತ್ತಿಲ್ಲದ ವಿಷಯವೆಂದರೆ ಅವರು ಕನ್ನಡ ದಿನಪತ್ರಿಕೆಯೊಂದರಲ್ಲಿ ಪತ್ರಕರ್ತರಾಗಿಯೂ ಕೆಲಸ ಮಾಡಿದ್ದರು ಎಂಬುದು.

ಹೌದು, ರಜನೀಕಾಂತ್ ಅವರು ಸಿನಿಮಾಕ್ಕೆ ಬಣ್ಣ ಹಚ್ಚಲು ಚೆನ್ನೈಗೆ ಹೋಗುವ ಮೊದಲು ಕೆಲ ಕಾಲ ಕನ್ನಡದ ಸಂಯುಕ್ತ ಕರ್ನಾಟಕ ದಿನಪತ್ರಿಕೆಯಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದರು. ಅಲ್ಲಿ ಪ್ರೂಫ್ ರೀಡಿಂಗ್ ಕೆಲಸ ಮಾಡುತ್ತಿದ್ದುದಾಗಿ ರಜನೀಕಾಂತ್ ಅವರೇ ಹೇಳಿಕೊಂಡಿದ್ದಾರೆ.

ಚೆನ್ನೈನಲ್ಲಿ ನಡೆದ ಅಭಿಮಾನಿಗಳೊಂದಿಗಿನ ಸಂವಾದದಲ್ಲಿ ಈ ವಿಷಯವನ್ನು ಸ್ವತಃ ರಜನೀಕಾಂತ್ ಅವರೇ ಹೇಳಿಕೊಂಡಿದ್ದು, 'ಕನ್ನಡ ದಿನಪತ್ರಿಕೆ ಸಂಯುಕ್ತ ಕರ್ನಾಟಕದಲ್ಲಿ ಪ್ರೂಫ್ ರೀಡರ್ ಆಗಿ ಕೆಲಸ ಮಾಡುತ್ತಿದ್ದ ನನ್ನ ಗೆಳೆಯ ರಾಮಚಂದ್ರ ರಾವ್ ಅವರೊಂದಿಗೆ ನಾನು ಸಹ ಪ್ರೂಫ್ ರೀಡರ್ ಆಗಿ ಕೆಲಸ ಮಾಡುತ್ತಿದ್ದೆ' ಎಂದು ನೆನಪಿಸಿಕೊಂಡಿದ್ದಾರೆ.

Rajinakath says he was Kannada journalist once

ಈ ಬಗ್ಗೆ ಸಂಯುಕ್ತ ಕರ್ನಾಟಕದ ಲೋಕಶಿಕ್ಷಣ ಟ್ರಸ್ಟ್ ಮುಖ್ಯಸ್ಥರು ಸ್ಪಷ್ಟನೆ ನೀಡಿದ್ದು, ರಜನೀಕಾಂತ್ ಅವರು ನಮ್ಮ ದಿನಪತ್ರಿಕೆಯ ಉದ್ಯೋಗಿ ಆಗಿರಲಿಲ್ಲ, ಅವರು ತಮ್ಮ ಗೆಳೆಯ ರಾಮಚಂದ್ರ ರಾವ್ ಅವರ ಭೇಟಿಗೆಂದು ಕಚೇರಿಗೆ ಬರುತ್ತಿದ್ದರು ಆಗ ಅವರಿಗೆ ಸಹಾಯ ಮಾಡುತ್ತಿದ್ದರು, ಇತ್ತೀಚೆಗಷ್ಟೆ ರಾಮಚಂದ್ರ ರಾವ್ ಅವರು ನಿವೃತ್ತರಾಗಿದ್ದಾರೆ ಎಂದಿದ್ದಾರೆ.

ರಜನೀಕಾಂತ್ ಅವರಿಗೆ ಪತ್ರಿಕೋದ್ಯಮದ ಬಗ್ಗೆ ಆಸಕ್ತಿ ಇತ್ತು ಹಾಗಾಗಿ ಅವರು ನಮ್ಮ ಕಚೇರಿಗೆ ನಿಗದಿತವಾಗಿ ಬರುತ್ತಿದ್ದರು ಎಂದು ನೆನಪಿಸಿಕೊಂಡಿರುವ ದಿನಪತ್ರಿಕೆ ಮುಖ್ಯಸ್ಥರು, ಸನಿಹದಲ್ಲಿಯೇ ರಜನೀಕಾಂತ್ ಅವರನ್ನು ಸಂಯುಕ್ತ ಕರ್ನಾಟಕ ಕಚೇರಿಗೆ ಆಹ್ವಾನಿಸುವುದಾಗಿ ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+