Appu Gandhadagudi Agarbatti: ವರನಟನ ಜನ್ಮದಿನದಂದು ಹೊಸ ಉದ್ಯಮಕ್ಕೆ ಕಾಲಿಟ್ಟ ಅಶ್ವಿನಿ ಪುನೀತ್ ರಾಜಕುಮಾರ್
ಬೆಂಗಳೂರು, ಏಪ್ರಿಲ್ 25: ಕನ್ನಡ ಕಣ್ಮಣಿ ಡಾ.ರಾಜ್ ಕುಮಾರ್ ಅವರ 95ನೇ ಜನ್ಮ ದಿನಾಚರಣೆಯನ್ನು ನೆನ್ನೆ ಬುಧವಾರವಷ್ಟೇ (ಏ.24) ರಂದು ಆಚರಿಸಲಾಗಿದೆ. ಈ ಶುಭದಿನದಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು 'ಅಪ್ಪು' ಹೆಸರಿನಲ್ಲಿ ಹೊಸ ಉದ್ಯಮ ಆರಂಭಿಸಿರುವುದಾಗಿ ತಿಳಿಸಿದ್ದಾರೆ.
ಹೌದು, ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಮತ್ತು 'ಗಂಧದಗುಡಿ' ಸುವರ್ಣ ಮಹೋತ್ಸವ ಸವಿ ನೆನಪಿಗಾಗಿ 'ಅಪ್ಪು ಗಂಧದಗುಡಿ ಅಗರಬತ್ತಿ' ಉದ್ಯಮವನ್ನು ಲೋಕಾರ್ಪಣೆಗೊಳಿಸಿದ್ದಾರೆ. ಟ್ವೀಟ್ (ಎಕ್ಸ್) ಮೂಲಕ ಹೊಸ ಉದ್ಯಮಕ್ಕೆ ಕೈ ಹಾಕಿರುವುದಾಗಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಅಪ್ಪಾಜಿಯವರ ಹುಟ್ಟು ಹಬ್ಬವನ್ನು ಸ್ಮರಿಸಿರುವ ಅಶ್ವಿನಿ ಪುನೀತ್ ರಾಜಕುಮಾರ್ ಅವರು, ಗಂಧದಗುಡಿ ಚಿತ್ರದ ಸುವರ್ಣ ಮಹೋತ್ಸವ ನೆನಪಿಸಿದ್ದಾರೆ. ಇದರ ಅಂಗವಾಗಿ 'ಅಪ್ಪು ಗಂಧದಗುಡಿ ಅಗರಬತ್ತಿ'ಯೊಂದಿಗೆ ಈ ಶುಭಗಳಿಗೆ ಸ್ಮರಿಸೋಣ ಎಂದು ಪೋಸ್ಟ್ ಮಾಡಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರ, ಅಪ್ಪಾಜಿ ಅಭಿಮಾನಿಗಳ ಸಂಘ, ಸಂಸ್ಥೆಗಳು ಡಾ.ರಾಜ್ ಜನ್ಮದಿನ ಪ್ರಯುಕ್ತ ಅವರ ಹೆಸರಿನ ವೃತ್ತಗಳಲ್ಲಿ, ಪ್ರಮುಖ ರಸ್ತೆ, ಹೋಟೆಲ್ ಗಳಲ್ಲಿ ಹಾಗೂ ಕಂಠೀರವ ಸ್ಟುಡಿಯೋ ಮುಂದೆ ಅನ್ನದಾನ, ರಕ್ತದಾನದಂತಹ ಮಹತ್ವದ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಅಗರಬತ್ತಿ ತಯಾರಿಕೆ, ವಿಶೇಷತೆ ಮಾಹಿತಿ
ಅಪ್ಪು ಅವರು ಇದ್ದಾಗಲೇ ಈ ಅಗರಬತ್ತಿ ಉದ್ಯಮ ಆರಂಭಿಸುವ ಬಗ್ಗೆ ಮಾತುಕತೆ ನಡೆದಿತ್ತು. ಆದರೆ ಕಾರಣಾಂತರಗಳಿಂದ ಆಗಿರಲಿಲ್ಲ. ಒಪ್ಪಂದವು ಆಗಿರಲಿಲ್ಲ. ಇದೀಗ ರಾಜೇಶ್ ಎಂಬುವವರು ಮತ್ತೊಮ್ಮೆ 'ಅಪ್ಪು ಗಂಧದಗುಡಿ ಅಗರಬತ್ತಿ' ಬಗ್ಗೆ ಪ್ರಸ್ತಾವ ಮುಂದಿಟ್ಟರು ಎಂದು ಅಶ್ವಿನಿ ಅವರು ತಿಳಿಸಿದರು.

ಅಪ್ಪು ಸರ್ ಇದ್ದಾಗಲೇ ಈ ಬಗ್ಗೆ ಮಾತುನಾಡಿದ್ದೇವೆ. ಇದೀಗ ಅಶ್ವಿನಿ ಅವರ ಜೊತೆ ಅಗತಬತ್ತಿ ಉದ್ಯಮ ನಡೆಸುವುದು ಖುಷಿ ತಂದಿದೆ. ಅಗರಬತ್ತಿ ಮೂಲಕ ಪ್ರತಿ ಮನೆ ಮನೆಗೂ ಅಪ್ಪು ಅವರನ್ನು ಕರೆದೊಯ್ಯುತ್ತಿದ್ದೇವೆ. ಅಗರಬತ್ತಿ ತಯಾರಿಕೆಗೆ ಗ್ರೌಂಡ್ ವಾಟರ್ ಬಳಸಲಾಗಿದೆ. ವಾಟರ್ ಫ್ರಂ ಏರ್ ಬಳಸಲಾಗಿದೆ. ಇದು ಸಾಮಾಜಿಕವಾಗಿ ದೊಡ್ಡ ಪರಿಣಾಮ ಭೀರಲಿದೆ ಎಂದು ರಾಜೇಶ್ ಮಾಹಿತಿ ನೀಡಿದರು.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ











Click it and Unblock the Notifications