ರಾಜ್ಯಸಭೆಗೆ ಎಸ್ಸೆಂ ಕೃಷ್ಣ ಮರು ಆಯ್ಕೆ ಕಷ್ಟ?
ಬೆಂಗಳೂರು, ಜೂ.8: ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಸ್.ಎಂ ಕೃಷ್ಣ ಅವರು ರಾಜ್ಯಸಭೆಗೆ ಮರು ಆಯ್ಕೆಯಾಗುವುದು ಕಷ್ಟಕರ ಎಂದು ಎಐಸಿಸಿ ಮೂಲಗಳು ಹೇಳಿವೆ. ಹಿರಿತನದಿಂದ ಸಚಿವ ಸ್ಥಾನ ತೊರೆದಿದ್ದ ಕೃಷ್ಣ ಅವರಿಗೆ ಮತ್ತೊಮ್ಮೆ ವಯಸ್ಸಿನ ನೆಪವೊಡ್ಡಿ ರಾಜ್ಯಸಭೆ ಟಿಕೆಟ್ ತಪ್ಪಿಸಲು ಸರ್ವ ಸಿದ್ಧತೆ ನಡೆದಿದೆ ಎನ್ನಲಾಗಿದೆ. ಬಹುಕಾಲದಿಂದಲೂ ಸೀಟು ಆಕಾಂಕ್ಷಿಯಾಗಿರುವ ರಾಜೀವ್ ಗೌಡ ಅವರಿಗೆ ಈ ಸ್ಥಾನ ದೊರೆಯುವ ನಿರೀಕ್ಷೆಯಿದೆ.
ಎಸ್ಸೆಂ ಕೃಷ್ಣ ಅವರ ಬದಲಿಗೆ ಐಐಎಂ ಪದವಿಧರ, ರಾಜ್ಯ ವಿಧಾನಸಭೆ ಮಾಜಿ ಸ್ಪೀಕರ್ ದಿ. ಎಂ.ವೆಂಕಟಪ್ಪ ಅವರ ಪುತ್ರ ಪ್ರೊ. ರಾಜೀವ್ ಗೌಡ ಅವರಿಗೆ ಅವಕಾಶ ಕಲ್ಪಿಸುವ ಬಗ್ಗೆ ಹೈಕಮಾಂಡ್ ನಿರ್ಧರಿಸಿದೆ. ಹೈಕಮಾಂಡ್ ನಿರ್ಧಾರ ಒಕ್ಕಲಿಗ ಮುಖಂಡರಲ್ಲಿ ಅಚ್ಚರಿ ಮೂಡಿಸಿದ್ದು, ಆಯ್ಕೆ ಗೊಂದಲ ಕುತೂಹಲಕಾರಿಯಾಗಿದ್ದು, ಭಾನುವಾರ ಸಂಜೆ ವೇಳೆಗೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಯಿದೆ.[ರಾಜ್ಯಸಭೆ, ಪರಿಷತ್ ಚುನಾವಣೆ ಜೂನ್ 19]
ಶುಕ್ರವಾರ ಸಂಜೆಯಿಂದಲೇ ಕೃಷ್ಣ ಅವರ ಮರು ಆಯ್ಕೆ ಬಗ್ಗೆ ವದಂತಿ ಆರಂಭವಾಗಿತ್ತು. ಎಸ್ಸೆಂ ಕೃಷ್ಣ ಅವರಿಗೆ ಟಿಕೆಟ್ ಸಿಗದಿದ್ದರೆ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಹೊಸ ಪಕ್ಷ ಸ್ಥಾಪಿಸಲಿದ್ದಾರೆ ಎಂಬುದು ಪ್ರಮುಖವಾಗಿ ಹಬ್ಬಿದ್ದ ಸುದ್ದಿ. ವಯೋಸಹಜ ಕಾರಣ ಹಿನ್ನೆಲೆಯಲ್ಲಿ ಅವರಿಗೆ ಅವಕಾಶ ನಿರಾಕರಿಸುವಂತೆ ದೆಹಲಿ ಮಟ್ಟದಲ್ಲಿ ಪ್ರಬಲವಾಗಿರುವ ಕೃಷ್ಣ ವಿರೋಧಿ ಬಣ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದಾರೆ ಎನ್ನಲಾಗಿದೆ.
ಆಯ್ಕೆ ಅಂತಿಮವಾಗಿದೆಯೆ? : ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಹಾಗೂ ಬೆಂಬಲಿಗರು ಹೈಕಮಾಂಡ್ ಮನವೊಲಿಸುವ ಕೆಲಸ ಮಾಡುತ್ತಿತ್ತು. ಕೊನೆ ಹಂತದಲ್ಲಿ ಹೈಕಮಾಂಡ್ ಕೃಷ್ಣ ಪರ ಹಸಿರು ನಿಶಾನೆ ತೋರಿಸಿತ್ತು. ಆದರೆ ಪರಮೇಶ್ವರ ದೆಹಲಿಯಿಂದ ವಾಪಾಸ್ ಆಗುತ್ತಿದ್ದಂತೆ ಒಕ್ಕಲಿಗ ಸಮುದಾಯಕ್ಕೆ ಸೇರಿದ ಬೆಂಗಳೂರಿನ ಸಚಿವ ಕೃಷ್ಣಭೈರೆಗೌಡ ಅವರ ಜತೆ ರಾಜೀವ ಗೌಡ ಅವರು ದೆಹಲಿಗೆ ತೆರಳಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಕೃಷ್ಣ ಅವರಿಗೆ ಅವಕಾಶ ನಿರಾಕರಿಸುವಂತೆ ಒತ್ತಡ ಹೇರಿದ್ದಾರೆ ಎಂಬ ಸುದ್ದಿಯಿದೆ.

ರಾಜೀವ್ ಗೌಡ ಹಾಗೂ ಕೃಷ್ಣ ಒಕ್ಕಲಿಗ ಸಮುದಾಯಕ್ಕೆ ಸೇರಿದ್ದಾರೆ. ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರದ ನಡೆಗಳನ್ನು ಖಂಡಿಸುವ ಜ್ಞಾನ ಮತ್ತು ವಾಕ್ ಚಾತುರ್ಯವಿದೆ. ಸಮುದಾಯದಲ್ಲಿ ಯಾರಾದರೊಬ್ಬರಿಗೆ ಪ್ರಾತಿನಿಧ್ಯ ನೀಡಿದರೆ ಸಾಕು ಎಂದು ರಾಹುಲ್ ಮನವೊಲಿಸಿದ್ದಾರೆ. 75 ವರ್ಷ ಮೀರಿದವರಿಗೆ ಅವಕಾಶ ಬೇಡ ಎಂಬ ಅಘೋಷಿತ ನಿರ್ಣಯ ಕಾಂಗ್ರೆಸ್ಸಿನಲ್ಲಿರುವುದು ಕೃಷ್ಣ ಅವರಿಗೆ ಮುಳುವಾಗುವ ಸಾಧ್ಯತೆಯಿದೆ.
ಇದರ ಜತೆಗೆ ಕೃಷ್ಣ ಅವರನ್ನು ವಿರೋಧಿಸುವ ಕಾಂಗ್ರೆಸ್ನ ಇನ್ನೊಂದು ಬಣ ಒಕ್ಕಲಿಗ ಸಮುದಾಯಕ್ಕೆ ಸೇರಿದ ತಾರಾದೇವಿ ಅಥವಾ ಸಿ.ಎಂ.ಲಿಂಗಪ್ಪ ಅವರಿಗೆ ರಾಜ್ಯಸಭಾ ಟಿಕೆಟ್ ನೀಡುವಂತೆ ಆಗ್ರಹಿಸಿದ್ದರು. ಹೀಗಾಗಿ ಐಟಿ-ಬಿಟಿ ಹಿನ್ನೆಲೆಯ ಇಂಗ್ಲಿಷ್ನಲ್ಲಿ ನಿರರ್ಗಳವಾಗಿ ಮಾತನಾಡಬಲ್ಲ ರಾಜೀವ್ ಗೌಡ ಅವರನ್ನು ಆಯ್ಕೆ ಮಾಡುವುದಕ್ಕೆ ರಾಹುಲ್ ಗಾಂಧಿ ಒಪ್ಪಿಗೆ ನೀಡಿದರು ಎಂದು ತಿಳಿದು ಬಂದಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications