ನಾಡಪ್ರಭು ಕೆಂಪೇಗೌಡ ಸಮಾಧಿಗೆ ಒಕ್ಕಲಿಗರ ಪಾದಯಾತ್ರೆ
ಬೆಂಗಳೂರು, ನವೆಂಬರ್, 25: ನಾಡಪ್ರಭು ಕೆಂಪೇಗೌಡ ಪ್ರಾಧಿಕಾರ ರಚನೆ, ಕೆಂಪೇಗೌಡರ ಸಮಾಧಿಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು ಒತ್ತಾಯಿಸಿ ರಾಜ್ಯ ಒಕ್ಕಲಿಗ ಸಂಘ ನವೆಂಬರ್ 30ರಂದು ಮಾಗಡಿಯಿಂದ ಕೆಂಪಾಪುರದ ಕೆಂಪೇಗೌಡ ಸಮಾಧಿ ಸ್ಥಳದವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದೆ.
ನಗರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಡಾ. ಅಪ್ಪಾಜಿ ಗೌಡ, ಕನ್ನಡ ನಾಡಿಗೆ ಅದರಲ್ಲೂ ವಿಶೇಷವಾಗಿ ಬೆಂಗಳೂರಿಗೆ ಅದ್ಭುತ ಕಾಣಿಕೆಗಳನ್ನು ನೀಡಿರುವ ಕೆಂಪೇಗೌಡರ ಸಾಧನೆಯನ್ನು ನಿರ್ಲಕ್ಷಿಸುವ ಮನೋಭಾವ ಬೆಳೆಯುತ್ತಿದೆ. ಅದನ್ನು ತೊಡೆದು ಹಾಕಿ ಕೆಂಪೇಗೌಡರ ಹೆಸರು ಎಂದೆಂದಿಗೂ ಅಜರಾಮರ ಆಗಿರುವಂತೆ ಮಾಡಲು ಪಾದಯಾತ್ರೆ ಆಯೋಜಿಸಲಾಗಿದೆ ಎಂದು ತಿಳಿಸಿದರು.[ನಮ್ಮ ಮೆಟ್ರೋ ಇನ್ನು ಮುಂದೆ ಕೆಂಪೇಗೌಡ ಮೆಟ್ರೋ?]

ಪಾದಯಾತ್ರೆಯ ನೇತೃತ್ವವನ್ನು ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ, ನಂಜಾವಧೂತ ಸ್ವಾಮೀಜಿ ವಹಿಸಿಕೊಳ್ಳಲಿದ್ದಾರೆ. ಪಾದಯಾತ್ರೆಯು ಕೆಂಪೇಗೌಡರು ನಿರ್ಮಿಸಿದ ಕೋಟೆ ಮಾರಮ್ಮ ದೇವಾಲಯದಲ್ಲಿ ಬೆಳಗ್ಗೆ 9.30ಕ್ಕೆ ಆರಂಭವಾಗಲಿದ್ದು, ಕೆಂಪಾಪುರದ ಬಳಿಯಿರುವ ಸಮಾಧಿವರೆಗೂ ನಡೆಯಲಿದೆ ಎಂದು ಎಂದು ತಿಳಿಸಿದರು.[ಬೆಂದಕಾಳೂರು ಹೇಗೆ ಬೆಂಗಳೂರಾಯಿತು]

ಕೆಂಪೇಗೌಡರ ಆಡಳಿತ ದೂರದರ್ಶಿತ್ವ ಮತ್ತು ಪರಂಪರೆಯನ್ನು ಮತ್ತೆ ಬಿಂಬಿಸಲು ನಾಡಪ್ರಭು ಕೆಂಪೇಗೌಡ ಪ್ರಾಧಿಕಾರವನ್ನು ಸರ್ಕಾರ ರಚಿಸಬೇಕು. ಕೆಂಪೇಗೌಡರ ಕಾಲದ ಇತಿಹಾಸವನ್ನು ಸಮಗ್ರವಾಗಿ ರಚಿಸಿ, ನಮ್ಮ ನಾಡಿಗೆ ಅವರ ಕೊಡುಗೆಯನ್ನು ಎತ್ತಿ ತೋರಿಸಬೇಕು. ನಾಡಪ್ರಭುಗಳು ನಿರ್ಮಿಸಿದ ಕೋಟೆ, ಕೆರೆಕಟ್ಟೆ, ಸ್ಮಾರಕಗಳ ಜೀರ್ಣೋದ್ಧಾರ ಮಾಡಬೇಕು, ಕೆಂಪೇಗೌಡರು ಕಲೆ, ಸಾಹಿತ್ಯ, ಸಹಬಾಳ್ವೆ ಹಾಗೂ ಜನಜೀವನ ವಿಧಾನಕ್ಕೆ ನೀಡಿದ ಕೊಡುಗೆ ಬಗ್ಗೆ ಅಧ್ಯಯನ ನಡೆಸಬೇಕು ಎಂದು ಪಾದಯಾತ್ರೆಯಲ್ಲಿ ಒತ್ತಾಯಿಸಲಾಗುವುದು ಎಂದು ಅಪ್ಪಾಜಿ ಗೌಡ ತಿಳಿಸಿದರು.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications