ಕನ್ನಡ ದಿನಪತ್ರಿಕೆಯಲ್ಲಿ ಪತ್ರಕರ್ತರಾಗಿದ್ದ ರಜನಿಕಾಂತ್
ಬೆಂಗಳೂರು, ಜನವರಿ 03: ರಜನಿಕಾಂತ್ ಅವರು ಸಿನಿಮಾ ಸೂಪರ್ ಸ್ಟಾರ್ ಆಗುವ ಮುಂಚೆ ಬೆಂಗಳೂರಿನಲ್ಲಿ ಬಿಎಂಟಿಸಿ ಕಂಡಕ್ಟರ್ ಆಗಿದ್ದರೆನ್ನುವುದು ಬಹುತೇಕ ಎಲ್ಲರಿಗೂ ಗೊತ್ತಿರುವ ವಿಷಯ ಆದರೆ ಗೊತ್ತಿಲ್ಲದ ವಿಷಯವೆಂದರೆ ಅವರು ಕನ್ನಡ ದಿನಪತ್ರಿಕೆಯೊಂದರಲ್ಲಿ ಪತ್ರಕರ್ತರಾಗಿಯೂ ಕೆಲಸ ಮಾಡಿದ್ದರು ಎಂಬುದು.
ಹೌದು, ರಜನೀಕಾಂತ್ ಅವರು ಸಿನಿಮಾಕ್ಕೆ ಬಣ್ಣ ಹಚ್ಚಲು ಚೆನ್ನೈಗೆ ಹೋಗುವ ಮೊದಲು ಕೆಲ ಕಾಲ ಕನ್ನಡದ ಸಂಯುಕ್ತ ಕರ್ನಾಟಕ ದಿನಪತ್ರಿಕೆಯಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದರು. ಅಲ್ಲಿ ಪ್ರೂಫ್ ರೀಡಿಂಗ್ ಕೆಲಸ ಮಾಡುತ್ತಿದ್ದುದಾಗಿ ರಜನೀಕಾಂತ್ ಅವರೇ ಹೇಳಿಕೊಂಡಿದ್ದಾರೆ.
ಚೆನ್ನೈನಲ್ಲಿ ನಡೆದ ಅಭಿಮಾನಿಗಳೊಂದಿಗಿನ ಸಂವಾದದಲ್ಲಿ ಈ ವಿಷಯವನ್ನು ಸ್ವತಃ ರಜನೀಕಾಂತ್ ಅವರೇ ಹೇಳಿಕೊಂಡಿದ್ದು, 'ಕನ್ನಡ ದಿನಪತ್ರಿಕೆ ಸಂಯುಕ್ತ ಕರ್ನಾಟಕದಲ್ಲಿ ಪ್ರೂಫ್ ರೀಡರ್ ಆಗಿ ಕೆಲಸ ಮಾಡುತ್ತಿದ್ದ ನನ್ನ ಗೆಳೆಯ ರಾಮಚಂದ್ರ ರಾವ್ ಅವರೊಂದಿಗೆ ನಾನು ಸಹ ಪ್ರೂಫ್ ರೀಡರ್ ಆಗಿ ಕೆಲಸ ಮಾಡುತ್ತಿದ್ದೆ' ಎಂದು ನೆನಪಿಸಿಕೊಂಡಿದ್ದಾರೆ.

ಈ ಬಗ್ಗೆ ಸಂಯುಕ್ತ ಕರ್ನಾಟಕದ ಲೋಕಶಿಕ್ಷಣ ಟ್ರಸ್ಟ್ ಮುಖ್ಯಸ್ಥರು ಸ್ಪಷ್ಟನೆ ನೀಡಿದ್ದು, ರಜನೀಕಾಂತ್ ಅವರು ನಮ್ಮ ದಿನಪತ್ರಿಕೆಯ ಉದ್ಯೋಗಿ ಆಗಿರಲಿಲ್ಲ, ಅವರು ತಮ್ಮ ಗೆಳೆಯ ರಾಮಚಂದ್ರ ರಾವ್ ಅವರ ಭೇಟಿಗೆಂದು ಕಚೇರಿಗೆ ಬರುತ್ತಿದ್ದರು ಆಗ ಅವರಿಗೆ ಸಹಾಯ ಮಾಡುತ್ತಿದ್ದರು, ಇತ್ತೀಚೆಗಷ್ಟೆ ರಾಮಚಂದ್ರ ರಾವ್ ಅವರು ನಿವೃತ್ತರಾಗಿದ್ದಾರೆ ಎಂದಿದ್ದಾರೆ.
ರಜನೀಕಾಂತ್ ಅವರಿಗೆ ಪತ್ರಿಕೋದ್ಯಮದ ಬಗ್ಗೆ ಆಸಕ್ತಿ ಇತ್ತು ಹಾಗಾಗಿ ಅವರು ನಮ್ಮ ಕಚೇರಿಗೆ ನಿಗದಿತವಾಗಿ ಬರುತ್ತಿದ್ದರು ಎಂದು ನೆನಪಿಸಿಕೊಂಡಿರುವ ದಿನಪತ್ರಿಕೆ ಮುಖ್ಯಸ್ಥರು, ಸನಿಹದಲ್ಲಿಯೇ ರಜನೀಕಾಂತ್ ಅವರನ್ನು ಸಂಯುಕ್ತ ಕರ್ನಾಟಕ ಕಚೇರಿಗೆ ಆಹ್ವಾನಿಸುವುದಾಗಿ ಹೇಳಿದ್ದಾರೆ.
-
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ












Click it and Unblock the Notifications