ಬೆಂಗಳೂರು ಕೆರೆಗಳ ಬಗ್ಗೆ ತಾತ್ಸಾರ ಬೇಡ: ರಾಜೀವ್ ಚಂದ್ರಶೇಖರ್
ಬೆಂಗಳೂರಿನ ಕೆರೆಗಳ ಬಗ್ಗೆ ಎಚ್ಚರ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಜೀವ್ ಚಂದ್ರಶೇಖರ್ ಆಗ್ರಹ. ಬೆಂಗಳೂರಿನಲ್ಲಿ ಮಳೆ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿದಾಗ ರಾಜೀವ್ ಚಂದ್ರಶೇಖರ್ ಹೇಳಿಕೆ.
ಬೆಂಗಳೂರು, ಆಗಸ್ಟ್ 16: ರಾಜಧಾನಿಯಲ್ಲಿ ಕೆರೆಗಳ ಬಗ್ಗೆ, ರಾಜಕಾಲುವೆ ಬಗ್ಗೆ ರಾಜ್ಯ ಸರ್ಕಾರ ವಹಿಸುತ್ತಿರುವ ತಾತ್ಸಾರ ಇನ್ನಾದರೂ ನಿಲ್ಲಬೇಕೆಂದು ಬಿಜೆಪಿ ಸಂಸದ ರಾಜೀವ್ ಚಂದ್ರಶೇಖರ್ ಆಗ್ರಹಿಸಿದ್ದಾರೆ.
ಓದುಗರ ಪತ್ರ: ಸಂಸದ ರಾಜೀವ್ ಚಂದ್ರಶೇಖರ್ ಗೆ ಓದುಗನ ಅಭಿನಂದನೆ
ಆಗಸ್ಟ್ 14ರ ಮಧ್ಯರಾತ್ರಿ ಸುರಿದ ಧಾರಾಕಾರ ಮಳೆಗೆ ಕೋರಮಂಗಲ ಮತ್ತಿತರ ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ಆಗಸ್ಟ್ 15ರಂದು ಆ ಪ್ರದೇಶಗಳ ರಸ್ತೆಗಳಲ್ಲಿ ಹಾಗೂ ಮನೆಗಳಲ್ಲಿ 3ರಿಂದ 5 ಅಡಿಗಳವರೆಗಿನ ನೀರನ್ನು ಹೊರಹಾಕಲು ಭಾರೀ ಪ್ರಯಾಸ ಪಡಬೇಕಾಯಿತು.
ಈ ಹಿನ್ನೆಲೆಯಲ್ಲಿ, ಮಳೆ ಬಾಧಿತ ಪ್ರದೇಶಗಳಿಗೆ ರಾಜೀವ್ ಚಂದ್ರಶೇಖರ್ ಅವರು ತಮ್ಮ ಸಮಾಜಸೇವಾ ಸಂಸ್ಥೆಯಾದ ಯುನೈಟೆಡ್ ಬೆಂಗಳೂರು ಸದಸ್ಯರೊಂದಿಗೆ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ''ಕೋರಮಂಗಲ, ಶಾಂತಿ ನಗರ ಮುಂತಾದ ಕಡೆಗಳಲ್ಲಿ ಮಳೆ ನೀರು ನುಗ್ಗಿದ್ದರಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಸರಿಯಾದ ಒಳಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದಾಗಿ, ಕುಡಿಯುವ ನೀರಿನೊಂದಿಗೆ ಮಳೆ ನೀರೂ ಸೇರಿಕೊಂಡಿರುವುದರಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಸಮಸ್ಯೆಯನ್ನು ಆದಷ್ಟೂ ನಿವಾರಿಸಬೇಕು'' ಎಂದರು.
RERA ಕಾಯ್ದೆ ಲೋಪಗಳ ಬಗ್ಗೆ ಸಿಎಂಗೆ ಸಂಸದ ರಾಜೀವ್ ಚಂದ್ರಶೇಖರ್ ಪತ್ರ
''ಕೆರೆಗಳನ್ನು ಮುಚ್ಚುತ್ತಿರುವುದರಿಂದ, ರಾಜಾ ಕಾಲುವೆಗಳನ್ನು ಅತಿಕ್ರಮಿಸುತ್ತಿರುವುದರಿಂದ ಮಳೆಗಾಲದಲ್ಲಿ ಜನರು ಕೆಟ್ಟ ಪರಿಸ್ಥಿತಿ ಒಳಗಾಗುವ ಪ್ರಸಂಗಗಳು ಪದೇ ಪದೇ ಘಟಿಸುತ್ತಿವೆ. ಈ ಹಿನ್ನೆಲೆಯಲ್ಲಿ, ಸರ್ಕಾರವು ಇಂಥ ವಿಚಾರಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಆದರೆ, ಪರಿಸ್ಥಿತಿಗಳ ಘೋರತೆಯು ರಾಚುತ್ತಿದ್ದರೂ ರಾಜ್ಯ ಸರ್ಕಾರ ಸುಮ್ಮನಿರುವುದು ವಿಪರ್ಯಾಸ. ತೆರಿಗೆದಾರರು ತೆರಿಗೆ ಹಣದಲ್ಲಿ ಅವರಿಗೆ ಉತ್ತಮ ಸೌಲಭ್ಯಗಳನ್ನು ನೀಡಬೇಕಾಗಿರುವುದು ಸರ್ಕಾರದ ಕರ್ತವ್ಯ'' ಎಂದು ತಿಳಿಸಿದರು.