ಬೆಂಗಳೂರಿನಲ್ಲಿ ರಾಕೇಶ್ ಟಿಕಾಯಿತ್ ಮೇಲೆ ಮಸಿ: 450 ಪುಟಗಳ ಆರೋಪಪಟ್ಟಿ ಸಲ್ಲಿಕೆ
ಬೆಂಗಳೂರು, ಆಗಸ್ಟ್ 21: ಬೆಂಗಳೂರಿನಲ್ಲಿ ಭಾರತೀಯ ಕಿಸಾನ್ ಒಕ್ಕೂಟ(ಬಿಕೆಯು) ಮುಖ್ಯಸ್ಥ ರಾಕೇಶ್ ಟಿಕಾಯಿತ್ ಮೇಲೆ ಮಸಿ ಎರಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಹೈಗ್ರೌಂಡ್ಸ್ ಪೊಲೀಸರು 450 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದಾರೆ.
8ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ACMM) ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪಪಟ್ಟಿಯಲ್ಲಿ 20 ಪ್ರತ್ಯಕ್ಷದರ್ಶಿಗಳ ಹೆಸರನ್ನು ದಾಖಲಿಸುವುದರ ಜೊತೆಗೆ 89 ಸಾಕ್ಷಿಗಳನ್ನು ಹೆಸರಿಸಲಾಗಿದೆ.
ಪೊಲೀಸರು ಸಲ್ಲಿಸಿದ ಆರೋಪಪಟ್ಟಿಯಲ್ಲಿ ಹಿಂದುತ್ವ ಸಂಘಟನೆಯ ಕಾರ್ಯಕರ್ತ ಭರತ್ ಶೆಟ್ಟಿ, ಆತನ ಸಹಚರರಾದ ಶಿವಕುಮಾರ್, ಪ್ರದೀಪ್ ಕುಮಾರ್ ಮತ್ತು ಉಮಾದೇವಿ ಸೇರಿದಂತೆ ಬಂಧಿತರ ಮಾಹಿತಿಯೂ ಇದೆ.

ವರದಿಗಳ ಪ್ರಕಾರ, ಉನ್ನತ ಅಧಿಕಾರಿಗಳ ಗಮನ ಸೆಳೆಯುವುದು ದಾಳಿಯ ಪ್ರಾಥಮಿಕ ಗುರಿಯಾಗಿದೆ ಎಂದು ಆರೋಪಿಗಳು ಪೊಲೀಸರ ಎದುರು ಒಪ್ಪಿಕೊಂಡಿದ್ದಾರೆ. ಫೇಮಸ್ ಆಗುವ ಉದ್ದೇಶದಿಂದ ಟಕಾಯಿತ್ ಮೇಲೆ ಕಪ್ಪು ಮಸಿ ಎರಚಿರುವುದಾಗಿ ಒಪ್ಪಿಕೊಂಡಿರುವ ಪ್ರಮುಖ ಆರೋಪಿ ಭರತ್ ಶೆಟ್ಟಿಯ ಆಡಿಯೋವನ್ನು ಪೊಲೀಸರು ನ್ಯಾಯಾಲಯಕ್ಕೆ ಒದಗಿಸಿದ್ದಾರೆ.
ಬೆಂಗಳೂರಿನಲ್ಲಿ ಮೇ 30ರಂದು ನಡೆದ ಘಟನೆ: ಕಳೆದ ಮೇ 30ರಂದು ಗಾಂಧಿ ಭವನದಲ್ಲಿ ನಡೆದ ಸಮಾವೇಶದಲ್ಲಿ ಬಿಕೆಯು ಮುಖ್ಯಸ್ಥ ರಾಕೇಶ್ ಟಿಕಾಯತ್ ಮಾತನಾಡುತ್ತಿದ್ದರು. ಈ ಬಗ್ಗೆ ತಿಳಿದ ಆರೋಪಿಗಳು ಮೊಟ್ಟೆಯಿಂದ ಹೊಡೆಯಲು ಉದ್ದೇಶಿಸಿದ್ದರು. ಆದರೆ ಮೊಟ್ಟೆಗಳನ್ನು ಸ್ಥಳಕ್ಕೆ ಕೊಂಡೊಯ್ಯುವುದು ಸಾಧ್ಯವಿಲ್ಲ ಎಂದು ಅರಿತುಕೊಂಡು ಶಾಯಿಯನ್ನು ತೆಗೆದುಕೊಂಡು ಹೋಗಿದ್ದರು. ಇದರ ಮಧ್ಯೆ ಕಪ್ಪು ಮಸಿ ಬಳಿಯುವುದಕ್ಕೂ ಪೂರ್ವದಲ್ಲಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಉಮಾದೇವಿ ಮನೆಯಲ್ಲಿ ಮಾರಕಾಸ್ತ್ರ ವಶ: ಒಂದು ವರದಿಯ ಪ್ರಕಾರ, ಟಿಕಾಯತ್ ಮೇಲಿನ ದಾಳಿಗೆ ಸಂಬಂಧಿಸಿದಂತೆ ಪೊಲೀಸ್ ದಾಳಿಯ ಸಂದರ್ಭದಲ್ಲಿ ಉಮಾದೇವಿ ಅವರ ಮನೆಯಿಂದ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ತನಿಖೆಯ ವೇಳೆ ಶಿವಕುಮಾರ್ ಮೇಲೆ ಕೊಲೆ ಆರೋಪ ಹೊರಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವುದು ಬೆಳಕಿಗೆ ಬಂದಿದೆ. ಉತ್ತಮ ನಡುವಳಿಕೆಗಾಗಿ ಅವರನ್ನು 2015ರಲ್ಲಿ ಬಿಡುಗಡೆ ಮಾಡಲಾಗಿತ್ತು.
ಭಾರತೀಯ ಕಿಸಾನ್ ಯೂನಿಯನ್ (BKU)ನ ರಾಷ್ಟ್ರೀಯ ವಕ್ತಾರರಾಗಿರುವ ರಾಕೇಶ್ ಟಿಕಾಯಿತ್, ಸುಮಾರು ವರ್ಷಗಳ ಕಾಲ ನಡೆದ ಆಂದೋಲನದ ಪರಿಣಾಮವಾಗಿ ಕೇಂದ್ರ ಸರ್ಕಾರವು ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಪಡಿಸಿತ್ತು.
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ












Click it and Unblock the Notifications